AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಶೆಟ್ಟಿ ಸಿನಿಮಾಗೆ ಬಾಲಿವುಡ್ ನಟಿ ಎಂಟ್ರಿ: ಬೆಳವಡಿ ಮಲ್ಲಮ್ಮ ಪಾತ್ರದಲ್ಲಿ ಭೂಮಿ ಪೆಡ್ನೇಕರ್

ಈ ವರ್ಷದ ಕೊನೆಯಲ್ಲಿ ‘ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ. ಶಿವಾಜಿ ಪಾತ್ರದಲ್ಲಿ ರಿಷಬ್ ಶೆಟ್ಟಿ ಅವರನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಭೂಮಿ ಪೆಡ್ನೇಕರ್ ಅವರು ಬೆಳವಡಿ ಮಲ್ಲಮ್ಮನಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಪಾತ್ರ ಸಿಕ್ಕಿದ್ದರಿಂದ ನಿರ್ದೇಶಕ ಸಂದೀಪ್ ಸಿಂಗ್ ಕಥೆ ಹೇಳಿದ ತಕ್ಷಣವೇ ಒಪ್ಪಿಕೊಂಡಿದ್ದಾಗಿ ಭೂಮಿ ತಿಳಿಸಿದ್ದಾರೆ.

ರಿಷಬ್ ಶೆಟ್ಟಿ ಸಿನಿಮಾಗೆ ಬಾಲಿವುಡ್ ನಟಿ ಎಂಟ್ರಿ: ಬೆಳವಡಿ ಮಲ್ಲಮ್ಮ ಪಾತ್ರದಲ್ಲಿ ಭೂಮಿ ಪೆಡ್ನೇಕರ್
Bhumi Pednekar, Rishab Shetty
ಮದನ್​ ಕುಮಾರ್​
|

Updated on: Jul 27, 2026 | 9:44 PM

Share

ನ್ಯಾಷನಲ್ ಅವಾರ್ಡ್ ವಿಜೇತ ನಟ ರಿಷಬ್ ಶೆಟ್ಟಿ (Rishab Shetty) ಅಭಿನಯದ ಬಹುನಿರೀಕ್ಷಿತ ಐರಿಹಾಸಿಕ ಸಿನಿಮಾ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ (The Pride of Bharat: Chhatrapati Shivaji Maharaj) ಚಿತ್ರತಂಡಕ್ಕೆ ಇದೀಗ ಬಾಲಿವುಡ್ ನಟಿ ಭೂಮಿ ಪೆಡ್ನೇಕರ್ (Bhumi Pednekar) ಸೇರ್ಪಡೆಯಾಗಿದ್ದಾರೆ. ಈ ಬಿಗ್ ಬಜೆಟ್ ಸಿನಿಮಾದಲ್ಲಿ ಅವರು ಕರ್ನಾಟಕದ ಧೀರ ಮಹಿಳೆ ಬೆಳವಡಿ ಮಲ್ಲಮ್ಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪಾತ್ರ ಸಿಕ್ಕಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಸಂದೀಪ್ ಸಿಂಗ್ ನಿರ್ದೇಶಿಸಿ, ನಿರ್ಮಿಸುತ್ತಿರುವ ‘ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾ ಮಹಾರಾಷ್ಟ್ರ ಹಾಗೂ ಕರ್ನಾಟಕದ ಇತಿಹಾಸದ ಮಹತ್ವದ ಘಟನೆಗಳನ್ನು ಆಧರಿಸಿದೆ. ಛತ್ರಪತಿ ಶಿವಾಜಿ ಮಹಾರಾಜರ ಜೀವನ ಹಾಗೂ ಸಾಧನೆಗಳ ಸುತ್ತ ಸಾಗುವ ಈ ಬೃಹತ್ ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರು ಶಿವಾಜಿ ಮಹಾರಾಜರಾಗಿ ಮಿಂಚಲಿದ್ದು, ಅರ್ಜುನ್ ರಾಂಪಾಲ್ ಮತ್ತು ವಿವೇಕ್ ಒಬೆರಾಯ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

‘ಕಾಂತಾರ’ ಫ್ಯಾನ್ ಎಂದ ಭೂಮಿ ಪೆಡ್ನೇಕರ್:

‘ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಬಗ್ಗೆ ಸಂತಸ ಹಂಚಿಕೊಂಡಿರುವ ಭೂಮಿ ಪೆಡ್ನೇಕರ್, ‘ಶಿವಾಜಿ ಮಹಾರಾಜರ ಜೀವನಾಧಾರಿತ ಈ ಐತಿಹಾಸಿಕ ಚಿತ್ರದಲ್ಲಿ ಭಾಗಿಯಾಗುತ್ತಿರುವುದು ನನ್ನ ಪಾಲಿನ ಗೌರವ. ಅದರಲ್ಲಿಯೂ ಕರ್ನಾಟಕದ ಸಾಹಸಿ ವೀರಾಂಗನೆ ಬೆಳವಡಿ ಮಲ್ಲಮ್ಮ ಅವರ ಪಾತ್ರವನ್ನು ತೆರೆಮೇಲೆ ತರುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ. ನಾನು ಕಾಂತಾರ ಸಿನಿಮಾದ ದೊಡ್ಡ ಫ್ಯಾನ್. ಅದರಲ್ಲಿ ರಿಷಬ್ ಶೆಟ್ಟಿ ಅವರ ಅಭಿನಯ ನನ್ನನ್ನು ಬೆರಗುಗೊಳಿಸಿತ್ತು’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಿಷಬ್ ಶೆಟ್ಟಿ ನಟನೆಯ ‘ಛತ್ರಪತಿ ಶಿವಾಜಿ ಮಹಾರಾಜ್’ ಚಿತ್ರಕ್ಕೆ ‘ಗೇಮ್ ಆಫ್ ಥ್ರೋನ್ಸ್’ ಸಾಹಸ ನಿರ್ದೇಶಕ

ಎರಡು ಭಾಗಗಳಲ್ಲಿ ಅದ್ಧೂರಿ ಸಿನಿಮಾ:

ಈ ಚಿತ್ರವನ್ನು ಎರಡು ಭಾಗಗಳಲ್ಲಿ ತೆರೆಗೆ ತರಲು ಚಿತ್ರತಂಡ ಯೋಜಿಸಿದೆ. ರಿಷಿ ವಿರ್ಮಾನಿ ಚಿತ್ರಕಥೆ ಬರೆಯುತ್ತಿದ್ದು, ರಾಷ್ಟ್ರಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಪ್ರಸೂನ್ ಜೋಶಿ ಸಾಹಿತ್ಯ ಒದಗಿಸುತ್ತಿದ್ದಾರೆ. ದೊಡ್ಡ ಮಟ್ಟದ ತಾಂತ್ರಿಕ ತಂಡದೊಂದಿಗೆ ಸಿನಿಮಾ ಪ್ರೀ-ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು