AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ಸಿಕ್ಕರೂ ರೀಲ್ಸ್ ರಾಣಿ ಸೋನುಗೌಡಗೆ ಇಂದು ಸಹ ಜೈಲೇ ಗತಿ

ಕಾನೂನುಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರು ಆಗಿದ್ದರು ಕೂಡ ಬಿಡುಗಡೆಯ ಭಾಗ್ಯ ದೊರಕಿಲ್ಲ. ಹೀಗಾಗಿ ಇಂದು ಸಹ ಜೈಲೇ ಗತಿ ಆಗಿದೆ. 

ಜಾಮೀನು ಸಿಕ್ಕರೂ ರೀಲ್ಸ್ ರಾಣಿ ಸೋನುಗೌಡಗೆ ಇಂದು ಸಹ ಜೈಲೇ ಗತಿ
ಸೋನುಗೌಡ
ರಾಮು, ಆನೇಕಲ್​
| Edited By: |

Updated on:Apr 05, 2024 | 9:13 PM

Share

ಬೆಂಗಳೂರು, ಏಪ್ರಿಲ್​ 05: ಕಾನೂನುಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda)ಗೆ ಜಾಮೀನು ಮಂಜೂರು ಆಗಿದ್ದರು ಕೂಡ ಬಿಡುಗಡೆಯ ಭಾಗ್ಯ ದೊರಕಿಲ್ಲ. ಹೀಗಾಗಿ ಇಂದು ಸಹ ಜೈಲೇ ಗತಿ ಆಗಿದೆ.  ಸಂಜೆ 7 ಗಂಟೆಯೊಳಗೆ ಜಾಮೀನು ಪ್ರತಿ ತಲುಪಬೇಕಿತ್ತು. ಆದರೆ ಇನ್ನೂ ಸಹ ಜೈಲಧಿಕಾರಿಗಳಿಗೆ ಜಾಮೀನು ಪ್ರತಿ ತಲುಪಿಲ್ಲ. ಹಾಗಾಗಿ ನಾಳೆಯವರೆಗೂ ಸೋನುಗೌಡ ಜೈಲಿನಲ್ಲೇ ಇರಲಿದ್ದು, ಪ್ರಕ್ರಿಯೆ ಪೂರ್ಣಗೊಂಡು ನಾಳೆ ಸಂಜೆ ವೇಳೆಗೆ ರಿಲೀಸ್ ಸಾಧ್ಯತೆ ಇದೆ.

ಬಿಗ್‌ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ನಿನ್ನೆ ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಈ ಕುರಿತಾಗಿ ಆದೇಶ ಸಹ ಹೊರಡಿಸಲಾಗಿತ್ತು. ಜೈಲಿನಿಂದ ಇಂದು ಬಿಡುಗಡೆ ಸಾಧ್ಯತೆ ಎಂದು ಹೇಳಲಾಗಿತ್ತು. ಆದರೆ ಜಾಮೀನಿನ ಷರತ್ತುಗಳು ಪೂರೈಕೆಯಾಗದ ಹಿನ್ನೆಲೆ ಇಂದು ಕೂಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಳಿಯುವಂತಾಗಿದೆ.

ಸೋನು ಶ್ರೀನಿವಾಸ್ ಗೌಡಗೆ ವಿಧಿಸಿದ ಜಾಮೀನು ಷರತ್ತುಗಳೇನು?

1 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ ಮೇಲೆ ಸೋನು ಶ್ರೀನಿವಾಸ್ ಗೌಡಗೆ ಜಾಮೀನು ನೀಡಲು ಕೋರ್ಟ್ ಒಪ್ಪಿಗೆ ಸೂಚಿಸಿದೆ. ಈ ಷರತ್ತುಗಳನ್ನು ಪಾಲಿಸಿದ ಬಳಿಕ ಅವರು ಬಿಡುಗಡೆ ಆಗಲಿದ್ದಾರೆ.

ಇದನ್ನೂ ಓದಿ: ಮಗು ದತ್ತು ಪಡೆದ ಪ್ರಕರಣ: ಸೋನು ಶ್ರೀನಿವಾಸ್ ಗೌಡಗೆ ಕೋರ್ಟ್ ಬಿಗ್ ರಿಲೀಫ್

ಸೋನು ಶ್ರೀನಿವಾಸ್ ಗೌಡ ವಿರುದ್ಧ ಗೀತಾ ಎನ್ನುವವರು ದೂರು ನೀಡಿದ್ದರು. ಸೋನು ಅಕ್ರಮವಾಗಿ ಮಗುವನ್ನ ದತ್ತು ಪಡೆದಿದ್ದಾರೆ. ದತ್ತು ಪಡೆಯೋವಾಗ ರೂಲ್ಸ್ ಫಾಲೋ ಮಾಡ್ಬೇಕು. ಪೋಷಕರಿಂದ ನೇರವಾಗಿ ಮಗುವನ್ನ ಪಡೆಯಲು ಆಗಲ್ಲ. ಪೋಷಕರು ಕೂಡ ಮಗುವನ್ನ ಕೊಡೋಕೆ ಬರೋದಿಲ್ಲ. ಒಂದು ವೇಳೆ ಮಗು ಪಡೆದ್ರೆ, ಅದು ಕಾನೂನು ಬಾಹಿರ ಎಂದು ಹೇಳಿದ್ದರು.

ಇದನ್ನೂ ಓದಿ: ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

ಆರೋಪದ ಬಗ್ಗೆ ಮಾತನಾಡಿದ್ದ ಸೋನು ಶ್ರೀನಿವಾಸ್ ಗೌಡ, ಕಾನೂನು ಬಾಹಿರವಾಗಿ ಮಗು ದತ್ತು ಪಡೆದಿದ್ದೇನೆ ಅಂತಿದ್ದಾರೆ. ನನ್ನ ವಿರುದ್ಧ ಸುಖಾಸುಮ್ಮನೆ ಆರೋಪ ಮಾಡೋ ಕೆಲಸ ಆಗ್ತಿದೆ. ಬಡ ಹೆಣ್ಣು ಮಗುವನ್ನ ಯೂಸ್​ ಮಾಡಿಕೊಳ್ತಿದ್ದಾರೆ ಅಂತಿದ್ದಾರೆ ಕಿಡಿಕಾರಿದ್ದರು.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:55 pm, Fri, 5 April 24

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?