AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಈ ವಾರದ​ ಎಲಿಮಿನೇಷನ್​ಗೆ ಟ್ವಿಸ್ಟ್​ ಕೊಟ್ಟ ಬಿಗ್ ಬಾಸ್​

ಪ್ರತಿವಾರ ಸ್ಪರ್ಧಿಗಳಿಗೆ ನಾಮಿನೇಷನ್​ ಮಾಡುವ ಆಯ್ಕೆಯನ್ನು ನೀಡಲಾಗುತ್ತದೆ. ಯಾರಿಗೆ ಯಾವ ಸ್ಪರ್ಧಿ ಇಷ್ಟವಿಲ್ಲವೋ ಅವರನ್ನು ನಾಮಿನೇಟ್​ ಮಾಡುತ್ತಾರೆ. ಆದರೆ, ಈ ಬಾರಿ ಬಿಗ್​ ಬಾಸ್​ ಮನೆಯಲ್ಲಿ ಆ ರೀತಿ ಇರಲಿಲ್ಲ.

Bigg Boss Kannada: ಈ ವಾರದ​ ಎಲಿಮಿನೇಷನ್​ಗೆ ಟ್ವಿಸ್ಟ್​ ಕೊಟ್ಟ ಬಿಗ್ ಬಾಸ್​
ಕಿಚ್ಚ ಸುದೀಪ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 16, 2021 | 2:55 PM

Share

ಬಿಗ್​ ಬಾಸ್​ ಮನೆಯಲ್ಲಿ ಏನು ಮಿಸ್​ ಆಗುತ್ತದೆಯೋ ಗೊತ್ತಿಲ್ಲ. ಆದರೆ, ಎಲಿಮಿನೇಷನ್​ ಮಾತ್ರ ನಡೆದೇ ನಡೆಯುತ್ತದೆ. ವೀಕ್ಷಕರಲ್ಲಿ ಕುತೂಹಲ ಹುಟ್ಟಿಸುವ ಉದ್ದೇಶದಿಂದ ಕೆಲ ವಾರ ಬಿಗ್​ ಬಾಸ್​ ಎಲಿಮಿನೇಷನ್​ಗೆ ಟ್ವಿಸ್ಟ್ ಕೊಡಲಾಗುತ್ತದೆ. ಈ ವಾರ ಬಿಗ್​ ಬಾಸ್ ಮನೆಯಲ್ಲಿ ಇದೇ ಸೂತ್ರ ಅನುಸರಿಸಲಾಗಿದೆ. ಈ ವಾರದ ಎಲಿಮಿನೇಷನ್​ಗೆ ನಡೆದ ನಾಮಿನೇಷನ್​ ಪ್ರಕ್ರಿಯೆ ಭಿನ್ನವಾಗಿತ್ತು. ಹೀಗಾಗಿ, ಕೆಲವರು ಸೇಫ್​ ಆದರೆ, ಇನ್ನೂ ಕೆಲ ಪ್ರಮುಖ ಸ್ಪರ್ಧಿಗಳು ಡೇಂಜರ್​ ಜೋನ್​ನಲ್ಲಿದ್ದಾರೆ.

ಪ್ರತಿವಾರ ಸ್ಪರ್ಧಿಗಳಿಗೆ ನಾಮಿನೇಷನ್​ ಮಾಡುವ ಆಯ್ಕೆಯನ್ನು ನೀಡಲಾಗುತ್ತದೆ. ಯಾರಿಗೆ ಯಾವ ಸ್ಪರ್ಧಿ ಇಷ್ಟವಿಲ್ಲವೋ ಅವರನ್ನು ನಾಮಿನೇಟ್​ ಮಾಡುತ್ತಾರೆ. ಆದರೆ, ಈ ಬಾರಿ ಬಿಗ್​ ಬಾಸ್​ ಮನೆಯಲ್ಲಿ ಆ ರೀತಿ ಇರಲಿಲ್ಲ. ಸೋಮವಾರ ಕ್ಯಾಪ್ಟನ್​ ಅರವಿಂದ್​ ಹಾಗೂ ರಘು ಗೌಡ ಸೇವ್​ ಮಾಡಿದ ಶಮಂತ್​ ಬ್ರೋ ಗೌಡ ಹೊರತುಪಡಿಸಿ ಉಳಿದ ಎಲ್ಲಾ 8 ಸದಸ್ಯರು ನಾಮಿನೇಟ್​ ಆಗಿದ್ದರು. ಈ ಎಂಟು ಸ್ಪರ್ಧಿಗಳಿಗೆ ನಾಮಿನೇಷನ್​​ನಿಂದ ತಪ್ಪಿಸಿಕೊಳ್ಳೋಕೆ ಅವಕಾಶ ನೀಡಲಾಗಿತ್ತು.

ಬಿಗ್ ಬಾಸ್​ ಮನೆಯಲ್ಲಿ ‘ವಿಜಯ ಯಾತ್ರೆ’ ಹಾಗೂ ‘ನಿಂಗ್​ ಐತೆ’ ಹೆಸರಿನ ಎರಡು ತಂಡಗಳನ್ನು ಮಾಡಲಾಯಿತು. ವಿಜಯ ಯಾತ್ರೆ ತಂಡಕ್ಕೆ ಅರವಿಂದ್​ ಕ್ಯಾಪ್ಟನ್​ ಆದರೆ, ನಿಂಗ್​ ಐತೆ ತಂಡಕ್ಕೆ ಮಂಜು ಪಾವಗಡ ನಾಯಕತ್ವ ವಹಿಸಿಕೊಂಡರು. ನಾಲ್ಕು ದಿನಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಒಟ್ಟೂ 10 ಟಾಸ್ಕ್​ಗಳು ನಡೆದವು. ಈ ಟಾಸ್ಕ್​ನಲ್ಲಿ ಗೆದ್ದು ಯಾರು ಹೆಚ್ಚು ದಂಡಗಳನ್ನು ಸಂಗ್ರಹಿಸುತ್ತಾರೋ ಅವರು ಗೆದ್ದಂತೆ.

ಈ ಟಾಸ್ಕ್​ನಲ್ಲಿ ನಿಂಗ್​ ಐತೆ ತಂಡ ಗೆದ್ದಿದೆ. ಈ ಮೂಲಕ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗಿದ್ದು ಮಾತ್ರವಲ್ಲ ನಾಮಿನೇಷನ್​ನಿಂದ ಬಚಾವ್​​​ ಆಗಿದೆ. ಮಂಜು ತಂಡದಲ್ಲಿದ್ದ ದಿವ್ಯಾ ಉರುಡುಗ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್​,  ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ನಾಮಿನೇಟ್​ನಿಂದ ಬಚಾವ್​ ಆದರು. ಅರವಿಂದ್​ ತಂಡದ ಪ್ರಶಾಂತ್ ಸಂಬರಗಿ​, ಪ್ರಿಯಾಂಕಾ ತಿಮ್ಮೇಶ್​, ವೈಷ್ಣವಿ, ಶುಭಾ ಪೂಂಜಾ ನಾಮಿನೇಟ್​ ಆದರು.

ಟಾಸ್ಕ್​ನಲ್ಲಿ ಸೋತ ಬೆನ್ನಲ್ಲೇ ಶುಭಾ ಪೂಂಜಾ ಅತ್ತರು. ಪ್ರಶಾಂತ್​ ಸಂಬರಗಿ ಬೇಸರ ಮಾಡಿಕೊಂಡರು. ಈ ನಾಲ್ವರಲ್ಲಿ ಒಬ್ಬರು ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುತ್ತಿದ್ದಾರೆ.

ಇದನ್ನೂ ಓದಿ:ಬಿಗ್​ ಬಾಸ್​ ಮನೆಯಲ್ಲಿ ಒಂದಾದ ಹಾವು-ಮುಂಗುಸಿ; ಮಂಜುಗೆ ಪ್ರೀತಿಯಿಂದ ಕೈ ತುತ್ತು ತಿನ್ನಿಸಿದ ಪ್ರಶಾಂತ್​ 

Bigg Boss Kannada: ಮಂಜು ಪಾವಗಡ ಜಾತಕದಲ್ಲಿದ್ದ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ನಿಜವಾಯ್ತು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!