AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರದ ಎಲಿಮಿನೇಷ್​ನಲ್ಲಿ ಟ್ವಿಸ್ಟ್? ದೊಡ್ಡ ಸೂಚನೆ ಕೊಟ್ಟ ಬಿಗ್ ಬಾಸ್

ಈ ವಾರ ಉಗ್ರಂ ಮಂಜು, ಗೌತಮಿ ಜಾಧವ್, ಮೋಕ್ಷಿತಾ ಪೈ, ಚೈತ್ರಾ ಕುಂದಾಪುರ, ಭವ್ಯಾ ಗೌಡ, ಗೋಲ್ಡ್ ಸುರೇಶ್, ಐಶ್ವರ್ಯಾ, ರಜತ್ ಈ ವಾರ ನಾಮಿನೇಟ್ ಆಗಿದ್ದಾರೆ. ಆದರೆ, ಈ ವಾರ ಯಾವುದೇ ವೋಟಿಂಗ್ ಲೈನ್ ತೆಗೆದಿಲ್ಲ. ಜನರಿಗೆ ವೋಟ್ ಮಾಡುವ ಅವಕಾಶವನ್ನು ಪ್ರೇಕ್ಷಕರಿಗೆ ನೀಡಿಲ್ಲ.

ಈ ವಾರದ ಎಲಿಮಿನೇಷ್​ನಲ್ಲಿ ಟ್ವಿಸ್ಟ್? ದೊಡ್ಡ ಸೂಚನೆ ಕೊಟ್ಟ ಬಿಗ್ ಬಾಸ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Dec 07, 2024 | 3:02 PM

Share

ಪ್ರತಿ ಬಾರಿ ಎಲಿಮಿನೇಷನ್ ನಡೆಯುವಾಗ ಒಂದೊಂದು ಟ್ವಿಸ್ಟ್​ನ ಬಿಗ್ ಬಾಸ್ ನೀಡುತ್ತಾರೆ. ವಾರದಿಂದ ವಾರಕ್ಕೆ ಇದು ಭಿನ್ನವಾಗಿರುತ್ತದೆ. ಈಗಾಗಲೇ ಎರಡು ತಿಂಗಳು ಪೂರ್ಣಗೊಳಿಸಿರೋ ಬಿಗ್ ಬಾಸ್ ದೊಡ್ಡ ಟ್ವಿಸ್ಟ್ ಕೊಡಲು ರೆಡಿ ಆಗಿದೆ. ಅಷ್ಟಕ್ಕೂ ಏನು ಆ ಟ್ವಿಸ್ಟ್? ಈ ವಾರ ವೀಕ್ಷಕರು ಏನನ್ನು ನಿರೀಕ್ಷಿಸಬಹುದು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಉಗ್ರಂ ಮಂಜು, ಗೌತಮಿ ಜಾಧವ್, ಮೋಕ್ಷಿತಾ ಪೈ, ಚೈತ್ರಾ ಕುಂದಾಪುರ, ಭವ್ಯಾ ಗೌಡ, ಗೋಲ್ಡ್ ಸುರೇಶ್, ಐಶ್ವರ್ಯಾ, ರಜತ್ ಈ ವಾರ ನಾಮಿನೇಟ್ ಆಗಿದ್ದಾರೆ. ಆದರೆ, ಈ ವಾರ ಯಾವುದೇ ವೋಟಿಂಗ್ ಲೈನ್ ತೆಗೆದಿಲ್ಲ. ಜನರಿಗೆ ವೋಟ್ ಮಾಡುವ ಅವಕಾಶವನ್ನು ಜಿಯೋ ಸಿನಿಮಾದಲ್ಲಿ ನೀಡಿಲ್ಲ. ಹೀಗಾಗಿ, ಈ ವಾರ ಎಲಿಮಿನೇಷನ್ ನಡೆಯೋದು ಅನುಮಾನ ಎನ್ನಲಾಗುತ್ತಿದೆ.

ಕಳೆದ ವಾರ ಬಿಗ್ ಬಾಸ್ ಮನೆಯಲ್ಲಿ ಕೊನೆಯದಾಗಿ ಇದ್ದವರು ಶಿಶಿರ್ ಹಾಗೂ ಐಶ್ವರ್ಯಾ. ಆದರೆ, ಶೋಭಾ ಶೆಟ್ಟಿ ಅವರು ಅನಾರೋಗ್ಯ ಕಾರಣ ನೀಡಿ ಎಲಿಮಿನೇಟ್ ಆದರು. ಈ ಮೂಲಕ ಶಿಶಿರ್ ಹಾಗೂ ಐಶ್ವರ್ಯನ ಸೇವ್​ ಮಾಡಲಾಯಿತು. ಈ ವಾರ ಆ ಪ್ರಕ್ರಿಯೆಯನ್ನು ಮುಂದುವರಿಸಿ ಶಿಶಿರ್ ಹಾಗೂ ಐಶ್ವರ್ಯಾ ನಡುವೆ ಒಬ್ಬರನ್ನು ಎಲಿಮಿನೇಟ್ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್​ನ ಇಮಿಟೇಟ್ ಮಾಡಿದ್ದ ಪ್ರಿಯಾಮಣಿ

ಸದ್ಯ ಬಿಗ್ ಬಾಸ್ ಮನೆಯಲ್ಲಿ 11 ಜನರು ಇದ್ದಾರೆ. ಟಾಪ್ ಐವರನ್ನು ಬಿಟ್ಟರೆ ಉಳಿಯೋದು ಕೇವಲ ಆರು ಸ್ಪರ್ಧಿಗಳು ಮಾತ್ರ. ಮುಂಬರುವ ವಾರಗಳ ಸಂಖ್ಯೆ ಹಾಗೂ ಎಲಿಮಿನೇಟ್ ಆಗಬೇಕಿರುವ ಸ್ಪರ್ಧಿಗಳ ಸಂಖ್ಯೆ ಸರಿ ಸಮನವಾಗಿದೆ ಎನ್ನಬಹುದು. ಮುಂದಿನ ದಿನಗಳಲ್ಲಿ ಡಬಲ್ ಎಲಿಮಿನೇಷನ್ ಪ್ರಕ್ರಿಯೆ ಕೂಡ ನಡೆಯಬಹುದು. ಈ ಕಾರಣಕ್ಕೆ ಈ ವಾರ ಯಾರನ್ನೂ ಎಲಿಮಿನೇಟ್ ಮಾಡದೆಯೂ ಇರಬಹುದು ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:00 am, Sat, 7 December 24

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್