AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯವರಿಗೆ ಬೇಡವಾದರಾ ಮಂಜು? ಎಲ್ಲರ ಅಸಲಿಮುಖ ಬಯಲು

ಪ್ರತಿವಾರ ನಾಮಿನೇಷನ್ ಪ್ರಕ್ರಿಯೆ ಸೋಮವಾರವೇ ನಡೆಯುತ್ತಿತ್ತು. ಆದರೆ, ಈ ವಾರ ವಿಳಂಬವಾಗಿದೆ. ಶುಕ್ರವಾರ ನಾಮಿನೇಷನ್​ ಪ್ರಕ್ರಿಯೆ ನಡೆದಿದೆ.

ಬಿಗ್​ ಬಾಸ್​ ಮನೆಯವರಿಗೆ ಬೇಡವಾದರಾ ಮಂಜು? ಎಲ್ಲರ ಅಸಲಿಮುಖ ಬಯಲು
ಮಂಜು ಪಾವಗಡ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: May 01, 2021 | 3:23 PM

Share

ಬಿಗ್​ ಬಾಸ್​ ಎಲಿಮಿನೇಷನ್​ ಪ್ರಕ್ರಿಯೆ​ ಎಂದರೆ ಮನೆಯವರಿಗೆ ಒಂದು ರೀತಿಯ ತಲೆನೋವು. ಸ್ಪರ್ಧಿಗಳನ್ನು ಕೇವಲ ನಾಮಿನೇಷನ್​ ಮಾಡಿದರೆ ಮಾತ್ರ ಸಾಲದು, ಅದಕ್ಕೆ ಸೂಕ್ತ ಕಾರಣವನ್ನು ಕೂಡ ನೀಡಬೇಕು. ಮನೆಯಲ್ಲಿ ಎಲ್ಲರ ಜತೆಯೂ ಉತ್ತಮವಾಗಿರುವ ಮಂಜು ಈಗ ಮನೆಯವರಿಗೆ ಬೇಡವಾಗಿದ್ದಾರೆ. ಈ ವಿಚಾರ ನಾಮಿನೇಷನ್​ ವೇಳೆ ಸ್ಪಷ್ಟವಾಗಿದೆ.

ಪ್ರತಿವಾರ ನಾಮಿನೇಷನ್ ಪ್ರಕ್ರಿಯೆ ಸೋಮವಾರವೇ ನಡೆಯುತ್ತಿತ್ತು. ಆದರೆ, ಈ ವಾರ ವಿಳಂಬವಾಗಿದೆ. ಶುಕ್ರವಾರ ನಾಮಿನೇಷನ್​ ಪ್ರಕ್ರಿಯೆ ನಡೆದಿದೆ. ಈ ವೇಳೆ ಬಹುತೇಕರು ಮಂಜು ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲದೆ ಅತಿ ಹೆಚ್ಚು ವೋಟ್​ ಪಡೆದು ಮಂಜು ಅವರೇ ನಾಮಿನೇಟ್​ ಲಿಸ್ಟ್​ನಲ್ಲಿ ಮೊದಲಿದ್ದಾರೆ.

ಈ ಬಾರಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ವೇಳೆ ಮಂಜು ತಪ್ಪು ನಿರ್ಧಾರ ತೆಗೆದುಕೊಂಡಿದ್ದರು. ಅರವಿಂದ್​ಗೋಸ್ಕರ ಅವರು ಆ ರೀತಿ ಮಾಡಿದ್ದಾರೆ ಎನ್ನುವ ಮಾತಿದೆ. ಈ ವಿಚಾರವನ್ನೇ ಇಟ್ಟುಕೊಂಡು ನಾಮಿನೇಷನ್​ ವೇಳೆ ಮನೆಯ ಬಹುತೇಕರು ಮಂಜು ಅವರ ಹೆಸರನ್ನು ತೆಗೆದುಕೊಂಡರು. ಅರವಿಂದ್​, ದಿವ್ಯಾ ಉರುಡುಗ, ಪ್ರಶಾಂತ್​ ಸೇರಿದಂತೆ ಬಹುತೇಕರು ಮಂಜು ಅವರನ್ನು ನಾಮಿನೇಷನ್​ಗೆ ಆಯ್ಕೆ ಮಾಡಿದರು.

ಮಂಜು ಪಾವಗಡ, ಗೇಮ್​ ಆಡಬೇಕಾದರೆ ಫೇವರಿಸಂ ಮಾಡುತ್ತಾರೆ, ದ್ವೇಷದ ಆಟ ಆಡುತ್ತಾರೆ, ಅವರು ರಿವೇಂಜ್​ ತೆಗೆದುಕೊಳ್ಳುತ್ತಾರೆ, ಮೋಸದ ಆಟ ಆಡುತ್ತಾರೆ ಎಂಬಿತ್ಯಾದಿ ಆರೋಪಗಳು ಬಂದವು. ಈ ಮೂಲಕ ಎಲಿಮಿನೇಷನ್​ ತೂಗುಗತ್ತಿ ಅವರ ತಲೆಯಮೇಲೆ ತೂಗುವಂತಾಯಿತು.

ಉಳಿದಂತೆ, ಪ್ರಶಾಂತ್, ಚಕ್ರವರ್ತಿ ಚಂದ್ರಚೂಡ್​, ಅರವಿಂದ್ ನಾಮಿನೇಟ್​ ಆದರು. ದಿವ್ಯಾ ಸುರೇಶ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ನೇರವಾಗಿ ನಾಮಿನೇಟ್​ ಆಗಿದ್ದಾರೆ. ಕ್ಯಾಪ್ಟನ್​ ರಘು ಗೌಡ ಅವರು ಒಬ್ಬರ ಹೆಸರನ್ನು ನೇರವಾಗಿ ನಾಮಿನೇಟ್​ ಮಾಡಬೇಕಿತ್ತು. ಆಗ ಅವರು ಶುಭಾ ಅವರ ಹೆಸರನ್ನು ತೆಗೆದುಕೊಂಡರು. ಶುಭಾ ಗೋಲ್ಡನ್​ ಪಾಸ್​ ಬಳಸಿ ನಾಮಿನೇಷನ್​ನಿಂದ ಬಚಾವ್​ ಆದರು.

ಇದನ್ನೂ ಓದಿ: ಇದಿನ್ನೂ ಕೆಟ್ಟದಾಗಿ ಕಾಣಿಸುತ್ತಿದೆ; ಪ್ರಶಾಂತ್​ ಸಂಬರಗಿ ಗುಣಗಳು ಚಕ್ರವರ್ತಿಗೆ ಅಸಹ್ಯ ಮೂಡಿಸುತ್ತಿವೆ

ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ