AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಟ್​ ಡ್ಯಾನ್ಸ್​ ಮೂಲಕ ಪಡ್ಡೆಗಳ ನಿದ್ದೆ ಕೆಡಿಸಿದ ಬಿಗ್​ ಬಾಸ್​ ಸ್ಪರ್ಧಿ ರಶ್ಮಿ

ಎಲ್ಲೆಲ್ಲೂ ಕೊರೊನಾ ಕಾಟ ಕೊಡುತ್ತಿದೆ. ಇಂಥ ಸಂದರ್ಭದಲ್ಲಿ ರಸ್ತೆಗೆ ಬಂದು ಡ್ಯಾನ್ಸ್​ ಮಾಡುವ ಬದಲು ಮನೆಯೊಳಗೆ ಇರಬೇಕು ಎಂಬುದಾಗಿಯೂ ಅನೇಕರು ರಶ್ಮಿಗೆ ಬುದ್ಧಿಮಾತು ಹೇಳಿದ್ದಾರೆ.

ಹಾಟ್​ ಡ್ಯಾನ್ಸ್​ ಮೂಲಕ ಪಡ್ಡೆಗಳ ನಿದ್ದೆ ಕೆಡಿಸಿದ ಬಿಗ್​ ಬಾಸ್​ ಸ್ಪರ್ಧಿ ರಶ್ಮಿ
ರಶ್ಮಿ ದೇಸಾಯಿ ವೈರಲ್​ ಡ್ಯಾನ್ಸ್​ ವಿಡಿಯೋ
ಮದನ್​ ಕುಮಾರ್​
| Edited By: |

Updated on: May 09, 2021 | 3:47 PM

Share

ದೇಶದ ಬಹುತೇಕ ಕಡೆಗಳಲ್ಲಿ ಲಾಕ್​ಡೌನ್​ ಜಾರಿ ಆಗಿದೆ. ಸಿನಿಮಾ, ಧಾರಾವಾಹಿ, ರಿಯಾಲಿಟಿ ಶೋಗಳ ಶೂಟಿಂಗ್​ ನಿಂತಿದೆ. ಈ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳನ್ನು ರಂಜಿಸಲು ಸೆಲೆಬ್ರಿಟಿಗಳೆಲ್ಲ ಸೋಶಿಯಲ್​ ಮೀಡಿಯಾ ಮೊರೆ ಹೋಗುತ್ತಿದ್ದಾರೆ. ಕಿರುತೆರೆಯ ಖ್ಯಾತ ನಟಿ, ಬಿಗ್​ ಬಾಸ್​ ಸ್ಪರ್ಧಿ ರಶ್ಮಿ ದೇಸಾಯಿ ಕೂಡ ಇನ್​ಸ್ಟಾಗ್ರಾಮ್​ನಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಇತ್ತೀಚೆಗೆ ಅವರು ಹಂಚಿಕೊಂಡಿರುವ ಒಂದು ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಅದನ್ನು ಕಂಡು ಪಡ್ಡೆ ಹುಡುಗರ ಎದೆಬಡಿತ ಹೆಚ್ಚಿದೆ.

ಬಾಲಿವುಡ್​ ಸಿನಿಮಾ ಮತ್ತು ಹಿಂದಿ ಕಿರುತೆರೆಯಲ್ಲಿ ನಟಿ ರಶ್ಮಿ ದೇಸಾಯಿ ಸಖತ್​ ಫೇಮಸ್​. ಹಿಂದಿ ಬಿಗ್​ ಬಾಸ್​ 13ರಲ್ಲಿ ಸ್ಪರ್ಧಿಸಿದ ಬಳಿಕ ಅವರ ಖ್ಯಾತಿ ಇನ್ನಷ್ಟು ಹೆಚ್ಚಿತು. ಆ ಸೀಸನ್​ನಲ್ಲಿ ಅವರು 3ನೇ ರನ್ನರ್​ ಅಪ್​ ಆಗಿದ್ದರು. ಪ್ರಸ್ತುತ ರಶ್ಮಿಗೆ ಇನ್​​ಸ್ಟಾಗ್ರಾಮ್​ನಲ್ಲಿ 42 ಲಕ್ಷಕ್ಕೂ ಅಧಿಕ ಫಾಲೋವರ್ಸ್​ ಇದ್ದಾರೆ. ಅವರೆಲ್ಲರಿಗಾಗಿ ರಶ್ಮಿ ಹಂಚಿಕೊಂಡಿರುವ ಒಂದು ವಿಡಿಯೋ ಈಗ ಸಖತ್​ ವೈರಲ್​ ಆಗಿದೆ. ಹಾಲಿವುಡ್​ನ ರ‍್ಯಾಪ್ ಸಿಂಗರ್​ ಕಾರ್ಡಿ ಬಿ ಅವರ ‘ಅಪ್’ ಹಾಡಿಗೆ ರಶ್ಮಿ ಸೂಪರ್​ ಆಗಿ ಹೆಜ್ಜೆ ಹಾಕಿದ್ದಾರೆ.

ಗ್ಲಾಮರಸ್​ ಆದಂತಹ ಕಾಸ್ಟ್ಯೂಮ್​ ಧರಿಸಿ ರಶ್ಮಿ ಡ್ಯಾನ್ಸ್​ ಮಾಡಿದ್ದಾರೆ. 20 ಲಕ್ಷಕ್ಕೂ ಅಧಿಕ ಬಾರಿ ಈ ವೀಕ್ಷಣೆ ​ಕಂಡಿದೆ. ಎರಡೂವರೆ ಲಕ್ಷಕ್ಕಿಂತಲೂ ಹೆಚ್ಚಿನ ಮಂದಿ ಇದನ್ನು ಲೈಕ್​ ಮಾಡಿದ್ದಾರೆ. ರ‍್ಯಾಪ್ ಸಿಂಗರ್​ ಕಾರ್ಡಿ ಬಿ ಅವರ ‘ಅಪ್’ ಹಾಡಿಗೆ ಯಾರು ಎಷ್ಟು ಚೆನ್ನಾಗಿ ಡ್ಯಾನ್​ ಮಾಡುತ್ತಾರೆ ಎಂಬ ಚಾಲೆಂಜ್​ ಸೋಶಿಯಲ್​ ಮೀಡಿಯಾದಲ್ಲಿ ಜೋರಾಗಿದೆ. ಸದ್ಯ ರಶ್ಮಿ ಮಾಡಿರುವ ಬಿಂದಾಸ್​ ಡಾನ್ಸ್​ಗೆ ಅವರ ಫ್ಯಾನ್ಸ್​ ಫಿದಾ ಆಗಿದ್ದಾರೆ.

ನಟನೆ ಮಾತ್ರವಲ್ಲದೆ ಭರತನಾಟ್ಯ ಮತ್ತು ಕಥಕ್​ನಲ್ಲಿ ರಶ್ಮಿ ಪರಿಣತಿ ಹೊಂದಿದ್ದಾರೆ. ಈ ಹಿಂದೆ ಅವರು ಡ್ಯಾನ್ಸ್​ ರಿಯಾಲಿಟಿ ಶೋಗಳನ್ನೂ ಭಾಗವಹಿಸಿದ್ದರು. ಹಾಗಾಗಿ ಅವರು ಇಷ್ಟ ಚೆನ್ನಾಗಿ ಡ್ಯಾನ್ಸ್​ ಮಾಡಬಲ್ಲರು. ಸದ್ಯ ಎಲ್ಲೆಲ್ಲೂ ಕೊರೊನಾ ಕಾಟ ಕೊಡುತ್ತಿದೆ. ಇಂಥ ಸಂದರ್ಭದಲ್ಲಿ ರಸ್ತೆಗೆ ಬಂದು ಡ್ಯಾನ್ಸ್​ ಮಾಡುವ ಬದಲು ಮನೆಯೊಳಗೆ ಇರಬೇಕು ಎಂಬುದಾಗಿಯೂ ಅನೇಕರು ರಶ್ಮಿಗೆ ಬುದ್ಧಿಮಾತು ಹೇಳಿದ್ದಾರೆ.

ಇದನ್ನೂ ಓದಿ:

Bigg Boss Kannada: ಬಿಗ್​ ಬಾಸ್​ ಕನ್ನಡ ಸೀಸನ್​​ 8ರಲ್ಲಿ ನಡೆಯಿತು ಯಾರೂ ಊಹಿಸಿರದ 3 ವಿಚಿತ್ರ ಘಟನೆಗಳು

ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ಈಡೇರಿತು ರಘು ಗೌಡ ಆಸೆ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ