AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫೀ ನೆಪದಲ್ಲಿ ಬಿಗ್​ ಬಾಸ್​ ಸ್ಪರ್ಧಿಗೆ ಎಲ್ಲರೆದುರೇ ಮುತ್ತಿಟ್ಟ ಅಭಿಮಾನಿ! ಮರುದಿನವೇ ಬಂತು ಕೊರೊನಾ

ಅಭಿಮಾನಿ ಮುತ್ತಿಟ್ಟ ಘಟನೆ ಬಗ್ಗೆ ಕೇಳುತ್ತಿದ್ದಂತೆ ಅರ್ಶಿ ಏನು ಆಗೇ ಇಲ್ಲ ಎಂಬಂತೆ ನಡೆದುಕೊಂಡರು. ಅವರಿಂದ ಹೊರಡೋಣ ನಡೆಯಿರಿ ಎನ್ನುವ ಉತ್ತರ ಬಂತು.

ಸೆಲ್ಫೀ ನೆಪದಲ್ಲಿ ಬಿಗ್​ ಬಾಸ್​ ಸ್ಪರ್ಧಿಗೆ ಎಲ್ಲರೆದುರೇ ಮುತ್ತಿಟ್ಟ ಅಭಿಮಾನಿ! ಮರುದಿನವೇ ಬಂತು ಕೊರೊನಾ
ಸಾರ್ವಜನಿಕವಾಗಿ ಮುತ್ತಿಟ್ಟ ಅಭಿಮಾನಿ
ರಾಜೇಶ್ ದುಗ್ಗುಮನೆ
|

Updated on: Apr 23, 2021 | 8:21 PM

Share

ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಕೆಲವೊಮ್ಮೆ ಆಭಾಸ ಎನಿಸುವ ಘಟನೆಗಳು ನಡೆಯುತ್ತವೆ. ಕೆಲ ಸೆಲೆಬ್ರಿಟಿಗಳು ಅಭಿಮಾನಿಗಳ ವರ್ತನೆಯಿಂದ ಸಿಟ್ಟಾಗಿದ್ದು ಕೂಡ ಇದೆ. ಈಗ ಬಿಗ್​ ಬಾಸ್​ 14ನೇ ಸೀಸನ್​ನ ಸ್ಪರ್ಧಿ ಎಲ್ಲರ ಎದುರೇ ಮುಜುಗರಕ್ಕೆ ಒಳಗಾಗಿದ್ದಾರೆ. ಅಭಿಮಾನಿ ಸೆಲ್ಫೀ ತೆಗೆದುಕೊಳ್ಳುವ ನೆಪದಲ್ಲಿ ಅವರಿಗೆ ಮುತ್ತಿಟ್ಟಿದ್ದಾನೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಹಿಂದಿ ಬಿಗ್​ ಬಾಸ್​ ಸೀಸನ್​ 14ರ ಸ್ಪರ್ಧಿಯಾಗಿ ಅರ್ಶಿ ಖಾನ್​ ಮನೆ ಒಳಗೆ ಹೋಗಿದ್ದರು. ಈ ಮೂಲಕ ಅವರ ಖ್ಯಾತಿ ದ್ವಿಗುಣವಾಗಿತ್ತು. ಇತ್ತೀಚೆಗೆ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಮಾಧ್ಯಮಗಳ ಜತೆ ಕೆಲವಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ ಕೂಡ. ಆಗ ಅವರಿಗೆ ಅಭಿಮಾನಿಯೋರ್ವ ಎದುರಾಗಿದ್ದ.

ಅಭಿಮಾನಿಗಳು ಸಿಕ್ಕಾಗ ಅರ್ಶಿ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದರು. ಅಭಿಮಾನಿ ಸೆಲ್ಫಿ ತೆಗೆದುಕೊಳ್ಳೋಕೆ ಬಂದಾಗ ಪೋಸ್​ ನೀಡಿದ್ದಾರೆ. ಅರ್ಶಿ ಸೆಲ್ಫಿಗೆ ಪೋಸ್​ ನೀಡಿ ಈಚೆ ತಿರುಗುತ್ತಿದ್ದಂತೆ ಅಭಿಮಾನಿ ಅವರ ಕೈ ತೆಗೆದುಕೊಂಡು ಮುತ್ತಿಟ್ಟಿದ್ದಾನೆ. ಈ ಘಟನೆಯಿಂದ ಅವರು ಶಾಕ್​ಗೆ ಒಳಗಾದಂತೆ ಕಂಡು ಬಂತು. ಆದರೆ, ಇದನ್ನು ಅರ್ಶಿ ಎಲ್ಲಿಯೂ ತೋರಿಸಿಕೊಳ್ಳಲಿಲ್ಲ.

View this post on Instagram

A post shared by Voompla (@voompla)

ಅಭಿಮಾನಿ ಮುತ್ತಿಟ್ಟ ಘಟನೆ ಬಗ್ಗೆ ಕೇಳುತ್ತಿದ್ದಂತೆ ಅರ್ಶಿ ಏನು ಆಗೇ ಇಲ್ಲ ಎಂಬಂತೆ ನಡೆದುಕೊಂಡರು. ಅವರಿಂದ ಹೊರಡೋಣ ನಡೆಯಿರಿ ಎನ್ನುವ ಉತ್ತರ ಬಂತು. ಈ ಘಟನೆ ನಡೆದ ಮರುದಿನವೇ ಅರ್ಶಿಗೆ ಕೊರೊನಾ ಪಾಸಿಟಿವ್​ ಬಂದಿದೆ.

ಈ ಬಗ್ಗೆ ಪೋಸ್ಟ್ ಮಾಡಿದ್ದ ಅರ್ಶಿ ಖಾನ್​, ನನಗೆ ಕೊವಿಡ್​ ಪಾಸಿಟಿವ್ ಬಂದಿದೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊರೊನಾ ಟೆಸ್ಟ್​ ಮಾಡಿಸಿಕೊಳ್ಳಿ ಎಂದು ಅವರು ಕೋರಿದ್ದಾರೆ.

ಅರ್ಶಿ ಬಿಗ್​ ಬಾಸ್ ಮನೆಯಲ್ಲಿ ಇದ್ದಷ್ಟು ದಿನ ಭಾರೀ ಚರ್ಚೆಗೆ ಗ್ರಾಸವಾಗಿದ್ದರು. ಅಷ್ಟೇ ಅಲ್ಲ, ಹಲವು ವಿವಾದಗಳನ್ನು ಕೂಡ ಎಬ್ಬಿಸಿದ್ದರು. ಆದರೆ, ಅವರಿಂದ ಬಿಗ್​ ಬಾಸ್​ ಗೆಲ್ಲೋಕೆ ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: Kichcha Sudeep: ಆರೋಗ್ಯದ ಬಗ್ಗೆ ಅಪ್​ಡೇಟ್​ ನೀಡಿದ ಸುದೀಪ್​; ಈ ವಾರವೂ ಬಿಗ್​ ಬಾಸ್​ಗೆ ಕಿಚ್ಚ ಗೈರು

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?