ಸೆಲ್ಫೀ ನೆಪದಲ್ಲಿ ಬಿಗ್​ ಬಾಸ್​ ಸ್ಪರ್ಧಿಗೆ ಎಲ್ಲರೆದುರೇ ಮುತ್ತಿಟ್ಟ ಅಭಿಮಾನಿ! ಮರುದಿನವೇ ಬಂತು ಕೊರೊನಾ

ಅಭಿಮಾನಿ ಮುತ್ತಿಟ್ಟ ಘಟನೆ ಬಗ್ಗೆ ಕೇಳುತ್ತಿದ್ದಂತೆ ಅರ್ಶಿ ಏನು ಆಗೇ ಇಲ್ಲ ಎಂಬಂತೆ ನಡೆದುಕೊಂಡರು. ಅವರಿಂದ ಹೊರಡೋಣ ನಡೆಯಿರಿ ಎನ್ನುವ ಉತ್ತರ ಬಂತು.

ಸೆಲ್ಫೀ ನೆಪದಲ್ಲಿ ಬಿಗ್​ ಬಾಸ್​ ಸ್ಪರ್ಧಿಗೆ ಎಲ್ಲರೆದುರೇ ಮುತ್ತಿಟ್ಟ ಅಭಿಮಾನಿ! ಮರುದಿನವೇ ಬಂತು ಕೊರೊನಾ
ಸಾರ್ವಜನಿಕವಾಗಿ ಮುತ್ತಿಟ್ಟ ಅಭಿಮಾನಿ
Follow us
|

Updated on: Apr 23, 2021 | 8:21 PM

ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಕೆಲವೊಮ್ಮೆ ಆಭಾಸ ಎನಿಸುವ ಘಟನೆಗಳು ನಡೆಯುತ್ತವೆ. ಕೆಲ ಸೆಲೆಬ್ರಿಟಿಗಳು ಅಭಿಮಾನಿಗಳ ವರ್ತನೆಯಿಂದ ಸಿಟ್ಟಾಗಿದ್ದು ಕೂಡ ಇದೆ. ಈಗ ಬಿಗ್​ ಬಾಸ್​ 14ನೇ ಸೀಸನ್​ನ ಸ್ಪರ್ಧಿ ಎಲ್ಲರ ಎದುರೇ ಮುಜುಗರಕ್ಕೆ ಒಳಗಾಗಿದ್ದಾರೆ. ಅಭಿಮಾನಿ ಸೆಲ್ಫೀ ತೆಗೆದುಕೊಳ್ಳುವ ನೆಪದಲ್ಲಿ ಅವರಿಗೆ ಮುತ್ತಿಟ್ಟಿದ್ದಾನೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಹಿಂದಿ ಬಿಗ್​ ಬಾಸ್​ ಸೀಸನ್​ 14ರ ಸ್ಪರ್ಧಿಯಾಗಿ ಅರ್ಶಿ ಖಾನ್​ ಮನೆ ಒಳಗೆ ಹೋಗಿದ್ದರು. ಈ ಮೂಲಕ ಅವರ ಖ್ಯಾತಿ ದ್ವಿಗುಣವಾಗಿತ್ತು. ಇತ್ತೀಚೆಗೆ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಮಾಧ್ಯಮಗಳ ಜತೆ ಕೆಲವಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ ಕೂಡ. ಆಗ ಅವರಿಗೆ ಅಭಿಮಾನಿಯೋರ್ವ ಎದುರಾಗಿದ್ದ.

ಅಭಿಮಾನಿಗಳು ಸಿಕ್ಕಾಗ ಅರ್ಶಿ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದರು. ಅಭಿಮಾನಿ ಸೆಲ್ಫಿ ತೆಗೆದುಕೊಳ್ಳೋಕೆ ಬಂದಾಗ ಪೋಸ್​ ನೀಡಿದ್ದಾರೆ. ಅರ್ಶಿ ಸೆಲ್ಫಿಗೆ ಪೋಸ್​ ನೀಡಿ ಈಚೆ ತಿರುಗುತ್ತಿದ್ದಂತೆ ಅಭಿಮಾನಿ ಅವರ ಕೈ ತೆಗೆದುಕೊಂಡು ಮುತ್ತಿಟ್ಟಿದ್ದಾನೆ. ಈ ಘಟನೆಯಿಂದ ಅವರು ಶಾಕ್​ಗೆ ಒಳಗಾದಂತೆ ಕಂಡು ಬಂತು. ಆದರೆ, ಇದನ್ನು ಅರ್ಶಿ ಎಲ್ಲಿಯೂ ತೋರಿಸಿಕೊಳ್ಳಲಿಲ್ಲ.

View this post on Instagram

A post shared by Voompla (@voompla)

ಅಭಿಮಾನಿ ಮುತ್ತಿಟ್ಟ ಘಟನೆ ಬಗ್ಗೆ ಕೇಳುತ್ತಿದ್ದಂತೆ ಅರ್ಶಿ ಏನು ಆಗೇ ಇಲ್ಲ ಎಂಬಂತೆ ನಡೆದುಕೊಂಡರು. ಅವರಿಂದ ಹೊರಡೋಣ ನಡೆಯಿರಿ ಎನ್ನುವ ಉತ್ತರ ಬಂತು. ಈ ಘಟನೆ ನಡೆದ ಮರುದಿನವೇ ಅರ್ಶಿಗೆ ಕೊರೊನಾ ಪಾಸಿಟಿವ್​ ಬಂದಿದೆ.

ಈ ಬಗ್ಗೆ ಪೋಸ್ಟ್ ಮಾಡಿದ್ದ ಅರ್ಶಿ ಖಾನ್​, ನನಗೆ ಕೊವಿಡ್​ ಪಾಸಿಟಿವ್ ಬಂದಿದೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊರೊನಾ ಟೆಸ್ಟ್​ ಮಾಡಿಸಿಕೊಳ್ಳಿ ಎಂದು ಅವರು ಕೋರಿದ್ದಾರೆ.

ಅರ್ಶಿ ಬಿಗ್​ ಬಾಸ್ ಮನೆಯಲ್ಲಿ ಇದ್ದಷ್ಟು ದಿನ ಭಾರೀ ಚರ್ಚೆಗೆ ಗ್ರಾಸವಾಗಿದ್ದರು. ಅಷ್ಟೇ ಅಲ್ಲ, ಹಲವು ವಿವಾದಗಳನ್ನು ಕೂಡ ಎಬ್ಬಿಸಿದ್ದರು. ಆದರೆ, ಅವರಿಂದ ಬಿಗ್​ ಬಾಸ್​ ಗೆಲ್ಲೋಕೆ ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: Kichcha Sudeep: ಆರೋಗ್ಯದ ಬಗ್ಗೆ ಅಪ್​ಡೇಟ್​ ನೀಡಿದ ಸುದೀಪ್​; ಈ ವಾರವೂ ಬಿಗ್​ ಬಾಸ್​ಗೆ ಕಿಚ್ಚ ಗೈರು

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ