AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫೀ ನೆಪದಲ್ಲಿ ಬಿಗ್​ ಬಾಸ್​ ಸ್ಪರ್ಧಿಗೆ ಎಲ್ಲರೆದುರೇ ಮುತ್ತಿಟ್ಟ ಅಭಿಮಾನಿ! ಮರುದಿನವೇ ಬಂತು ಕೊರೊನಾ

ಅಭಿಮಾನಿ ಮುತ್ತಿಟ್ಟ ಘಟನೆ ಬಗ್ಗೆ ಕೇಳುತ್ತಿದ್ದಂತೆ ಅರ್ಶಿ ಏನು ಆಗೇ ಇಲ್ಲ ಎಂಬಂತೆ ನಡೆದುಕೊಂಡರು. ಅವರಿಂದ ಹೊರಡೋಣ ನಡೆಯಿರಿ ಎನ್ನುವ ಉತ್ತರ ಬಂತು.

ಸೆಲ್ಫೀ ನೆಪದಲ್ಲಿ ಬಿಗ್​ ಬಾಸ್​ ಸ್ಪರ್ಧಿಗೆ ಎಲ್ಲರೆದುರೇ ಮುತ್ತಿಟ್ಟ ಅಭಿಮಾನಿ! ಮರುದಿನವೇ ಬಂತು ಕೊರೊನಾ
ಸಾರ್ವಜನಿಕವಾಗಿ ಮುತ್ತಿಟ್ಟ ಅಭಿಮಾನಿ
ರಾಜೇಶ್ ದುಗ್ಗುಮನೆ
|

Updated on: Apr 23, 2021 | 8:21 PM

Share

ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಕೆಲವೊಮ್ಮೆ ಆಭಾಸ ಎನಿಸುವ ಘಟನೆಗಳು ನಡೆಯುತ್ತವೆ. ಕೆಲ ಸೆಲೆಬ್ರಿಟಿಗಳು ಅಭಿಮಾನಿಗಳ ವರ್ತನೆಯಿಂದ ಸಿಟ್ಟಾಗಿದ್ದು ಕೂಡ ಇದೆ. ಈಗ ಬಿಗ್​ ಬಾಸ್​ 14ನೇ ಸೀಸನ್​ನ ಸ್ಪರ್ಧಿ ಎಲ್ಲರ ಎದುರೇ ಮುಜುಗರಕ್ಕೆ ಒಳಗಾಗಿದ್ದಾರೆ. ಅಭಿಮಾನಿ ಸೆಲ್ಫೀ ತೆಗೆದುಕೊಳ್ಳುವ ನೆಪದಲ್ಲಿ ಅವರಿಗೆ ಮುತ್ತಿಟ್ಟಿದ್ದಾನೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಹಿಂದಿ ಬಿಗ್​ ಬಾಸ್​ ಸೀಸನ್​ 14ರ ಸ್ಪರ್ಧಿಯಾಗಿ ಅರ್ಶಿ ಖಾನ್​ ಮನೆ ಒಳಗೆ ಹೋಗಿದ್ದರು. ಈ ಮೂಲಕ ಅವರ ಖ್ಯಾತಿ ದ್ವಿಗುಣವಾಗಿತ್ತು. ಇತ್ತೀಚೆಗೆ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಮಾಧ್ಯಮಗಳ ಜತೆ ಕೆಲವಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ ಕೂಡ. ಆಗ ಅವರಿಗೆ ಅಭಿಮಾನಿಯೋರ್ವ ಎದುರಾಗಿದ್ದ.

ಅಭಿಮಾನಿಗಳು ಸಿಕ್ಕಾಗ ಅರ್ಶಿ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದರು. ಅಭಿಮಾನಿ ಸೆಲ್ಫಿ ತೆಗೆದುಕೊಳ್ಳೋಕೆ ಬಂದಾಗ ಪೋಸ್​ ನೀಡಿದ್ದಾರೆ. ಅರ್ಶಿ ಸೆಲ್ಫಿಗೆ ಪೋಸ್​ ನೀಡಿ ಈಚೆ ತಿರುಗುತ್ತಿದ್ದಂತೆ ಅಭಿಮಾನಿ ಅವರ ಕೈ ತೆಗೆದುಕೊಂಡು ಮುತ್ತಿಟ್ಟಿದ್ದಾನೆ. ಈ ಘಟನೆಯಿಂದ ಅವರು ಶಾಕ್​ಗೆ ಒಳಗಾದಂತೆ ಕಂಡು ಬಂತು. ಆದರೆ, ಇದನ್ನು ಅರ್ಶಿ ಎಲ್ಲಿಯೂ ತೋರಿಸಿಕೊಳ್ಳಲಿಲ್ಲ.

View this post on Instagram

A post shared by Voompla (@voompla)

ಅಭಿಮಾನಿ ಮುತ್ತಿಟ್ಟ ಘಟನೆ ಬಗ್ಗೆ ಕೇಳುತ್ತಿದ್ದಂತೆ ಅರ್ಶಿ ಏನು ಆಗೇ ಇಲ್ಲ ಎಂಬಂತೆ ನಡೆದುಕೊಂಡರು. ಅವರಿಂದ ಹೊರಡೋಣ ನಡೆಯಿರಿ ಎನ್ನುವ ಉತ್ತರ ಬಂತು. ಈ ಘಟನೆ ನಡೆದ ಮರುದಿನವೇ ಅರ್ಶಿಗೆ ಕೊರೊನಾ ಪಾಸಿಟಿವ್​ ಬಂದಿದೆ.

ಈ ಬಗ್ಗೆ ಪೋಸ್ಟ್ ಮಾಡಿದ್ದ ಅರ್ಶಿ ಖಾನ್​, ನನಗೆ ಕೊವಿಡ್​ ಪಾಸಿಟಿವ್ ಬಂದಿದೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊರೊನಾ ಟೆಸ್ಟ್​ ಮಾಡಿಸಿಕೊಳ್ಳಿ ಎಂದು ಅವರು ಕೋರಿದ್ದಾರೆ.

ಅರ್ಶಿ ಬಿಗ್​ ಬಾಸ್ ಮನೆಯಲ್ಲಿ ಇದ್ದಷ್ಟು ದಿನ ಭಾರೀ ಚರ್ಚೆಗೆ ಗ್ರಾಸವಾಗಿದ್ದರು. ಅಷ್ಟೇ ಅಲ್ಲ, ಹಲವು ವಿವಾದಗಳನ್ನು ಕೂಡ ಎಬ್ಬಿಸಿದ್ದರು. ಆದರೆ, ಅವರಿಂದ ಬಿಗ್​ ಬಾಸ್​ ಗೆಲ್ಲೋಕೆ ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: Kichcha Sudeep: ಆರೋಗ್ಯದ ಬಗ್ಗೆ ಅಪ್​ಡೇಟ್​ ನೀಡಿದ ಸುದೀಪ್​; ಈ ವಾರವೂ ಬಿಗ್​ ಬಾಸ್​ಗೆ ಕಿಚ್ಚ ಗೈರು

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ