AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈರಸಿ ಮಾಡುತ್ತಿದ್ದ ಅತಿ ದೊಡ್ಡ ಜಾಲ ಅರೆಸ್ಟ್; ಇವರ ತಂತ್ರಜ್ಞಾನ ನೋಡಿ ಪೊಲೀಸರೇ ಕಂಗಾಲು

ಫರೀದಾಬಾದ್ ಪೊಲೀಸರ ಪ್ರಕಾರ ಬಂಧಿತರು ಸುಮಾರು 400 ಚಾನೆಲ್​ಗಳಿಂದ ಕಾಂಟೆಂಟ್​ಗಳನ್ನು ಕದಿಯುತ್ತಿದ್ದರು. ಕದಿಯುವ ವಿಧಾನಕ್ಕೆ ತುಂಬಾನೇ ಆಧುನಿಕ ತಂತ್ರಜ್ಞಾನ ಬಳಕೆ ಮಾಡುತ್ತಿದ್ದರಂತೆ!

ಪೈರಸಿ ಮಾಡುತ್ತಿದ್ದ ಅತಿ ದೊಡ್ಡ ಜಾಲ ಅರೆಸ್ಟ್; ಇವರ ತಂತ್ರಜ್ಞಾನ ನೋಡಿ ಪೊಲೀಸರೇ ಕಂಗಾಲು
ಚಿತ್ರಮಂದಿರ
ರಾಜೇಶ್ ದುಗ್ಗುಮನೆ
| Edited By: |

Updated on: Mar 28, 2021 | 4:54 PM

Share

ಪೈರಸಿ ಅನ್ನೋದು ಇಂದು ಚಿತ್ರರಂಗ, ಕಿರುತೆರೆ ಹಾಗೂ ಒಟಿಟಿ ಪ್ಲಾಟ್​​ಫಾರ್ಮ್​ಗೆ ದೊಡ್ಡ ಪಿಡುಗಾಗಿ ಕಾಡುತ್ತಿದೆ. ಇದನ್ನು ಹತ್ತಿಕ್ಕಲು ಪೊಲೀಸರು ಕೂಡ ಪ್ರಯತ್ನ ಮಾಡುತ್ತಿದ್ದಾರೆ. ಇದರ ಭಾಗವಾಗಿ ಅತಿದೊಡ್ಡ ಪೈರಸಿ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರು ಜನರನ್ನು ಅರೆಸ್ಟ್​ ಮಾಡಲಾಗಿದೆ. ಇವರು ಬಳಕೆ ಮಾಡುತ್ತಿದ್ದ ಆಧುನಿಕ ತಂತ್ರಜ್ಞಾನ ನೋಡಿ ಪೊಲೀಸರೇ ಅಚ್ಚರಿ ಹೊರ ಹಾಕಿದ್ದಾರೆ. ಹರಿಯಾಣದ ಫರಿದಾಬಾದ್​ನಲ್ಲಿ ಆರು ಜನರನ್ನು ಅರೆಸ್ಟ್​ ಮಾಡಲಾಗಿದೆ. ರಹಿಸ್ಲೆ ಹೆಸರಿನ ಕಂಪನಿ ಪಿಪಿಇ ಕಿಟ್​ ಮತ್ತು ಮಾಸ್ಕ್​ ತಯಾರಿಸುತ್ತಿದೆ. ಆದರೆ, ಈ ಕಂಪೆನಿಯ ಮೂಲ ಕಸುಬು ಪೈರಸಿ ಮಾಡುವುದು. ಭಾರತ ಹಾಗೂ ವಿದೇಶಿ ಚಾನೆಲ್​ಗಳಿಂದ ಕಾಂಟೆಂಟ್​ಗಳನ್ನು ಕದ್ದು, ಕಡಿಮೆ ಬೆಲೆಗೆ ಅದನ್ನು ಮಾರಾಟ ಮಾಡುವ ಕೆಲಸವನ್ನು ರಹಿಸ್ಲೆ ಮಾಡುತ್ತಿತ್ತು.

ಫರೀದಾಬಾದ್ ಪೊಲೀಸರ ಪ್ರಕಾರ ಬಂಧಿತರು ಸುಮಾರು 400 ಚಾನೆಲ್​ಗಳಿಂದ ಕಾಂಟೆಂಟ್​ಗಳನ್ನು ಕದಿಯುತ್ತಿದ್ದರು. ಕದಿಯುವ ವಿಧಾನಕ್ಕೆ ತುಂಬಾನೇ ಆಧುನಿಕ ತಂತ್ರಜ್ಞಾನ ಬಳಕೆ ಮಾಡುತ್ತಿದ್ದರಂತೆ! ಇವರು, ಭಾರತ ಹಾಗೂ ವಿದೇಶಿ ಚಾನೆಲ್​ಗಳ ಸಿಗ್ನಲ್​ಗಳನ್ನು ಹ್ಯಾಕ್​ ಮಾಡಿ ಚಾನೆಲ್​ಗಳಲ್ಲಿ ಪ್ರಸಾರವಾಗುವ ಮಾಹಿತಿಯನ್ನೇ ಕದ್ದು ಬಿಡುತ್ತಿದ್ದರು.

ಈ ವಿಚಾರಕ್ಕೆ ಸಂಬಂಧಿಸಿ YuppTV ಸೈಬರ್​ ಠಾಣೆಗೆ ದೂರು ನೀಡಿತ್ತು. ಈ ದೂರನ್ನು ಆಧರಿಸಿ ಫರೀದಾಬಾದ್ ಪೊಲೀಸರು ಸಾಕಷ್ಟು ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಈ ಕಂಪನಿಯಿಂದ ಕಾಂಟೆಂಟ್​ಗಳನ್ನು ಮಾರಾಟ ಮಾಡಿದ ಬಗ್ಗೆ ಇ-ಮೇಲ್​ಗಳು ದೊರೆತಿವೆ. GoDaddy.com, informir.eu. ಸೇರಿ ಸಾಕಷ್ಟು ಸೈಟ್​ಗಳು ಈ ಪೈರಸಿಯಲ್ಲಿ ಪಾಲುದಾರರವಾಗಿವೆ ಎನ್ನುವ ಮಾತು ಕೇಳಿ ಬಂದಿದೆ.

ಕೆಲ ವೆಬ್​ಸೈಟ್ ಮೂಲಕವೂ ಈ ಕಾಂಟೆಂಟ್​ಗಳನ್ನು ಮಾರಾಟ ಮಾಡಲಾಗುತ್ತಿತ್ತು. ಕಡಿಮೆ ಬೆಲೆಯಲ್ಲಿ ಸಿಗುತ್ತದೆ ಎನ್ನುವ ಕಾರಣಕ್ಕೆ ವೀಕ್ಷಕರು ಇದಕ್ಕೆ ಲಾಗಿನ್​ ಆಗುತ್ತಿದ್ದರು. ಆದರೆ, ಈ ವೇಳೆ ಪರ್ಸನಲ್​ ಡೇಟಾಗಳನ್ನು ಹ್ಯಾಕ್​ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಇದನ್ನೂ ಓದಿ: Darshan: ಪೈರಸಿ ತಡೆಯೋಕೆ ದರ್ಶನ್​ ಹೊಸ ತಂತ್ರ!; ಇದು ಜಾರಿಗೆ ಬಂದ್ರೆ ಕಳ್ಳರು ಸಿಕ್ಕಿ ಬೀಳೋದು ಪಕ್ಕಾ

ಪೈರಸಿ ಮಾಡಿದ್ರೂ ರಾಬರ್ಟ್​ ಓಡ್ತಿರೋದು, ರಾಯರ ಸನ್ನಿಧಿಯಲ್ಲಿ ಸಿಕ್ಕ ಸನ್ಮಾನ ಎರಡೂ ನನಗೆ ಖುಷಿ ತಂದಿದೆ’

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More