AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯವರಿಗೆ ಬೇಡವಾದರಾ ಮಂಜು? ಎಲ್ಲರ ಅಸಲಿಮುಖ ಬಯಲು

ಪ್ರತಿವಾರ ನಾಮಿನೇಷನ್ ಪ್ರಕ್ರಿಯೆ ಸೋಮವಾರವೇ ನಡೆಯುತ್ತಿತ್ತು. ಆದರೆ, ಈ ವಾರ ವಿಳಂಬವಾಗಿದೆ. ಶುಕ್ರವಾರ ನಾಮಿನೇಷನ್​ ಪ್ರಕ್ರಿಯೆ ನಡೆದಿದೆ.

ಬಿಗ್​ ಬಾಸ್​ ಮನೆಯವರಿಗೆ ಬೇಡವಾದರಾ ಮಂಜು? ಎಲ್ಲರ ಅಸಲಿಮುಖ ಬಯಲು
ಮಂಜು ಪಾವಗಡ
ರಾಜೇಶ್ ದುಗ್ಗುಮನೆ
| Edited By: |

Updated on: May 01, 2021 | 3:23 PM

Share

ಬಿಗ್​ ಬಾಸ್​ ಎಲಿಮಿನೇಷನ್​ ಪ್ರಕ್ರಿಯೆ​ ಎಂದರೆ ಮನೆಯವರಿಗೆ ಒಂದು ರೀತಿಯ ತಲೆನೋವು. ಸ್ಪರ್ಧಿಗಳನ್ನು ಕೇವಲ ನಾಮಿನೇಷನ್​ ಮಾಡಿದರೆ ಮಾತ್ರ ಸಾಲದು, ಅದಕ್ಕೆ ಸೂಕ್ತ ಕಾರಣವನ್ನು ಕೂಡ ನೀಡಬೇಕು. ಮನೆಯಲ್ಲಿ ಎಲ್ಲರ ಜತೆಯೂ ಉತ್ತಮವಾಗಿರುವ ಮಂಜು ಈಗ ಮನೆಯವರಿಗೆ ಬೇಡವಾಗಿದ್ದಾರೆ. ಈ ವಿಚಾರ ನಾಮಿನೇಷನ್​ ವೇಳೆ ಸ್ಪಷ್ಟವಾಗಿದೆ.

ಪ್ರತಿವಾರ ನಾಮಿನೇಷನ್ ಪ್ರಕ್ರಿಯೆ ಸೋಮವಾರವೇ ನಡೆಯುತ್ತಿತ್ತು. ಆದರೆ, ಈ ವಾರ ವಿಳಂಬವಾಗಿದೆ. ಶುಕ್ರವಾರ ನಾಮಿನೇಷನ್​ ಪ್ರಕ್ರಿಯೆ ನಡೆದಿದೆ. ಈ ವೇಳೆ ಬಹುತೇಕರು ಮಂಜು ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲದೆ ಅತಿ ಹೆಚ್ಚು ವೋಟ್​ ಪಡೆದು ಮಂಜು ಅವರೇ ನಾಮಿನೇಟ್​ ಲಿಸ್ಟ್​ನಲ್ಲಿ ಮೊದಲಿದ್ದಾರೆ.

ಈ ಬಾರಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ವೇಳೆ ಮಂಜು ತಪ್ಪು ನಿರ್ಧಾರ ತೆಗೆದುಕೊಂಡಿದ್ದರು. ಅರವಿಂದ್​ಗೋಸ್ಕರ ಅವರು ಆ ರೀತಿ ಮಾಡಿದ್ದಾರೆ ಎನ್ನುವ ಮಾತಿದೆ. ಈ ವಿಚಾರವನ್ನೇ ಇಟ್ಟುಕೊಂಡು ನಾಮಿನೇಷನ್​ ವೇಳೆ ಮನೆಯ ಬಹುತೇಕರು ಮಂಜು ಅವರ ಹೆಸರನ್ನು ತೆಗೆದುಕೊಂಡರು. ಅರವಿಂದ್​, ದಿವ್ಯಾ ಉರುಡುಗ, ಪ್ರಶಾಂತ್​ ಸೇರಿದಂತೆ ಬಹುತೇಕರು ಮಂಜು ಅವರನ್ನು ನಾಮಿನೇಷನ್​ಗೆ ಆಯ್ಕೆ ಮಾಡಿದರು.

ಮಂಜು ಪಾವಗಡ, ಗೇಮ್​ ಆಡಬೇಕಾದರೆ ಫೇವರಿಸಂ ಮಾಡುತ್ತಾರೆ, ದ್ವೇಷದ ಆಟ ಆಡುತ್ತಾರೆ, ಅವರು ರಿವೇಂಜ್​ ತೆಗೆದುಕೊಳ್ಳುತ್ತಾರೆ, ಮೋಸದ ಆಟ ಆಡುತ್ತಾರೆ ಎಂಬಿತ್ಯಾದಿ ಆರೋಪಗಳು ಬಂದವು. ಈ ಮೂಲಕ ಎಲಿಮಿನೇಷನ್​ ತೂಗುಗತ್ತಿ ಅವರ ತಲೆಯಮೇಲೆ ತೂಗುವಂತಾಯಿತು.

ಉಳಿದಂತೆ, ಪ್ರಶಾಂತ್, ಚಕ್ರವರ್ತಿ ಚಂದ್ರಚೂಡ್​, ಅರವಿಂದ್ ನಾಮಿನೇಟ್​ ಆದರು. ದಿವ್ಯಾ ಸುರೇಶ್​ ಹಾಗೂ ಪ್ರಿಯಾಂಕಾ ತಿಮ್ಮೇಶ್​ ನೇರವಾಗಿ ನಾಮಿನೇಟ್​ ಆಗಿದ್ದಾರೆ. ಕ್ಯಾಪ್ಟನ್​ ರಘು ಗೌಡ ಅವರು ಒಬ್ಬರ ಹೆಸರನ್ನು ನೇರವಾಗಿ ನಾಮಿನೇಟ್​ ಮಾಡಬೇಕಿತ್ತು. ಆಗ ಅವರು ಶುಭಾ ಅವರ ಹೆಸರನ್ನು ತೆಗೆದುಕೊಂಡರು. ಶುಭಾ ಗೋಲ್ಡನ್​ ಪಾಸ್​ ಬಳಸಿ ನಾಮಿನೇಷನ್​ನಿಂದ ಬಚಾವ್​ ಆದರು.

ಇದನ್ನೂ ಓದಿ: ಇದಿನ್ನೂ ಕೆಟ್ಟದಾಗಿ ಕಾಣಿಸುತ್ತಿದೆ; ಪ್ರಶಾಂತ್​ ಸಂಬರಗಿ ಗುಣಗಳು ಚಕ್ರವರ್ತಿಗೆ ಅಸಹ್ಯ ಮೂಡಿಸುತ್ತಿವೆ

ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು