AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಈ ವಾರದ​ ಎಲಿಮಿನೇಷನ್​ಗೆ ಟ್ವಿಸ್ಟ್​ ಕೊಟ್ಟ ಬಿಗ್ ಬಾಸ್​

ಪ್ರತಿವಾರ ಸ್ಪರ್ಧಿಗಳಿಗೆ ನಾಮಿನೇಷನ್​ ಮಾಡುವ ಆಯ್ಕೆಯನ್ನು ನೀಡಲಾಗುತ್ತದೆ. ಯಾರಿಗೆ ಯಾವ ಸ್ಪರ್ಧಿ ಇಷ್ಟವಿಲ್ಲವೋ ಅವರನ್ನು ನಾಮಿನೇಟ್​ ಮಾಡುತ್ತಾರೆ. ಆದರೆ, ಈ ಬಾರಿ ಬಿಗ್​ ಬಾಸ್​ ಮನೆಯಲ್ಲಿ ಆ ರೀತಿ ಇರಲಿಲ್ಲ.

Bigg Boss Kannada: ಈ ವಾರದ​ ಎಲಿಮಿನೇಷನ್​ಗೆ ಟ್ವಿಸ್ಟ್​ ಕೊಟ್ಟ ಬಿಗ್ ಬಾಸ್​
ಕಿಚ್ಚ ಸುದೀಪ್
TV9 Web
| Edited By: |

Updated on: Jul 16, 2021 | 2:55 PM

Share

ಬಿಗ್​ ಬಾಸ್​ ಮನೆಯಲ್ಲಿ ಏನು ಮಿಸ್​ ಆಗುತ್ತದೆಯೋ ಗೊತ್ತಿಲ್ಲ. ಆದರೆ, ಎಲಿಮಿನೇಷನ್​ ಮಾತ್ರ ನಡೆದೇ ನಡೆಯುತ್ತದೆ. ವೀಕ್ಷಕರಲ್ಲಿ ಕುತೂಹಲ ಹುಟ್ಟಿಸುವ ಉದ್ದೇಶದಿಂದ ಕೆಲ ವಾರ ಬಿಗ್​ ಬಾಸ್​ ಎಲಿಮಿನೇಷನ್​ಗೆ ಟ್ವಿಸ್ಟ್ ಕೊಡಲಾಗುತ್ತದೆ. ಈ ವಾರ ಬಿಗ್​ ಬಾಸ್ ಮನೆಯಲ್ಲಿ ಇದೇ ಸೂತ್ರ ಅನುಸರಿಸಲಾಗಿದೆ. ಈ ವಾರದ ಎಲಿಮಿನೇಷನ್​ಗೆ ನಡೆದ ನಾಮಿನೇಷನ್​ ಪ್ರಕ್ರಿಯೆ ಭಿನ್ನವಾಗಿತ್ತು. ಹೀಗಾಗಿ, ಕೆಲವರು ಸೇಫ್​ ಆದರೆ, ಇನ್ನೂ ಕೆಲ ಪ್ರಮುಖ ಸ್ಪರ್ಧಿಗಳು ಡೇಂಜರ್​ ಜೋನ್​ನಲ್ಲಿದ್ದಾರೆ.

ಪ್ರತಿವಾರ ಸ್ಪರ್ಧಿಗಳಿಗೆ ನಾಮಿನೇಷನ್​ ಮಾಡುವ ಆಯ್ಕೆಯನ್ನು ನೀಡಲಾಗುತ್ತದೆ. ಯಾರಿಗೆ ಯಾವ ಸ್ಪರ್ಧಿ ಇಷ್ಟವಿಲ್ಲವೋ ಅವರನ್ನು ನಾಮಿನೇಟ್​ ಮಾಡುತ್ತಾರೆ. ಆದರೆ, ಈ ಬಾರಿ ಬಿಗ್​ ಬಾಸ್​ ಮನೆಯಲ್ಲಿ ಆ ರೀತಿ ಇರಲಿಲ್ಲ. ಸೋಮವಾರ ಕ್ಯಾಪ್ಟನ್​ ಅರವಿಂದ್​ ಹಾಗೂ ರಘು ಗೌಡ ಸೇವ್​ ಮಾಡಿದ ಶಮಂತ್​ ಬ್ರೋ ಗೌಡ ಹೊರತುಪಡಿಸಿ ಉಳಿದ ಎಲ್ಲಾ 8 ಸದಸ್ಯರು ನಾಮಿನೇಟ್​ ಆಗಿದ್ದರು. ಈ ಎಂಟು ಸ್ಪರ್ಧಿಗಳಿಗೆ ನಾಮಿನೇಷನ್​​ನಿಂದ ತಪ್ಪಿಸಿಕೊಳ್ಳೋಕೆ ಅವಕಾಶ ನೀಡಲಾಗಿತ್ತು.

ಬಿಗ್ ಬಾಸ್​ ಮನೆಯಲ್ಲಿ ‘ವಿಜಯ ಯಾತ್ರೆ’ ಹಾಗೂ ‘ನಿಂಗ್​ ಐತೆ’ ಹೆಸರಿನ ಎರಡು ತಂಡಗಳನ್ನು ಮಾಡಲಾಯಿತು. ವಿಜಯ ಯಾತ್ರೆ ತಂಡಕ್ಕೆ ಅರವಿಂದ್​ ಕ್ಯಾಪ್ಟನ್​ ಆದರೆ, ನಿಂಗ್​ ಐತೆ ತಂಡಕ್ಕೆ ಮಂಜು ಪಾವಗಡ ನಾಯಕತ್ವ ವಹಿಸಿಕೊಂಡರು. ನಾಲ್ಕು ದಿನಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಒಟ್ಟೂ 10 ಟಾಸ್ಕ್​ಗಳು ನಡೆದವು. ಈ ಟಾಸ್ಕ್​ನಲ್ಲಿ ಗೆದ್ದು ಯಾರು ಹೆಚ್ಚು ದಂಡಗಳನ್ನು ಸಂಗ್ರಹಿಸುತ್ತಾರೋ ಅವರು ಗೆದ್ದಂತೆ.

ಈ ಟಾಸ್ಕ್​ನಲ್ಲಿ ನಿಂಗ್​ ಐತೆ ತಂಡ ಗೆದ್ದಿದೆ. ಈ ಮೂಲಕ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗಿದ್ದು ಮಾತ್ರವಲ್ಲ ನಾಮಿನೇಷನ್​ನಿಂದ ಬಚಾವ್​​​ ಆಗಿದೆ. ಮಂಜು ತಂಡದಲ್ಲಿದ್ದ ದಿವ್ಯಾ ಉರುಡುಗ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್​,  ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ನಾಮಿನೇಟ್​ನಿಂದ ಬಚಾವ್​ ಆದರು. ಅರವಿಂದ್​ ತಂಡದ ಪ್ರಶಾಂತ್ ಸಂಬರಗಿ​, ಪ್ರಿಯಾಂಕಾ ತಿಮ್ಮೇಶ್​, ವೈಷ್ಣವಿ, ಶುಭಾ ಪೂಂಜಾ ನಾಮಿನೇಟ್​ ಆದರು.

ಟಾಸ್ಕ್​ನಲ್ಲಿ ಸೋತ ಬೆನ್ನಲ್ಲೇ ಶುಭಾ ಪೂಂಜಾ ಅತ್ತರು. ಪ್ರಶಾಂತ್​ ಸಂಬರಗಿ ಬೇಸರ ಮಾಡಿಕೊಂಡರು. ಈ ನಾಲ್ವರಲ್ಲಿ ಒಬ್ಬರು ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುತ್ತಿದ್ದಾರೆ.

ಇದನ್ನೂ ಓದಿ:ಬಿಗ್​ ಬಾಸ್​ ಮನೆಯಲ್ಲಿ ಒಂದಾದ ಹಾವು-ಮುಂಗುಸಿ; ಮಂಜುಗೆ ಪ್ರೀತಿಯಿಂದ ಕೈ ತುತ್ತು ತಿನ್ನಿಸಿದ ಪ್ರಶಾಂತ್​ 

Bigg Boss Kannada: ಮಂಜು ಪಾವಗಡ ಜಾತಕದಲ್ಲಿದ್ದ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ನಿಜವಾಯ್ತು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್