AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡ ಹೀರೋಗಳು ತಲೆಮರೆಸಿಕೊಂಡಿದ್ದಾರೆ, ಬಾಲಿವುಡ್​ ಉಳಿಯೋದು ನನ್ನಿಂದಲೇ: ಕಂಗನಾ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಬಯೋಪಿಕ್​ 'ತಲೈವಿ'ಯಲ್ಲಿ ಕಂಗನಾ ರಣಾವತ್​ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ರಿಲೀಸ್​ ಆದ ಚಿತ್ರದ ಟ್ರೇಲರ್​ ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

ದೊಡ್ಡ ಹೀರೋಗಳು ತಲೆಮರೆಸಿಕೊಂಡಿದ್ದಾರೆ, ಬಾಲಿವುಡ್​ ಉಳಿಯೋದು ನನ್ನಿಂದಲೇ: ಕಂಗನಾ
ನಟಿ ಕಂಗನಾ
ರಾಜೇಶ್ ದುಗ್ಗುಮನೆ
|

Updated on: Apr 01, 2021 | 5:36 PM

Share

ಕೊರೊನಾ ವೈರಸ್​ ಹಾವಳಿ ಕಡಿಮೆ ಆಗುತ್ತಿದೆ ಎನ್ನುವಾಗಲೇ ಎರಡನೇ ಅಲೆ ಕಾಣಿಸಿಕೊಂಡಿದೆ. ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಸಿನಿಮಾಗಳು ರಿಲೀಸ್​ ಆಗುತ್ತಿವೆ. ಆದರೆ, ಬಾಲಿವುಡ್​ನಲ್ಲಿ ಸ್ಟಾರ್​ ನಟರ ಯಾವುದೇ ಸಿನಿಮಾಗಳು ತೆರೆಕಾಣುತ್ತಿಲ್ಲ. ಈ ವಿಚಾರದ ಬಗ್ಗೆ ನಟಿ ಕಂಗನಾ ರಣಾವತ್​ ಪ್ರತಿಕ್ರಿಯೆ ನೀಡಿದ್ದು, ಸ್ಟಾರ್​ ನಟರು ಈಗಾಗಲೇ ತಲೆಮರಿಸಿಕೊಂಡಿದ್ದಾರೆ. ನನ್ನ ಸಿನಿಮಾದಿಂದ ಬಾಲಿವುಡ್​ ಉಳಿದುಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಬಯೋಪಿಕ್​ ‘ತಲೈವಿ’ಯಲ್ಲಿ ಕಂಗನಾ ರಣಾವತ್​ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ರಿಲೀಸ್​ ಆದ ಚಿತ್ರದ ಟ್ರೇಲರ್​ ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈ ಸಿನಿಮಾ ಏಪ್ರಿಲ್​ 23ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲ್ಪಡಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಇದಕ್ಕೆ ಕಂಗನಾ ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದಾರೆ.

‘ತಲೈವಿ’ ಸಿನಿಮಾ ರಿಲೀಸ್​ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಾಲಿವುಡ್​ ವ್ಯವಹಾರಗಳ ವಿಮರ್ಶಕ ತರಣ್​ ಆದರ್ಶ್​ ಟ್ವೀಟ್​ ಮಾಡಿದ್ದರು. ಇದನ್ನು ರಿಟ್ವೀಟ್​ ಮಾಡಿರುವ ಕಂಗಾನಾ, “ಅವರು ನನ್ನನ್ನು ಇಂಡಸ್ಟ್ರಿಯಿಂದ ಹೊರಹಾಕಲು ಎಲ್ಲಾ ಪ್ರಯತ್ನಗಳನ್ನು ಮಾಡಿದರು. ಗ್ಯಾಂಗ್ ಕಟ್ಟಿಕೊಂಡರು, ನನಗೆ ಕಿರುಕುಳ ನೀಡಿದರು. ಆದರೆ, ಇಂದು ಬಾಲಿವುಡ್ ದೊಡ್ಡ ತಲೆಗಳಾದ ಕರಣ್ ಜೋಹರ್ ಮತ್ತು ಆದಿತ್ಯ ಚೋಪ್ರಾ ತಲೆಮರೆಸಿಕೊಂಡಿದ್ದಾರೆ. ಎಲ್ಲಾ ದೊಡ್ಡ ಹೀರೋಗಳು ಕಾಣೆ ಆಗಿದ್ದಾರೆ. ಆದರೆ ಕಂಗನಾ ರಣಾವತ್ ಮತ್ತು ಅವರ ತಂಡ 100 ಕೋಟಿ ಬಜೆಟ್ ಚಿತ್ರದೊಂದಿಗೆ ಬಾಲಿವುಡ್ ಉಳಿಸಲು ಬರುತ್ತಿದೆ ಎಂದಿದ್ದಾರೆ.

ತಲೈವಿ ಸಿನಿಮಾ ಜಯಲಲಿತಾ ಅವರ ಜೀವನದ ಕಥೆಯನ್ನು ಹೇಳಲಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಸಿನಿಮಾ ಟ್ರೇಲರ್​ ಭರವಸೆ ಮೂಡಿಸಿದೆ. ಎಂ.ಜಿ.ಆರ್​. ಪಾತ್ರದಲ್ಲಿ ಅರವಿಂದ್​ ಸ್ವಾಮಿ ಹಾಗೂ ಕರುಣಾನಿಧಿ ಪಾತ್ರದಲ್ಲಿ ಪ್ರಕಾಶ್ ರಾಜ್​ ಬಣ್ಣ ಹಚ್ಚಿದ್ದಾರೆ. ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡಿದ್ದರು ಎನ್ನುವುದು ವಿಶೇಷ.

ಇದನ್ನೂ ಓದಿ: Kangana Ranaut: ಜಯಲಲಿತಾ ಪಾತ್ರಕ್ಕಾಗಿ 20 ಕೆಜಿ ತೂಕ ಹೆಚ್ಚಿಸಿಕೊಂಡ ಕಂಗನಾ! ಬದಲಾವಣೆ ಕಂಡು ಫ್ಯಾನ್ಸ್​​ ಫಿದಾ

Kangana Ranaut: ವಿವಾದಾತ್ಮಕ ನಟಿ ಕಂಗನಾಗೆ ಮತ್ತೊಂದು ಅತ್ಯುತ್ತಮ ನಟಿ ರಾಷ್ಟ್ರೀಯ ಪ್ರಶಸ್ತಿ

(Big heroes are hiding but our 100cr budget film coming to save Bollywood Says Kangana Ranaut)

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ