AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯವರಿಗೆ ಬೇಡವಾದರಾ ಮಂಜು? ಎಲ್ಲರ ಅಸಲಿಮುಖ ಬಯಲು

ಪ್ರತಿವಾರ ನಾಮಿನೇಷನ್ ಪ್ರಕ್ರಿಯೆ ಸೋಮವಾರವೇ ನಡೆಯುತ್ತಿತ್ತು. ಆದರೆ, ಈ ವಾರ ವಿಳಂಬವಾಗಿದೆ. ಶುಕ್ರವಾರ ನಾಮಿನೇಷನ್​ ಪ್ರಕ್ರಿಯೆ ನಡೆದಿದೆ.

ಬಿಗ್​ ಬಾಸ್​ ಮನೆಯವರಿಗೆ ಬೇಡವಾದರಾ ಮಂಜು? ಎಲ್ಲರ ಅಸಲಿಮುಖ ಬಯಲು
ಮಂಜು ಪಾವಗಡ
ರಾಜೇಶ್ ದುಗ್ಗುಮನೆ
| Edited By: |

Updated on: May 01, 2021 | 3:23 PM

Share

ಬಿಗ್​ ಬಾಸ್​ ಎಲಿಮಿನೇಷನ್​ ಪ್ರಕ್ರಿಯೆ​ ಎಂದರೆ ಮನೆಯವರಿಗೆ ಒಂದು ರೀತಿಯ ತಲೆನೋವು. ಸ್ಪರ್ಧಿಗಳನ್ನು ಕೇವಲ ನಾಮಿನೇಷನ್​ ಮಾಡಿದರೆ ಮಾತ್ರ ಸಾಲದು, ಅದಕ್ಕೆ ಸೂಕ್ತ ಕಾರಣವನ್ನು ಕೂಡ ನೀಡಬೇಕು. ಮನೆಯಲ್ಲಿ ಎಲ್ಲರ ಜತೆಯೂ ಉತ್ತಮವಾಗಿರುವ ಮಂಜು ಈಗ ಮನೆಯವರಿಗೆ ಬೇಡವಾಗಿದ್ದಾರೆ. ಈ ವಿಚಾರ ನಾಮಿನೇಷನ್​ ವೇಳೆ ಸ್ಪಷ್ಟವಾಗಿದೆ.

ಪ್ರತಿವಾರ ನಾಮಿನೇಷನ್ ಪ್ರಕ್ರಿಯೆ ಸೋಮವಾರವೇ ನಡೆಯುತ್ತಿತ್ತು. ಆದರೆ, ಈ ವಾರ ವಿಳಂಬವಾಗಿದೆ. ಶುಕ್ರವಾರ ನಾಮಿನೇಷನ್​ ಪ್ರಕ್ರಿಯೆ ನಡೆದಿದೆ. ಈ ವೇಳೆ ಬಹುತೇಕರು ಮಂಜು ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲದೆ ಅತಿ ಹೆಚ್ಚು ವೋಟ್​ ಪಡೆದು ಮಂಜು ಅವರೇ ನಾಮಿನೇಟ್​ ಲಿಸ್ಟ್​ನಲ್ಲಿ ಮೊದಲಿದ್ದಾರೆ.

ಈ ಬಾರಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ವೇಳೆ ಮಂಜು ತಪ್ಪು ನಿರ್ಧಾರ ತೆಗೆದುಕೊಂಡಿದ್ದರು. ಅರವಿಂದ್​ಗೋಸ್ಕರ ಅವರು ಆ ರೀತಿ ಮಾಡಿದ್ದಾರೆ ಎನ್ನುವ ಮಾತಿದೆ. ಈ ವಿಚಾರವನ್ನೇ ಇಟ್ಟುಕೊಂಡು ನಾಮಿನೇಷನ್​ ವೇಳೆ ಮನೆಯ ಬಹುತೇಕರು ಮಂಜು ಅವರ ಹೆಸರನ್ನು ತೆಗೆದುಕೊಂಡರು. ಅರವಿಂದ್​, ದಿವ್ಯಾ ಉರುಡುಗ, ಪ್ರಶಾಂತ್​ ಸೇರಿದಂತೆ ಬಹುತೇಕರು ಮಂಜು ಅವರನ್ನು ನಾಮಿನೇಷನ್​ಗೆ ಆಯ್ಕೆ ಮಾಡಿದರು.

ಮಂಜು ಪಾವಗಡ, ಗೇಮ್​ ಆಡಬೇಕಾದರೆ ಫೇವರಿಸಂ ಮಾಡುತ್ತಾರೆ, ದ್ವೇಷದ ಆಟ ಆಡುತ್ತಾರೆ, ಅವರು ರಿವೇಂಜ್​ ತೆಗೆದುಕೊಳ್ಳುತ್ತಾರೆ, ಮೋಸದ ಆಟ ಆಡುತ್ತಾರೆ ಎಂಬಿತ್ಯಾದಿ ಆರೋಪಗಳು ಬಂದವು. ಈ ಮೂಲಕ ಎಲಿಮಿನೇಷನ್​ ತೂಗುಗತ್ತಿ ಅವರ ತಲೆಯಮೇಲೆ ತೂಗುವಂತಾಯಿತು.

ಉಳಿದಂತೆ, ಪ್ರಶಾಂತ್, ಚಕ್ರವರ್ತಿ ಚಂದ್ರಚೂಡ್​, ಅರವಿಂದ್ ನಾಮಿನೇಟ್​ ಆದರು. ದಿವ್ಯಾ ಸುರೇಶ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ನೇರವಾಗಿ ನಾಮಿನೇಟ್​ ಆಗಿದ್ದಾರೆ. ಕ್ಯಾಪ್ಟನ್​ ರಘು ಗೌಡ ಅವರು ಒಬ್ಬರ ಹೆಸರನ್ನು ನೇರವಾಗಿ ನಾಮಿನೇಟ್​ ಮಾಡಬೇಕಿತ್ತು. ಆಗ ಅವರು ಶುಭಾ ಅವರ ಹೆಸರನ್ನು ತೆಗೆದುಕೊಂಡರು. ಶುಭಾ ಗೋಲ್ಡನ್​ ಪಾಸ್​ ಬಳಸಿ ನಾಮಿನೇಷನ್​ನಿಂದ ಬಚಾವ್​ ಆದರು.

ಇದನ್ನೂ ಓದಿ: ಇದಿನ್ನೂ ಕೆಟ್ಟದಾಗಿ ಕಾಣಿಸುತ್ತಿದೆ; ಪ್ರಶಾಂತ್​ ಸಂಬರಗಿ ಗುಣಗಳು ಚಕ್ರವರ್ತಿಗೆ ಅಸಹ್ಯ ಮೂಡಿಸುತ್ತಿವೆ

ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ