AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಸ್ಪರ್ಧಿ ಜೊತೆ ಫೋಟೋಗಾಗಿ ಮಹಡಿಯಿಂದ ಜಿಗಿದ ಹುಡುಗಿ; ಮುಂದೇನಾಯ್ತು?

ಆ ಅಭಿಮಾನಿಯನ್ನು ನಾನು ಎಂದಿಗೂ ಮರೆಯುವುದಿಲ್ಲ. ಅದು ಮರೆಯಲಾರದ ಮತ್ತು ಶಾಕಿಂಗ್​ ಘಟನೆ ಆಗಿತ್ತು. ನಮ್ಮನ್ನು ಜನರು ಎಷ್ಟು ಪ್ರೀತಿಸುತ್ತಾರೆ ಎಂಬುದಕ್ಕೆ ಆ ಘಟನೆಯೇ ಸಾಕ್ಷಿ ಎಂದು ಪಾರಸ್​ ಛಾಬ್ರಾ ಹೇಳಿದ್ದಾರೆ.

ಬಿಗ್​ ಬಾಸ್​ ಸ್ಪರ್ಧಿ ಜೊತೆ ಫೋಟೋಗಾಗಿ ಮಹಡಿಯಿಂದ ಜಿಗಿದ ಹುಡುಗಿ; ಮುಂದೇನಾಯ್ತು?
ಪಾರಸ್​ ಛಾಬ್ರಾ
ಮದನ್​ ಕುಮಾರ್​
|

Updated on: Jun 03, 2021 | 9:31 AM

Share

ಕಿರುತೆರೆಯ ಜನಪ್ರಿಯ ಶೋಗಳಲ್ಲಿ ಒಂದಾದ ಬಿಗ್​ ಬಾಸ್​ಗೆ ಅಪಾರ ಪ್ರೇಕ್ಷಕವರ್ಗ ಇದೆ. ಈ ರಿಯಾಲಿಟಿ ಶೋನಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ದೊಡ್ಡ ಮಟ್ಟದ ಖ್ಯಾತಿ ಸಿಗುತ್ತದೆ. ಸಿಕ್ಕಾಪಟ್ಟೆ ಅಭಿಮಾನಿಗಳು ಕೂಡ ಹುಟ್ಟಿಕೊಳ್ಳುತ್ತಾರೆ. ಅದರಲ್ಲೂ ಕೆಲವರ ಅಭಿಮಾನ ಮಿತಿ ಮೀರುವುದುಂಟು. ತಮ್ಮ ನೆಚ್ಚಿನ ಸ್ಪರ್ಧಿಗಾಗಿ ಅವರು ಏನು ಮಾಡಲು ಬೇಕಾದರೂ ಸಿದ್ಧರಿರುತ್ತಾರೆ. ಹಿಂದಿ ಬಿಗ್​ ಬಾಸ್​ 13ರ ಸ್ಪರ್ಧಿ ಪಾರಸ್​ ಛಾಬ್ರಾ ವಿಚಾರದಲ್ಲಿ ಹೀಗೆಯೇ ಆಗಿತ್ತು. ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹುಡುಗಿಯೊಬ್ಬಳು ಮೊದಲ ಮಹಡಿಯಿಂದ ಹಾರಿದ್ದಳು ಎಂಬ ವಿಷಯ ಈಗ ಗೊತ್ತಾಗಿದೆ.

ಮಾಧ್ಯಮವೊಂದಕ್ಕೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಪಾರಸ್​ ಛಾಬ್ರಾ ಅವರು ಈ ವಿಚಾರ ಬಾಯಿ ಬಿಟ್ಟಿದ್ದಾರೆ. ಹಿಂದಿಯ ಹಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿದ ಬಳಿಕ ಅವರಿಗೆ ಅಪಾರ ಜನಪ್ರಿಯತೆ ಸಿಕ್ಕಿತ್ತು. ಮಹಿಳಾಭಿಮಾನಿಗಳ ಸಂಖ್ಯೆಯೂ ಜಾಸ್ತಿ ಆಗಿತ್ತು. ಬಳಿಕ ಅವರು ಎಲ್ಲೇ ಹೋದರೂ ಜನರು ಮುತ್ತಿಕೊಳ್ಳಲು ಆರಂಭಿಸಿದ್ದರು. ಅದೇ ರೀತಿ ಒಮ್ಮೆ ಹುಡುಗಿಯೊಬ್ಬಳು ಅತಿರೇಕದ ಅಭಿಮಾನ ಪ್ರದರ್ಶನ ಮಾಡಿದ್ದಳು ಎಂಬ ವಿಷಯವನ್ನು ಪಾರಸ್​ ಛಾಬ್ರಾ ವಿವರಿಸಿದ್ದಾರೆ.

‘ಒಂದು ರಿಯಾಲಿಟಿ ಶೋಗಾಗಿ ಆಡಿಷನ್​ ನೀಡಲು ದೆಹಲಿಗೆ ಹೋಗಿದ್ದೆ. ಅಲ್ಲಿ ನನ್ನನ್ನು ನೋಡುತ್ತಿದ್ದಂತೆಯೇ ಹುಡುಗಿಯೊಬ್ಬಳು ಮೊದಲನೇ ಮಹಡಿಯಿಂದ ಜಿಗಿದುಬಿಟ್ಟಳು. ಅವಳು ನನ್ನ ದೊಡ್ಡ ಫ್ಯಾನ್​ ಆಗಿದ್ದಳು. ಆಕೆಗೆ ನನ್ನ ಜೊತೆ ಫೋಟೋ ತೆಗೆದುಕೊಳ್ಳಬೇಕಿತ್ತು. ಅವಳಿಗೆ ಎಲ್ಲಿ ಪೆಟ್ಟಾಗತ್ತದೋ, ಏನಾದರೂ ಅನಾಹುತ ಆಗಿಬಿಟ್ಟರೆ ಏನು ಗತಿ ಎಂದು ನಾನು ಚಿಂತಿಸುತ್ತಿದ್ದೆ. ಪುಣ್ಯಕ್ಕೆ ಏನೂ ತೊಂದರೆ ಆಗಲಿಲ್ಲ. ಆಕೆ ಬಂದು ಫೋಟೋ ಕ್ಲಿಕ್ಕಿಸಿಕೊಂಡು ಹೋದಳು’ ಎಂದಿದ್ದಾರೆ ಪಾರಸ್​ ಛಾಬ್ರಾ.

‘ಆ ಅಭಿಮಾನಿಯನ್ನು ನಾನು ಎಂದಿಗೂ ಮರೆಯುವುದಿಲ್ಲ. ಅದು ಮರೆಯಲಾರದ ಮತ್ತು ಶಾಕಿಂಗ್​ ಘಟನೆ ಆಗಿತ್ತು. ನಮ್ಮನ್ನು ಜನರು ಎಷ್ಟು ಪ್ರೀತಿಸುತ್ತಾರೆ ಎಂಬುದಕ್ಕೆ ಆ ಘಟನೆಯೇ ಸಾಕ್ಷಿ. ಅವರು ನಮಗಾಗಿ ಏನು ಮಾಡಲು ಬೇಕಾದರೂ ಸಿದ್ಧರಿರುತ್ತಾರೆ. ಒಂದೇ ಒಂದು ಫೋಟೋ ಸಲುವಾಗಿ ಮೊದಲ ಮಹಡಿಯಿಂದ ಜಿಗಿಯುವಷ್ಟು ಧೈರ್ಯ ಆಕೆಗೆ ಎಲ್ಲಿಂದ ಬಂತು ಎಂಬುದನ್ನು ಊಹೆ ಮಾಡಿಕೊಳ್ಳಲು ಸಾಧ್ಯವಿಲ್ಲ’ ಎಂದು ಪಾರಸ್​ ಛಾಬ್ರಾ ಹೇಳಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ ಮನೆ ಒಳಗೆ ಹೋಗಲಿದ್ದಾರೆ ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ?

ಪ್ರಭಾಸ್​ ಸಿನಿಮಾದಲ್ಲಿ ಬಿಗ್​ ಬಾಸ್​ ಸ್ಪರ್ಧಿಗೆ ಅವಕಾಶ? ಜೋರಾಗಿ ಹಬ್ಬಿದ್ದ ಗಾಸಿಪ್​ನ ಅಸಲಿಯತ್ತು ಇಲ್ಲಿದೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್