AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಗೋಕೆ ಬಂದಿದ್ದೀರಾ ಅಥವಾ ಟಾಸ್ಕ್​ ಆಡೋಕಾ? ಶುಭಾಗೆ ಅರವಿಂದ್​ ಟಾಂಗ್​​

ನಮಗೆ ಬೆಡ್​ ರೂಂ ಮರಳಿ ಸಿಗುತ್ತದೆ ಎಂದು ಭಾವಿಸಿದ್ದೆವು. ಆದರೆ, ನನ್ನ ಊಹೆ ತಪ್ಪಾಗಿದೆ. ಈಗ ನಮಗೆ ಬೆಡ್​ರೂಂನ ಬೆಲೆ ಗೊತ್ತಾಗುತ್ತಿದೆ ಎಂದು ರಘು ಗೌಡ ಹೇಳಿದ್ದಾರೆ.

ಮಲಗೋಕೆ ಬಂದಿದ್ದೀರಾ ಅಥವಾ ಟಾಸ್ಕ್​ ಆಡೋಕಾ? ಶುಭಾಗೆ ಅರವಿಂದ್​ ಟಾಂಗ್​​
ಶುಭಾ-ಅರವಿಂದ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 17, 2021 | 10:32 PM

Share

ಶಮಂತ್​ ಅಲಿಯಾಸ್​ ಬ್ರೋ ಗೌಡ ಅವರ ಸ್ವಾರ್ಥಕ್ಕೆ ಇಡೀ ಮನೆಯವರು ಬಲಿ ಪಶು ಆಗಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ. ಬ್ರೋ ಗೌಡ ಮಾಡಿದ ಒಂದೇ ತಪ್ಪಿಗೆ ಇಡೀ ಮನೆಯಲ್ಲಿ ರಾಮಾಯಣವೇ ನಡೆದು ಹೋಗಿದೆ. ಸದ್ಯ, ಬಿಗ್​ ಬಾಸ್​ ಮನೆ ಮಂದಿಯವರಿಗೆ ಬೆಡ್​ ರೂಂ ಬೆಲೆ ಗೊತ್ತಾಗುತ್ತಿದೆ. ಇದಕ್ಕಾಗಿ ಬೆಡ್​ಗಾಗಿ ಕಿತ್ತಾಟ ಹೊಡೆದಾಟ ನಡೆದಿದೆ. ಕಳೆದ ವಾರ ಮೈಕ್​ ಇದ್ದ ಹೊರತಾಗಿಯೂ ಬ್ರೋ ಗೌಡ ಎಲ್ಲರ ಕಿವಿಯಲ್ಲಿ ಹೋಗಿ ಮಾತನಾಡುತ್ತಿದ್ದರು. ಈ ಮೂಲಕ ಶಮಂತ್​ ಅವರು ಬಿಗ್​ ಬಾಸ್​ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದಿದ್ದರು. ಅದಕ್ಕೆ ಶಿಕ್ಷೆಯಾಗಿ ಬಿಗ್​ ಬಾಸ್​ ಮೂರನೇ ವಾರದ ಎಲಿಮಿನೇಷನ್​ಗೆ ಶಮಂತ್​ ನೇರವಾಗಿ ನಾಮಿನೇಟ್​ ಆಗಬೇಕು ಅಥವಾ ಮನೆಯವರೆಲ್ಲರೂ ಬೆಡ್​ರೂಂ ಏರಿಯಾವನ್ನು ಬಿಟ್ಟುಕೊಡಬೇಕು ಎನ್ನುವ ಕಂಡೀಷನ್​ ಹಾಕಿದ್ದರು ಸುದೀಪ್​. ಮನೆಯವರೆಲ್ಲರೂ ಶಮಂತ್​ಗಾಗಿ ಬೆಡ್​ರೂಂ ಬಿಟ್ಟುಕೊಟ್ಟಿದ್ದರು. ಈಗ ಮನೆಯವರೆಲ್ಲರಿಗೂ ಬೆಡ್​ ರೂಂನ ಬೆಲೆ ಗೊತ್ತಾಗುತ್ತಿದೆ. ಅದನ್ನು ಪಡೆದುಕೊಳ್ಳಲು ಎಲ್ಲರೂ ಕಿತ್ತಾಡುತ್ತಿದ್ದಾರೆ.

ಟಾಸ್ಕ್​ವೊಂದರಲ್ಲಿ ಗೆದ್ದ ಅರವಿಂದ್​-ದಿವ್ಯಾ ಉರುಡುಗ ಜೋಡಿಗೆ ವಿಶೇಷವಾದ ಚಾರ್ಜರ್​ ಸಿಕ್ಕಿತು. ಅದನ್ನು ಅವರೇ ಇಟ್ಟುಕೊಳ್ಳಬಹುದು ಅಥವಾ ಅದನ್ನು ತ್ಯಾಗ ಮಾಡಿ ಮನೆಯ ಎಲ್ಲರಿಗೂ ಬೆಡ್​ ರೂಮ್​ ಕೊಡಿಸಬಹುದು. ಈ ಎರಡು ಅವಕಾಶಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಲು ದಿವ್ಯಾ ಮತ್ತು ಅರವಿಂದ್​ 10 ನಿಮಿಷ ಸಮಯಾವಕಾಶ ಕೇಳಿದರು. ಖಂಡಿತವಾಗಿಯೂ ಅವರು ಆ ಚಾರ್ಜರ್​ ತ್ಯಾಗ ಮಾಡಿ, ಮನೆಯ ಸದಸ್ಯರಿಗೆ ಬೆಡ್​ ರೂಮ್​ ಕೊಡಿಸುತ್ತಾರೆ ಎಂದೇ ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಅವರ ಊಹೆ ತಪ್ಪಾಯಿತು. ಇದು ಒಂದು ಗೇಮ್​. ಇಲ್ಲಿ ಭಾವನೆಗಳಿಗೆ ಬಲಿ ಆಗಬಾರದು ಎಂಬ ಕಾರಣಕ್ಕೆ ದಿವ್ಯಾ ಮತ್ತು ಅರವಿಂದ್​ ಚಾರ್ಜರ್​ ಅನ್ನು ತಮ್ಮ ಬಳಿಯೇ ಇಟ್ಟುಕೊಳ್ಳಲು ನಿರ್ಧರಿಸಿದ್ದರು.

ಈ ಬಗ್ಗೆ ಮಾತನಾಡಿರುವ ರಘು ಗೌಡ, ನಮಗೆ ಬೆಡ್​ ರೂಂ ಮರಳಿ ಸಿಗುತ್ತದೆ ಎಂದು ಭಾವಿಸಿದ್ದೆವು. ಆದರೆ, ನನ್ನ ಊಹೆ ತಪ್ಪಾಗಿದೆ. ಈಗ ನಮಗೆ ಬೆಡ್​ರೂಂನ ಬೆಲೆ ಗೊತ್ತಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನು ಕೇಳಿದ ಪ್ರಶಾಂತ್​ ಸಂಬರಗಿ ಕೂಡ ಹೌದು ಎಂದಿದ್ದಾರೆ. ಇನ್ನು, ದಿವ್ಯಾ ಉರುಡುಗ ಎಲ್ಲರ ಬಳಿ ಹೋಗಿ ಸಾರಿ ಕೇಳುತ್ತಿದ್ದರೂ ಯಾರೂ ಸರಿಯಾಗಿ ಪ್ರತಿಕ್ರಿಯಿಸಲಿಲ್ಲ. ಈ ವಿಚಾರದ ಬಗ್ಗೆ ಮಾತನಾಡಿರುವ ಅರವಿಂದ್, ಇದು ಟಾಸ್ಕ್​. ಟಾಸ್ಕ್​ ರೂಪದಲ್ಲೇ ಸ್ವೀಕರಿಸಬೇಕು. ಅದನ್ನು ಬಿಟ್ಟು ದೊಡ್ಡ ದೊಡ್ಡ ಮಾತುಗಳನ್ನು ಆಡುವುದಲ್ಲ. ಅಷ್ಟಕ್ಕೂ ಇವರು ಟಾಸ್ಕ್ ಮಾಡೋಕೆ ಬಂದಿದ್ದಾರಾ ಅಥವಾ ಗೇಮ್​ ಆಡೋದಕ್ಕಾ ಎಂದು ಕೇಳುವ ಮೂಲಕ ಶುಭಾ ಪೂಂಜಾಗೆ ತಿರುಗೇಟು ನೀಡಿದರು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಅಶ್ವತ್ಥ್​ ಶಂಕರ್​ ನಿಜವಾದ ಬಣ್ಣ ಬಯಲು..

Published On - 10:19 pm, Wed, 17 March 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ