AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಈ ವಾರದ​ ಎಲಿಮಿನೇಷನ್​ಗೆ ಟ್ವಿಸ್ಟ್​ ಕೊಟ್ಟ ಬಿಗ್ ಬಾಸ್​

ಪ್ರತಿವಾರ ಸ್ಪರ್ಧಿಗಳಿಗೆ ನಾಮಿನೇಷನ್​ ಮಾಡುವ ಆಯ್ಕೆಯನ್ನು ನೀಡಲಾಗುತ್ತದೆ. ಯಾರಿಗೆ ಯಾವ ಸ್ಪರ್ಧಿ ಇಷ್ಟವಿಲ್ಲವೋ ಅವರನ್ನು ನಾಮಿನೇಟ್​ ಮಾಡುತ್ತಾರೆ. ಆದರೆ, ಈ ಬಾರಿ ಬಿಗ್​ ಬಾಸ್​ ಮನೆಯಲ್ಲಿ ಆ ರೀತಿ ಇರಲಿಲ್ಲ.

Bigg Boss Kannada: ಈ ವಾರದ​ ಎಲಿಮಿನೇಷನ್​ಗೆ ಟ್ವಿಸ್ಟ್​ ಕೊಟ್ಟ ಬಿಗ್ ಬಾಸ್​
ಕಿಚ್ಚ ಸುದೀಪ್
TV9 Web
| Edited By: |

Updated on: Jul 16, 2021 | 2:55 PM

Share

ಬಿಗ್​ ಬಾಸ್​ ಮನೆಯಲ್ಲಿ ಏನು ಮಿಸ್​ ಆಗುತ್ತದೆಯೋ ಗೊತ್ತಿಲ್ಲ. ಆದರೆ, ಎಲಿಮಿನೇಷನ್​ ಮಾತ್ರ ನಡೆದೇ ನಡೆಯುತ್ತದೆ. ವೀಕ್ಷಕರಲ್ಲಿ ಕುತೂಹಲ ಹುಟ್ಟಿಸುವ ಉದ್ದೇಶದಿಂದ ಕೆಲ ವಾರ ಬಿಗ್​ ಬಾಸ್​ ಎಲಿಮಿನೇಷನ್​ಗೆ ಟ್ವಿಸ್ಟ್ ಕೊಡಲಾಗುತ್ತದೆ. ಈ ವಾರ ಬಿಗ್​ ಬಾಸ್ ಮನೆಯಲ್ಲಿ ಇದೇ ಸೂತ್ರ ಅನುಸರಿಸಲಾಗಿದೆ. ಈ ವಾರದ ಎಲಿಮಿನೇಷನ್​ಗೆ ನಡೆದ ನಾಮಿನೇಷನ್​ ಪ್ರಕ್ರಿಯೆ ಭಿನ್ನವಾಗಿತ್ತು. ಹೀಗಾಗಿ, ಕೆಲವರು ಸೇಫ್​ ಆದರೆ, ಇನ್ನೂ ಕೆಲ ಪ್ರಮುಖ ಸ್ಪರ್ಧಿಗಳು ಡೇಂಜರ್​ ಜೋನ್​ನಲ್ಲಿದ್ದಾರೆ.

ಪ್ರತಿವಾರ ಸ್ಪರ್ಧಿಗಳಿಗೆ ನಾಮಿನೇಷನ್​ ಮಾಡುವ ಆಯ್ಕೆಯನ್ನು ನೀಡಲಾಗುತ್ತದೆ. ಯಾರಿಗೆ ಯಾವ ಸ್ಪರ್ಧಿ ಇಷ್ಟವಿಲ್ಲವೋ ಅವರನ್ನು ನಾಮಿನೇಟ್​ ಮಾಡುತ್ತಾರೆ. ಆದರೆ, ಈ ಬಾರಿ ಬಿಗ್​ ಬಾಸ್​ ಮನೆಯಲ್ಲಿ ಆ ರೀತಿ ಇರಲಿಲ್ಲ. ಸೋಮವಾರ ಕ್ಯಾಪ್ಟನ್​ ಅರವಿಂದ್​ ಹಾಗೂ ರಘು ಗೌಡ ಸೇವ್​ ಮಾಡಿದ ಶಮಂತ್​ ಬ್ರೋ ಗೌಡ ಹೊರತುಪಡಿಸಿ ಉಳಿದ ಎಲ್ಲಾ 8 ಸದಸ್ಯರು ನಾಮಿನೇಟ್​ ಆಗಿದ್ದರು. ಈ ಎಂಟು ಸ್ಪರ್ಧಿಗಳಿಗೆ ನಾಮಿನೇಷನ್​​ನಿಂದ ತಪ್ಪಿಸಿಕೊಳ್ಳೋಕೆ ಅವಕಾಶ ನೀಡಲಾಗಿತ್ತು.

ಬಿಗ್ ಬಾಸ್​ ಮನೆಯಲ್ಲಿ ‘ವಿಜಯ ಯಾತ್ರೆ’ ಹಾಗೂ ‘ನಿಂಗ್​ ಐತೆ’ ಹೆಸರಿನ ಎರಡು ತಂಡಗಳನ್ನು ಮಾಡಲಾಯಿತು. ವಿಜಯ ಯಾತ್ರೆ ತಂಡಕ್ಕೆ ಅರವಿಂದ್​ ಕ್ಯಾಪ್ಟನ್​ ಆದರೆ, ನಿಂಗ್​ ಐತೆ ತಂಡಕ್ಕೆ ಮಂಜು ಪಾವಗಡ ನಾಯಕತ್ವ ವಹಿಸಿಕೊಂಡರು. ನಾಲ್ಕು ದಿನಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಒಟ್ಟೂ 10 ಟಾಸ್ಕ್​ಗಳು ನಡೆದವು. ಈ ಟಾಸ್ಕ್​ನಲ್ಲಿ ಗೆದ್ದು ಯಾರು ಹೆಚ್ಚು ದಂಡಗಳನ್ನು ಸಂಗ್ರಹಿಸುತ್ತಾರೋ ಅವರು ಗೆದ್ದಂತೆ.

ಈ ಟಾಸ್ಕ್​ನಲ್ಲಿ ನಿಂಗ್​ ಐತೆ ತಂಡ ಗೆದ್ದಿದೆ. ಈ ಮೂಲಕ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗಿದ್ದು ಮಾತ್ರವಲ್ಲ ನಾಮಿನೇಷನ್​ನಿಂದ ಬಚಾವ್​​​ ಆಗಿದೆ. ಮಂಜು ತಂಡದಲ್ಲಿದ್ದ ದಿವ್ಯಾ ಉರುಡುಗ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್​,  ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ನಾಮಿನೇಟ್​ನಿಂದ ಬಚಾವ್​ ಆದರು. ಅರವಿಂದ್​ ತಂಡದ ಪ್ರಶಾಂತ್ ಸಂಬರಗಿ​, ಪ್ರಿಯಾಂಕಾ ತಿಮ್ಮೇಶ್​, ವೈಷ್ಣವಿ, ಶುಭಾ ಪೂಂಜಾ ನಾಮಿನೇಟ್​ ಆದರು.

ಟಾಸ್ಕ್​ನಲ್ಲಿ ಸೋತ ಬೆನ್ನಲ್ಲೇ ಶುಭಾ ಪೂಂಜಾ ಅತ್ತರು. ಪ್ರಶಾಂತ್​ ಸಂಬರಗಿ ಬೇಸರ ಮಾಡಿಕೊಂಡರು. ಈ ನಾಲ್ವರಲ್ಲಿ ಒಬ್ಬರು ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುತ್ತಿದ್ದಾರೆ.

ಇದನ್ನೂ ಓದಿ:ಬಿಗ್​ ಬಾಸ್​ ಮನೆಯಲ್ಲಿ ಒಂದಾದ ಹಾವು-ಮುಂಗುಸಿ; ಮಂಜುಗೆ ಪ್ರೀತಿಯಿಂದ ಕೈ ತುತ್ತು ತಿನ್ನಿಸಿದ ಪ್ರಶಾಂತ್​ 

Bigg Boss Kannada: ಮಂಜು ಪಾವಗಡ ಜಾತಕದಲ್ಲಿದ್ದ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ನಿಜವಾಯ್ತು

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?