AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್’ ಪ್ರೋಮೋ ರಿಲೀಸ್; ಗಮನ ಸೆಳೆದ ಹೊಸ ನಿರೂಪಕ

ಒಂದು ದಶಕದ ನಂತರ 'ಬಿಗ್ ಬಾಸ್ ಬಾಂಗ್ಲಾ' ಭರ್ಜರಿಯಾಗಿ ಕಂಬ್ಯಾಕ್ ಮಾಡುತ್ತಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಈ ಶೋನ ನಿರೂಪಕನಾಗಿ ಹೊಸ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ. 125 ಕೋಟಿ ರೂಪಾಯಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎನ್ನಲಾಗಿದ್ದು, ಶೋನ ಟೀಸರ್ ರಿಲೀಸ್ ಆಗಿ ಧೂಳೆಬ್ಬಿಸಿದೆ. ಒಟಿಟಿ ಆವೃತ್ತಿಯನ್ನು ಸ್ಥಗಿತಗೊಳಿಸಿ ಪ್ರಾದೇಶಿಕ ವಿಸ್ತರಣೆಗೆ ಒತ್ತು ನೀಡಲಾಗಿದೆ.

‘ಬಿಗ್ ಬಾಸ್’ ಪ್ರೋಮೋ ರಿಲೀಸ್; ಗಮನ ಸೆಳೆದ ಹೊಸ ನಿರೂಪಕ
ಬಿಗ್ ಬಾಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jun 09, 2026 | 8:46 AM

Share

ರಿಯಾಲಿಟಿ ಶೋ ಪ್ರಿಯರಿಗೆ ಭರ್ಜರಿ ಮನರಂಜನೆ ನೀಡಲು ಸಜ್ಜಾಗಿರುವ ‘ಬಿಗ್ ಬಾಸ್’ ಶೋ ಈಗ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ರೆಡಿಯಾಗಿದೆ. ಬರೋಬ್ಬರಿ ಒಂದು ದಶಕದ ಸುದೀರ್ಘ ಗ್ಯಾಪ್ ನಂತರ ‘ಬಿಗ್ ಬಾಸ್ ಬಾಂಗ್ಲಾ’ ಭರ್ಜರಿಯಾಗಿ ಕಂಬ್ಯಾಕ್ ಮಾಡುತ್ತಿದ್ದು, ಶೋನ ಹೊಸ ಟೀಸರ್ ಅಧಿಕೃತವಾಗಿ ರಿಲೀಸ್ ಆಗಿದೆ. ವಿಶೇಷ ಎಂದರೆ, ಈ ಬಾರಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಈ ಶೋನ ನಿರೂಪಕನಾಗಿ ಹೊಸ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ.

ಸ್ಟಾರ್ ಜಲ್ಶಾ ವಾಹಿನಿಯು ತನ್ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬಿಗ್ ಬಾಸ್ ಬಾಂಗ್ಲಾದ ಮೊದಲ ಪ್ರೋಮೋ ಹಾಗೂ ಟೀಸರ್ ಅನ್ನು ಹಂಚಿಕೊಂಡಿದೆ. ಈ ಟೀಸರ್‌ನಲ್ಲಿ ಹುಲಿಯ ಎಂಟ್ರಿಯ ಜೊತೆಗೆ ಸೂಟ್ ಧರಿಸಿದ ಖದರ್ ಲುಕ್‌ನಲ್ಲಿ ಸೌರವ್ ಗಂಗೂಲಿ ಬಿಗ್ ಬಾಸ್ ಮನೆಗೆ ನಿರೂಪಕನಾಗಿ ಹೆಜ್ಜೆ ಇಟ್ಟಿರುವುದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ವರದಿಗಳ ಪ್ರಕಾರ, ಈ ರಿಯಾಲಿಟಿ ಶೋ ಮುನ್ನಡೆಸಲು ಗಂಗೂಲಿ ಅವರು ಬರೋಬ್ಬರಿ 125 ಕೋಟಿ ರೂಪಾಯಿಯ ಬೃಹತ್ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎನ್ನಲಾಗಿದೆ. ಟೀಸರ್ ನೋಡಿರುವ ವೀಕ್ಷಕರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಎಕ್ಸೈಟ್ ಆಗಿದ್ದು, ಶೋ ನೋಡಲು ಕಾಯುತ್ತಿದ್ದೇವೆ ಎಂದು ಕಮೆಂಟ್ ಮಾಡುತ್ತಿದ್ದಾರೆ.

ಬಿಗ್ ಬಾಸ್ ಪ್ರೋಮೋ

ಭಾರತದಲ್ಲಿ ಈಗಾಗಲೇ ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಮರಾಠಿ ಸೇರಿದಂತೆ 7 ಭಾಷೆಗಳಲ್ಲಿ ಬಿಗ್ ಬಾಸ್ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಈ ಬಗ್ಗೆ ಮಾತನಾಡಿರುವ ಎಂಡೆಮೋಲ್ ಶೈನ್ ಇಂಡಿಯಾದ ಮುಖ್ಯಸ್ಥ ರಿಷಿ ನೇಗಿ, ‘ಪ್ರಾದೇಶಿಕ ಮತ್ತು ಸ್ಥಳೀಯ ಮಾರುಕಟ್ಟೆಯ ವೀಕ್ಷಕರನ್ನು ತಲುಪುವುದು ನಮ್ಮ ಮುಖ್ಯ ಗುರಿಯಾಗಿದೆ’ ಎಂದಿದ್ದಾರೆ. ‘ಬೆಂಗಾಲಿ ಮಾರುಕಟ್ಟೆಯಲ್ಲಿ ಇಡೀ ದೇಶವೇ ಗುರುತಿಸುವಂತಹ ದೊಡ್ಡ ವ್ಯಕ್ತಿ ಶೋ ನಡೆಸಿಕೊಡಲಿದ್ದಾರೆ ಎಂದು ಈ ಹಿಂದೆ ಹೇಳಿದ್ದೆವು. ಅದರಂತೆ ಈಗ ಸೌರವ್ ಗಂಗೂಲಿ ಎಂಟ್ರಿಯಾಗಿದೆ’ ಎಂದಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ಬಿಗ್ ಬಾಸ್ ಪಂಜಾಬಿ ಮತ್ತು ಭೋಜಪುರಿ ಭಾಷೆಗಳಿಗೂ ವಿಸ್ತರಣೆಯಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಗ್ ಬಾಸ್ ಒಟಿಟಿಗೆ ಬ್ರೇಕ್?

ಒಂದೆಡೆ ಪ್ರಾದೇಶಿಕ ಭಾಷೆಗಳಲ್ಲಿ ಬಿಗ್ ಬಾಸ್ ಹವಾ ಜೋರಾಗುತ್ತಿದ್ದರೆ, ಮತ್ತೊಂದೆಡೆ ಬಿಗ್ ಬಾಸ್‌ನ ಡಿಜಿಟಲ್ ಆವೃತ್ತಿಯಾದ ‘ಬಿಗ್ ಬಾಸ್ OTT’ ಶೋ ಅನ್ನು ಈ ಬಾರಿ ಸ್ಥಗಿತಗೊಳಿಸಲು ನಿರ್ಧಾರ ಮಾಡಲಾಗಿದೆ. ಟಿವಿ ಪ್ರೇಕ್ಷಕರು ಮತ್ತು ಒಟಿಟಿ ಪ್ರೇಕ್ಷಕರು ವಿಭಿನ್ನವಾಗಿದ್ದು, ಸದ್ಯಕ್ಕೆ ಟಿವಿ ಮತ್ತು ಜಿಯೋಹಾಟ್‌ಸ್ಟಾರ್‌ಗಳಲ್ಲಿ ನೇರ ಪ್ರಸಾರ ಮಾಡುವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ‘ಬಿಗ್ ಬಾಸ್ ಕನ್ನಡ 13’ ಆಡಿಷನ್: ಈ ಸಲ ಸಾಮಾನ್ಯ ಜನರಿಗೂ ಸಿಗಲಿದೆ ಅವಕಾಶ

ಸದ್ಯಕ್ಕೆ ಬಿಗ್ ಬಾಸ್ ಬಾಂಗ್ಲಾ ಸೀಸನ್ 3ರ ಟೀಸರ್ ರಿಲೀಸ್ ಆಗಿ ಧೂಳೆಬ್ಬಿಸುತ್ತಿದ್ದು, ಶೋನಲ್ಲಿ ಭಾಗವಹಿಸುವ ಸ್ಪರ್ಧಿಗಳು ಯಾರು ಮತ್ತು ಶೋ ಯಾವಾಗ ಆರಂಭವಾಗಲಿದೆ ಎಂಬ ಅಧಿಕೃತ ದಿನಾಂಕಗಳನ್ನು ಟೀಂ ಸದ್ಯದಲ್ಲೇ ಪ್ರಕಟಿಸಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:52 am, Tue, 9 June 26

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು