AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರವಾಯ್ತು ಬದುಕು: ರಾತ್ರೋರಾತ್ರಿ ಸ್ಟಾರ್ ಆಗಿದ್ದ ‘ಕಚ್ಚಾ ಬಾದಾಮ್​’ ಗಾಯಕನಿಗೆ ಇದೆಂಥಾ ದುಸ್ಥಿತಿ

Bhuban Badyakar: ಭುಬನ್ ಅವರು ಇದೇ ಹಾಡನ್ನು ಹೇಳಿ, ನೆಲಗಡಲೆ ಮಾರಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಆದರೆ, ಈಗ ಅವರು ಈ ಹಾಡನ್ನು ಹಾಡುವಂತಿಲ್ಲ.

ಭೀಕರವಾಯ್ತು ಬದುಕು: ರಾತ್ರೋರಾತ್ರಿ ಸ್ಟಾರ್ ಆಗಿದ್ದ ‘ಕಚ್ಚಾ ಬಾದಾಮ್​’ ಗಾಯಕನಿಗೆ ಇದೆಂಥಾ ದುಸ್ಥಿತಿ
ಭುಬ್ಯಾನ್
ರಾಜೇಶ್ ದುಗ್ಗುಮನೆ
| Edited By: |

Updated on:Mar 10, 2023 | 8:03 AM

Share

ಇತ್ತೀಚಿನ ವರ್ಷಗಳಲ್ಲಿ ಸೋಶಿಯಲ್ ಮೀಡಿಯಾ ವ್ಯಾಪ್ತಿ ಹಿರಿದಾಗಿದೆ. ಇದರಿಂದ ಅನೇಕರಿಗೆ ಜನಪ್ರಿಯತೆ ಸಿಗುತ್ತಿದೆ. ರಾತ್ರಿ ಬೆಳಗಾಗುವುದರೊಳಗೆ ಅನೇಕರು ಸ್ಟಾರ್ ಆದ ಉದಾಹರಣೆ ಇದೆ. ‘ಕಚ್ಚಾ ಬಾದಮ್​’ ಹಾಡನ್ನು (Kacha Badam) ಹಾಡುವ ಮೂಲಕ ಪಶ್ಚಿಮ ಬಂಗಾಳದ ಭುಬನ್ ಬಡ್ಯಾಕರ್ ಅವರು ರಾತ್ರೋರಾತ್ರಿ ಸ್ಟಾರ್ ಆಗಿದ್ದರು. ಎಲ್ಲೆಲ್ಲೂ ಅವರದ್ದೇ ಸುದ್ದಿ ಆಗಿತ್ತು. ಇನ್​ಸ್ಟಾಗ್ರಾಮ್ ರೀಲ್ಸ್​​ನಲ್ಲಿ ಈ ಸಾಂಗ್ ಹೆಚ್ಚು ಪ್ರಚಲಿತದಲ್ಲಿತ್ತು. ಈ ಸಂಭ್ರಮ ಕೆಲವೇ ಕೆಲವು ತಿಂಗಳು ಮಾತ್ರ ಇತ್ತು. ಈಗ ‘ಕಚ್ಚಾ ಬಾದಾಮ್’ ಗಾಯಕನ ಪರಿಸ್ಥಿತಿ ಭೀಕರ ಆಗಿದೆ. ಮನೆ ಬಾಡಿಗೆ ಕಟ್ಟಲೂ ಹಣ ಇಲ್ಲದಂತಾಗಿದೆ.

ಪಶ್ಚಿಮ ಬಂಗಾಳದ ಹಳ್ಳಿಗಳಲ್ಲಿ ಹಾಡು ಹೇಳುತ್ತ ಕಡಲೆಕಾಯಿ (ಶೇಂಗಾ) ಮಾರುತ್ತಾ ಭುಬನ್ ಜೀವನ ಸಾಗಿಸುತ್ತಿದ್ದವರು. ಈ ಹಾಡನ್ನು ಊರಿನವರೇ ಕೆಲವರು ರೆಕಾರ್ಡ್​ ಮಾಡಿ ಸೋಶಿಯಲ್​ ಮೀಡಿಯಾದಲ್ಲಿ ಅಪ್​ಲೋಡ್​ ಮಾಡಿದ್ದರು. ಈ ವಿಡಿಯೋ ಸಖತ್​ ಸೆನ್ಸೇಷನ್​ ಸೃಷ್ಟಿ ಮಾಡಿತ್ತು. ಹಾಡಿನ ಸಾಹಿತ್ಯ ಅರ್ಥವಾಗದಿದ್ದರೂ, ಭುಬನ್​ ಹಾಡಿದ ರೀತಿ ಎಲ್ಲರಿಗೂ ಇಷ್ಟವಾಗಿತ್ತು. ಸೋಶಿಯಲ್​ ಮೀಡಿಯಾದಲ್ಲಿ ಈ ಹಾಡು ಸಖತ್​ ಸೌಂಡ್ ಮಾಡಿತ್ತು. ಭುಬನ್ ಅವರನ್ನು ಇಟ್ಟುಕೊಂಡು ‘ಕಚ್ಚಾ ಬಾದಾಮ್​..’ ವಿಡಿಯೋ ಸಾಂಗ್ ಮಾಡಲಾಗಿದೆ. ಈಗ ಜನಪ್ರಿಯತೆ ಅವರಿಗೆ ಮುಳುವಾಗಿದೆ.

ಭುಬನ್ ಈ ಹಾಡನ್ನು ಹಾಡುವಂತಿಲ್ಲ!

ಭುಬನ್ ಅವರು ಇದೇ ಹಾಡನ್ನು ಹೇಳಿ, ನೆಲಗಡಲೆ ಮಾರಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಆದರೆ, ಈಗ ಅವರು ಈ ಹಾಡನ್ನು ಹಾಡುವಂತಿಲ್ಲ. ಕಂಪನಿಯೊಂದು ಈ ಹಾಡಿನ ಹಕ್ಕು ಪಡೆದಿದ್ದು, ಇದರ ಪ್ರಕಾರ ಭುಬನ್ ಅವರು ಇದನ್ನು ಎಂದಿಗೂ ಹಾಡುವಂತಿಲ್ಲ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ‘ಕಚ್ಚಾ ಬಾದಾಮ್​’ ಹುಡುಗಿಯ ಹೊಸ ವಿಡಿಯೋ ವೈರಲ್; ಡ್ರೆಸ್ ನೋಡಿ ಖುಷಿಪಟ್ಟ ಫ್ಯಾನ್ಸ್​

‘ದುಬರಾಜಪುರದಲ್ಲಿ ನಾನು ಬಾಡಿಗೆ ಮನೆಯಲ್ಲಿ ವಾಸವಾಗಿದ್ದೇನೆ. ಬಾಡಿಗೆಗೆ ಸಾಕಷ್ಟು ಹಣ ಖರ್ಚು ಮಾಡುತ್ತಿದ್ದೇನೆ. ನನಗೆ ಆದಾಯವೇ ಇಲ್ಲದಂತಾಗಿದೆ. ಇನ್ನು ಎಷ್ಟು ದಿನ ಈ ರೀತಿ ನಡೆಯುತ್ತದೆ ಎಂಬುದು ನನಗೆ ತಿಳಿದಿಲ್ಲ. ‘ಕಚ್ಚಾ ಬಾದಾಮ್..’ ಹಾಡು ನನಗೆ ಜನಪ್ರಿಯತೆ ನೀಡಿದೆ. ಆದರೆ ಈಗ ಆ ಕಾರಣದಿಂದ ನನ್ನ ಮನೆಯಲ್ಲಿ ಇರಲು ನನಗೆ ಸಾಧ್ಯವಾಗುತ್ತಿಲ್ಲ’ ಎಂದು ದುಃಖ ತೋಡಿಕೊಂಡಿದ್ದಾರೆ ಭುಬನ್.

ಇದನ್ನೂ ಓದಿ: ಮಾಧುರಿ ದೀಕ್ಷಿತ್​ಗೂ ಹತ್ತಿದೆ ‘ಕಚ್ಚಾ ಬಾದಾಮ್​’ ಗುಂಗು; ರಿತೇಶ್​​ ಜತೆ ಮಸ್ತ್​ ಡ್ಯಾನ್ಸ್​; ಇಲ್ಲಿದೆ ವಿಡಿಯೋ

ಪಶ್ಚಿಮ ಬಂಗಾಳದ ಕಂಪನಿಯೊಂದು ‘ಕಚ್ಚಾ ಬಾದಾಮ್..’ ಹಾಡಿನ ಹಕ್ಕನ್ನು ಪಡೆದಿದೆಯಂತೆ. ಇದರ ಪ್ರಕಾರ ಭುಬನ್ ಈ ಹಾಡನ್ನು ಹಾಡುವಂತಿಲ್ಲ. ನನ್ನ ಒಪ್ಪಿಗೆ ಇಲ್ಲದೆ ಈ ಹಾಡಿನ ಹಕ್ಕನ್ನು ಯಾರು ಕೊಂಡುಕೊಳ್ಳುತ್ತಾರೆ ಅನ್ನೋದು ಅವರ ಪ್ರಶ್ನೆ. ‘ನಾನು ವಿದ್ಯಾವಂತನಲ್ಲ. ನನಗೆ ಇಂಗ್ಲಿಷ್ ಓದಲೂ ಬರುವುದಿಲ್ಲ. ನನ್ನ ಹಾಡನ್ನು ಖರೀದಿಸಿರುವುದಾಗಿ ಅವರು ಹೇಳುತ್ತಿದ್ದಾರೆ. ನಾನು ಅವರನ್ನು ಫೋನ್ ಮೂಲಕ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ’ ಎಂದು ಬೇಸರತೋಡಿಕೊಂಡಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:30 am, Fri, 10 March 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು