AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ಸೂದ್​ ಮಾತ್ರವಲ್ಲ, ಕರುನಾಡಿಗೆ ಕೊವಿಡ್ ಕಷ್ಟದಲ್ಲಿ ನೆರವಾದ ಇನ್ನಿಬ್ಬರು ಬಾಲಿವುಡ್​ ಸ್ಟಾರ್​ಗಳು

ಕೊವಿಡ್​ನಿಂದಾಗಿ ಕಷ್ಟಪಡುತ್ತಿರುವ ಹಲವು ಪ್ರದೇಶಗಳ ಜನರಿಗೆ ಭೂಮಿ ಪಡ್ನೇಕರ್​ ಸಹಾಯ ಮಾಡಿದ್ದಾರೆ. ಈಗ ಅವರು ಕಪಿಲ್​ ಶರ್ಮಾ ಜೊತೆಗೂಡಿ ಕರ್ನಾಟಕದ ಜನರ ಸಹಾಯಕ್ಕೆ ಧಾವಿಸಿದ್ದಾರೆ.

ಸೋನು ಸೂದ್​ ಮಾತ್ರವಲ್ಲ, ಕರುನಾಡಿಗೆ ಕೊವಿಡ್ ಕಷ್ಟದಲ್ಲಿ ನೆರವಾದ ಇನ್ನಿಬ್ಬರು ಬಾಲಿವುಡ್​ ಸ್ಟಾರ್​ಗಳು
ಭೂಮಿ ಪೆಡ್ನೇಕರ್​- ಕಪಿಲ್​ ಶರ್ಮಾ
ಮದನ್​ ಕುಮಾರ್​
|

Updated on: May 28, 2021 | 9:00 AM

Share

ಕೊರೊನಾ ವೈರಸ್​ ಎರಡನೇ ಅಲೆಯಿಂದಾಗಿ ತೀವ್ರ ಹೊಡೆತ ತಿಂದಿರುವ ರಾಜ್ಯಗಳ ಪೈಕಿ ಕರ್ನಾಟಕ ಕೂಡ ಮುಂಚೂಣಿಯಲ್ಲಿದೆ. ಬೆಡ್​ ಮತ್ತು ಆಕ್ಸಿಜನ್​ ಸಿಲಿಂಡರ್​ಗಳ ಕೊರತೆಯಿಂದಾಗಿ ಬೆಂಗಳೂರಿನಲ್ಲಿ ಅನೇಕರು ಅಸುನೀಗಿದ್ದಾರೆ. ಇಂಥ ಗಂಭೀರ ಪರಿಸ್ಥಿತಿಯಲ್ಲಿ ಅನೇಕ ಸ್ಟಾರ್​ ಕಲಾವಿದರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ನಟ ಸೋನು ಸೂದ್​ ಹಲವು ಬಗೆಯಲ್ಲಿ ಕರ್ನಾಟಕಕ್ಕೆ ನೆರವಾಗುತ್ತಿದ್ದಾರೆ. ಸೋನು ಮಾತ್ರವಲ್ಲದೆ ಇನ್ನೂ ಕೆಲವು ಬಾಲಿವುಡ್​ ಸ್ಟಾರ್​ಗಳು ನೆರವು ನೀಡುತ್ತಿದ್ದಾರೆ. ಹಾಸ್ಯ ಕಲಾವಿದ, ಟಿವಿ ಕಾರ್ಯಕ್ರಮಗಳ ನಿರೂಪಕ ಕಪಿಲ್​ ಶರ್ಮಾ ಹಾಗೂ ನಟಿ ಭೂಮಿ ಪೆಡ್ನೇಕರ್​ ಕೂಡ ಕರುನಾಡಿಗೆ ನೆರವು ನೀಡುತ್ತಿದ್ದಾರೆ.

ಕೊವಿಡ್​ನಿಂದಾಗಿ ಕಷ್ಟಪಡುತ್ತಿರುವ ಹಲವು ಪ್ರದೇಶಗಳ ಜನರಿಗೆ ಭೂಮಿ ಪೆಡ್ನೇಕರ್​ ಸಹಾಯ ಮಾಡಿದ್ದಾರೆ. ಈಗ ಅವರು ಕಪಿಲ್​ ಶರ್ಮಾ ಜೊತೆಗೂಡಿ ಕರ್ನಾಟಕದ ಜನರ ಸಹಾಯಕ್ಕೆ ಧಾವಿಸಿದ್ದಾರೆ. ಇಬ್ಬರೂ ಜೊತೆಯಾಗಿ ಕರುನಾಡಿನ ಹಲವು ಆಸ್ಪತ್ರೆಗಳಿಗೆ ಆಕ್ಸಿಜನ್​ ಬಸ್​ಗಳನ್ನು ಬದಗಿಸುತ್ತಿದ್ದಾರೆ. ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಮುಂತಾದ ಕಡೆಗಳಲ್ಲಿ ಆಸ್ಪತ್ರೆಗಳ ಎದುರು ಆಕ್ಸಿಜನ್​ ಬಸ್​ಗಳು ಸದಾ ಸಿದ್ಧವಾಗಿರುವಂತೆ ನೋಡಿಕೊಳ್ಳಲು ಭೂಮಿ ಪೆಡ್ನೇಕರ್​ ಮತ್ತು ಕಪಿಲ್​ ಶರ್ಮಾ ವ್ಯವಸ್ಥೆ ಮಾಡುತ್ತಿದ್ದಾರೆ.

‘ಕೊವಿಡ್​ ಎರಡನೇ ಅಲೆ ಈಗ ಗ್ರಾಮೀಣ ಭಾಗಗಳಿಗೆ ಹಬ್ಬಿದೆ. ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜನ್​ ಸೇರಿದಂತೆ ಕೆಲವು ಅಗತ್ಯ ಸೌಲಭ್ಯಗಳ ಕೊರತೆ ಇದೆ. ಹಾಗಾಗಿ ಅಂಥ ಕಡೆಗಳಿಗೆ ನಾವು ಆಕ್ಸಿಜನ್​ ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ಕರ್ನಾಟಕದ ಗ್ರಾಮೀಣ ಪ್ರದೇಶ ಮತ್ತು ಜಿಲ್ಲಾ ಕೇಂದ್ರಗಳ ಕಡೆಗೆ ನಾವು ಗಮನ ಹರಿಸುತ್ತಿದ್ದೇವೆ’ ಎಂದು ಭೂಮಿ ಪೆಡ್ನೇಕರ್​ ಹೇಳಿದ್ದಾರೆ.

‘ಬೆಡ್​ ಸಿಗುವುದಕ್ಕೂ ಮುನ್ನ ಆಸ್ಪತ್ರೆಯ ಎದುರು ಕಾಯುತ್ತಿರುವ ಸೋಂಕಿತರಿಗೆ ನಮ್ಮ ಬಸ್​ಗಳಿಂದ ಸಹಾಯ ಆಗುತ್ತದೆ. ಅದರಲ್ಲಿ ಆಕ್ಸಿಜನ್​ ಕಾನ್ಸಂಟ್ರೇಟರ್​ಗಳನ್ನು ಅಳವಡಿಸಿರುತ್ತೇವೆ. ಈ ಕಾರ್ಯದಲ್ಲಿ ಕಪಿಲ್ ಶರ್ಮಾ ಕೈ ಜೋಡಿಸಿರುವುದು ಸಂತಸದ ವಿಚಾರ’ ಎಂದಿದ್ದಾರೆ ಭೂಮಿ. ಇತ್ತೀಚೆಗೆ ನಟ ಸೋನು ಸೂದ್​ ಅವರು ಬೆಂಗಳೂರಿನ 5 ಸಾವಿರ ಜನರಿಗೆ ಪ್ರತಿ ದಿನ ಊಟ ಒದಗಿಸುವ ಕಾರ್ಯ ಆರಂಭಿಸಿದರು. ಸೂದ್​ ಚಾರಿಟಿ ಫೌಂಡೇಷನ್​ ಕಡೆಯಿಂದ ಈ ಕಾರ್ಯ ನಡೆಯುತ್ತಿದೆ.

View this post on Instagram

A post shared by Kapil Sharma (@kapilsharma)

ಇದಕ್ಕೆ ‘ಫುಡ್​ ಫ್ರಮ್​ ಸೂದ್​’ ಎಂದು ಹೆಸರಿಡಲಾಗಿದೆ. ಈ ಕಾರ್ಯಕ್ಕೆ ಬೀಜಿಂಗ್​ ಬೈಟ್ಸ್​ ರೆಸ್ಟೊರೆಂಟ್​ ಹಾಗೂ ಕರ್ನಾಟಕ ರಾಜ್ಯ, ರೈಲ್ವೇ ಪೊಲೀಸರು ಸಾಥ್ ನೀಡಿದ್ದಾರೆ. ಸೂದ್​ ಚಾರಿಟಿ ಫೌಂಡೇಷನ್ ಸ್ವಯಂ ಸೇವಕರ ಈ ಕೆಲಸಕ್ಕೆ ಬೀಜಿಂಗ್​ ಬೈಟ್ಸ್​ ರೆಸ್ಟೊರೆಂಟ್​ ಮಾಲೀಕ ಇಬ್ರಾಹಿಂ ಕೈ ಜೋಡಿಸಿದ್ದಾರೆ. ಪ್ರತಿ ದಿನ 5 ಸಾವಿರ ಜನರಿಗೆ ಉಡುಗೆ ಮಾಡಲು ಇಬ್ರಾಹಿಂ ಅವರು ಉಚಿತವಾಗಿ ತಮ್ಮ ರೆಸ್ಟೊರೆಂಟ್​ ಬಿಟ್ಟುಕೊಟ್ಟಿದ್ದಾರೆ.

ಇದನ್ನೂ ಓದಿ:

Sonu Sood: ಸೋನು ಸೂದ್​ ಕಾಲಿಗೆ ಬೀಳಲು ಮುಂದಾದ ಜನ; ಕೈ ಮುಗಿದು ದೊಡ್ಡವರಾದ ರಿಯಲ್​ ಹೀರೋ

Sonu Sood: ಸೋನು ಸೂದ್​ ಹೆಸರಲ್ಲಿ ಮಹಾಮೋಸ; ಕೊರೊನಾ ಕಾಲದಲ್ಲೂ ದುಡ್ಡು ಕಬಳಿಸಿದ ಕಿಡಿಗೇಡಿಗಳು

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?