AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧದಿಂದ ಜೋರ್ಡನ್​ ಅಲ್ಲಿ ‘NTR-Neel’ ಚಿತ್ರಕ್ಕೆ ತೊಂದರೆ? ಸಹಾಯಕ್ಕೆ ಬಂದ್ರಂತೆ ಟ್ರಂಪ್

ಪ್ರಶಾಂತ್ ನೀಲ್ ನಿರ್ದೇಶನದ, ಜೂನಿಯರ್ NTR ನಟನೆಯ ಬಹು ನಿರೀಕ್ಷಿತ ಚಿತ್ರದ ಕುರಿತು ಛಾಯಾಗ್ರಾಹಕ ಭುವನ್ ಗೌಡ ಹೊಸ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಜೋರ್ಡನ್‌ನಲ್ಲಿ ಚಿತ್ರೀಕರಣ ನಡೆಸಿದ್ದಾಗಿ ಅವರು ದೃಢಪಡಿಸಿದ್ದಾರೆ. 'ಡ್ರ್ಯಾಗನ್' ಎಂಬ ಟೈಟಲ್‌ಗೆ ಭುವನ್ ಆಕ್ಷೇಪಿಸದೇ ಇರುವುದು, ಅದೇ ಚಿತ್ರದ ಶೀರ್ಷಿಕೆಯಾಗಿರಬಹುದು ಎಂಬ ಕುತೂಹಲ ಮೂಡಿಸಿದೆ.

ಯುದ್ಧದಿಂದ ಜೋರ್ಡನ್​ ಅಲ್ಲಿ ‘NTR-Neel’ ಚಿತ್ರಕ್ಕೆ ತೊಂದರೆ? ಸಹಾಯಕ್ಕೆ ಬಂದ್ರಂತೆ ಟ್ರಂಪ್
ಡ್ರ್ಯಾಗನ್ ಟೀಂ
ರಾಜೇಶ್ ದುಗ್ಗುಮನೆ
|

Updated on:Mar 17, 2026 | 9:00 AM

Share

ಪ್ರಶಾಂತ್ ನೀಲ್ ಅವರು ಸದ್ಯ ಜೂನಿಯರ್ ಎನ್​​ಟಿಆರ್ (JR NTR) ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ದೊಡ್ಡ ಬಜೆಟ್​ ಅಲ್ಲಿ ನಿರ್ಮಾಣ ಆಗುತ್ತಿದ್ದು, ಮೈತ್ರಿ ಮೂವೀ ಮೇಕರ್ಸ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಸಿನಿಮಾ ಬಗ್ಗೆ ಚಿತ್ರದ ಛಾಯಾಗ್ರಾಹಕ ಭುವನ್ ಗೌಡ ಅವರು ಮಾತನಾಡಿದ್ದಾರೆ. ಇತ್ತೀಚೆಗೆ ಅವರು ಜೋರ್ಡನ್ ಶೂಟ್​​​ನಲ್ಲಿ ಭಾಗಿಯಾಗಿದ್ದಾಗಿ ರಿವೀಲ್ ಮಾಡಿದ್ದಾರೆ.

ಪ್ರಶಾಂತ್ ನೀಲ್ ಅವರು ಮುಂದಿನ ಸಿನಿಮಾ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಿಟ್ಟುಕೊಟ್ಟಿಲ್ಲ. ಇತ್ತೀಚೆಗೆ ಉತ್ತರ ಕನ್ನಡದ ಕುಮುಟಾದಲ್ಲಿ ಶೂಟ್ ನಡೆದಿದೆ ಎಂದು ಹೇಳಲಾಗಿತ್ತು. ಆ ಬಳಿಕ ತಂಡ ವಿವಿಧ ಕಡೆಗಳಲ್ಲಿ ಚಿತ್ರೀಕರಣ ಮಾಡಿದೆ. ವಿದೇಶದಲ್ಲೂ ಶೂಟಿಂಗ್ ನಡೆದಿದೆ. ಈ ಸಿನಿಮಾ ಬಗ್ಗೆ ಈಗ ಕ್ಯಾಮೆರಾಮೆನ್ ಭುವನ್ ಗೌಡ ವಿವರಿಸಿದ್ದಾರೆ.

ಇದನ್ನೂ ಓದಿ: ಜೂ ಎನ್​​ಟಿಆರ್ ಸಿನಿಮಾಕ್ಕೆ ಬಾಲಿವುಡ್​​ ನಟನ ಕರೆತಂದ ಪ್ರಶಾಂತ್ ನೀಲ್: ಯಾರದು?

ಇತ್ತೀಚೆಗೆ ಭುವನ್ ಮಾಲ್ ಒಂದರಲ್ಲಿ ಅಂಗಡಿ ಉದ್ಘಾಟನೆಗೆ ತೆರಳಿದ್ದರು. ಈ ವೇಳೆ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ‘ಜೋರ್ಡನ್​ ಅಲ್ಲಿ ನಾವು ಶೂಟಿಂಗ್​​ಗೆ ಹೋಗಿದ್ದೆವು’ ಎಂದು ಹೇಳಿದರು ಭುವನ್. ‘ಯುದ್ಧದಿಂದ ಚಿತ್ರೀಕರಣ ನಿಂತಿತು ಎಂಬ ಮಾತಿದೆಯಲ್ಲ’ ಎಂದು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ‘ನಾವು ಇಲ್ಲಿ ಬಂದು ಲ್ಯಾಂಡ್​ ಆದ ಬಳಿಕ ಯುದ್ಧ ಶುರುವಾಯಿತು’ ಎಂದು ಭುವನ್ ಹೇಳಿದರು.

‘ಯಾವುದೇ ತೊಂದರೆ ಎದುರಾಗಿಲ್ಲ ಅಲ್ಲವೇ’ ಎಂದು ಕೇಳಿದಾಗ, ‘ಟ್ರಂಪ್ ಕರೆ ಮಾಡಿದ್ರು. ಯಾವಾಗ ಹೊರಡುತ್ತೀರೋ ಆಗ ಫ್ಲೈಟ್ ಕಳಸ್ತೀನಿ ಅಂದ್ರು’ ಎಂದು ಫನ್ ಆಗಿ ಹೇಳಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಸಿನಿಮಾ ಹೆಸರನ್ನು ‘ಡ್ರ್ಯಾಗನ್’ ಎಂದು ಕರೆದಾಗ ಅವರು ಯಾವುದೇ ವಿರೋಧ ತೋರಿಸಿಲ್ಲ. ಹೀಗಾಗಿ, ಚಿತ್ರಕ್ಕೆ ಇದೇ ಟೈಟಲ್ ಫೈನಲ್ ಆಯಿತೇ ಎಂಬ ಪ್ರಶ್ನೆಯೂ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:59 am, Tue, 17 March 26

Follow Us
ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು
ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!