AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ ಪ್ರದರ್ಶನದ ಮಧ್ಯೆಯೂ ಬಿಗ್ ಬಾಸ್​ ಇತಿಹಾಸದಲ್ಲೇ ಯಾರೂ ಮಾಡಿರದ ದಾಖಲೆ ಮಾಡಿದ್ದಾರೆ ಶಮಂತ್​!

ಬಿಗ್​ ಬಾಸ್​ನ ಸೂಪರ್ ಸಂಡೆ ವಿತ್ ಸುದೀಪ ಕಾರ್ಯಕ್ರಮದಲ್ಲಿ ಸುದೀಪ್​ ಮಾತನಾಡಿದ್ದಾರೆ. ಈ ವೇಳೆ ಅವರು ಶಮಂತ್​ ಮಾಡಿದ ಸಾಧನೆ ಬಗ್ಗೆ ಹೇಳಿಕೊಂಡಿದ್ದಾರೆ.

ಕಳಪೆ ಪ್ರದರ್ಶನದ ಮಧ್ಯೆಯೂ ಬಿಗ್ ಬಾಸ್​ ಇತಿಹಾಸದಲ್ಲೇ ಯಾರೂ ಮಾಡಿರದ ದಾಖಲೆ ಮಾಡಿದ್ದಾರೆ ಶಮಂತ್​!
ಶಮಂತ್​
ರಾಜೇಶ್ ದುಗ್ಗುಮನೆ
|

Updated on:Mar 14, 2021 | 9:40 PM

Share

ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ತುಂಬಾನೇ ಚರ್ಚೆ ಆದ ಸ್ಪರ್ಧಿ. ಶಮಂತ್​ ಅವರು ನಿಧಿ ಜೊತೆ ಬೇರೆ ರೀತಿ ನಡೆದುಕೊಂಡರು ಎಂಬ ಆರೋಪ ಕೂಡ ಕೇಳಿಬಂತು. ನಾಯಕನಾಗಿ ಅವರು ಕಳಪೆ ಸಾಧನೆ ಮಾಡಿದ್ದಾರೆ ಎನ್ನುವ ಪಟ್ಟವನ್ನು ಕೂಡ ಹೊತ್ತರು. ಈ ಮಧ್ಯೆ ಬಿಗ್​ ಬಾಸ್​ ಇತಿಹಾಸದಲ್ಲೇ ಶಮಂತ್​ ಯಾರೂ ಮಾಡಿರದ ಸಾಧನೆ ಮಾಡಿದ್ದಾರಂತೆ!

ಬಿಗ್​ ಬಾಸ್​ನ ಸೂಪರ್ ಸಂಡೆ ವಿತ್ ಸುದೀಪ ಕಾರ್ಯಕ್ರಮದಲ್ಲಿ ಸುದೀಪ್​ ಮಾತನಾಡಿದ್ದಾರೆ. ಈ ವೇಳೆ ಅವರು ಶಮಂತ್​ ಮಾಡಿದ ಸಾಧನೆ ಬಗ್ಗೆ ಹೇಳಿಕೊಂಡಿದ್ದಾರೆ. ಶಮಂತ್​ ಅವರೇ ನೀವು ನೇರವಾಗಿ ಎರಡು ವಾರ ಕ್ಯಾಪ್ಟನ್​ ಆಗಿದ್ದೀರಿ. ಬಿಗ್​ ಬಾಸ್​ ಇತಿಹಾಸದಲ್ಲೇ ಯಾರೂ ನೇರವಾಗಿ ಎರಡು ವಾರ ಕ್ಯಾಪ್ಟನ್​ ಆಗಿಲ್ಲ. ಇದು ನೀವು ಮಾಡಿದ ದೊಡ್ಡ ಸಾಧನೆ ಎಂದರು.

ಕ್ಯಾಪ್ಟನ್ಸಿ ಮುಗಿದ ಕೂಡಲೇ ಶಮಂತ್ ಜೈಲು ಸೇರಿದರು. ಈ ಬಗ್ಗೆಯೂ ಸುದೀಪ್ ಮಾತನಾಡಿದ್ದಾರೆ. ಎರಡು ವಾರ ನಾಯಕನಾದ ತಕ್ಷಣವೇ ನೀವು ಜೈಲಿಗೆ ಹೋಗಿದ್ದೀರಾ. ಕಳಪೆ ಸಾಧನೆ ಮಾಡಿದ್ದೀರಿ ಎನ್ನುವ ಪಟ್ಟ ಕಟ್ಟಿಕೊಂಡಿದ್ದೀರಾ. ಇದು ನಿಜಕ್ಕೂ ಬೇಸರದ ಸಂಗತಿ ಎಂದರು ಸುದೀಪ್​.

ವೈಷ್ಣವಿಯ ಬಟ್ಟೆ ಎಳೆದ ಶಮಂತ್​ ಬ್ರೋ ಗೌಡ- ಸನ್ನಿಧಿ 

ಎರಡನೇ ವಾರದಲ್ಲಿ ಮನೆಯೊಳಗಿನ ಸ್ಪರ್ಧಿಗಳಿಗೆ ವೈರಸ್​ ವರ್ಸಸ್​ ಮನುಷ್ಯರು ಎಂಬ ಟಾಸ್ಕ್​ ನೀಡಲಾಗಿತ್ತು. ಅದರಲ್ಲಿ ಎಲ್ಲರೂ ತುಂಬ ಆಕ್ರಮಣಕಾರಿಯಾಗಿ ಆಟ ಆಡಿದರು. ಈ ಟಾಸ್ಕ್​ ನಿಭಾಯಿಸುವಾಗ ಶಮಂತ್​ ಅವರು ತಮ್ಮ ಬಟ್ಟೆ ಎಳೆದರು ಎಂದು ವೈಷ್ಣವಿ ಹೇಳಿದ್ದಾರೆ. ಈ ವಿಚಾರವನ್ನೇ ಇಟ್ಟುಕೊಂಡು ಕಿಚ್ಚ ಸುದೀಪ್​ ವಾರದ ಪಂಚಾಯಿತಿಯಲ್ಲಿ ಮಾತುಕತೆ ಮಾಡಿದ್ದಾರೆ. ಮನೆಯೊಳಗಿನ ಹೆಣ್ಣುಮಕ್ಕಳ ಸುರಕ್ಷತೆ ಬಗ್ಗೆ ಸುದೀಪ್​ ಕಾಳಜಿ ವಹಿಸಿದ್ದಾರೆ.

‘ಶಮಂತ್​ ಮೊದಲ ಬಾರಿಗೆ ನನ್ನ ಬಟ್ಟೆ ಎಳೆದರು. ಕೈ ಕಾಲು ಎಳೆಯಿರಿ. ಆದರೆ ಬಟ್ಟೆ ಎಳೆಯಬೇಡಿ ಎಂದು ನಾನು ಶಮಂತ್​ಗೆ ಹೇಳಿದೆ. ಒಮ್ಮೆ ಸುಮ್ಮನಾದೆ. ಆಮೇಲೆ ಅವರು ಸಾರಿ ಕೇಳಿದರು. ಆದರೆ ಮತ್ತೊಮ್ಮೆ ಅದೇ ರೀತಿ ಮಾಡಿದರು. ಅಲ್ಲದೆ, ನನ್ನನ್ನು ಅವರು ತಳ್ಳಿದರು. ಆಗಲೂ ನನಗೆ ಬೇಜಾರಾಯಿತು’ ಎಂದು ತಮ್ಮ ಅಳಲನ್ನು ವೈಷ್ಣವಿ ತೋಡಿಕೊಂಡಿದ್ದಾರೆ. ನಿಮ್ಮ ಪ್ರಕಾರ ನಿಮ್ಮ ತಂಡದವರು ಎದುರಾಳಿ ತಂಡದವರ ಜೊತೆ ಈ ರೀತಿ ನಡೆದುಕೊಂಡಿಲ್ಲವೇ ಎಂದು ಸುದೀಪ್​ ಕೇಳಿದ್ದಕ್ಕೆ ‘ಇರಬಹುದು’ ಎಂದು ವೈಷ್ಣವಿ ಉತ್ತರ ನೀಡಿದರು.​

ಮಂಜು ಮತ್ತು ಶಮಂತ್​ ಅವರು ನಿಧಿ ಜೊತೆ ಬೇರೆ ರೀತಿ ನಡೆದುಕೊಂಡರು ಎಂಬ ಆರೋಪ ಕೂಡ ಕೇಳಿಬಂತು. ಅದಕ್ಕೂ ಸುದೀಪ್​ ಪ್ರತಿಕ್ರಿಯೆ ನೀಡಿದರು. ‘ಬಿಗ್ ಬಾಸ್ ಮನೆಯಲ್ಲಿ ಈ ರೀತಿಯ ಆರೋಪ ಮೊದಲನೇ ಸಲ ಅಲ್ಲ. ನಿಮಗೆ ಅನ್​ಕಂಫರ್ಟೆಬಲ್ ಆಗಿಲ್ಲ ಎಂದು ನಾನು ಹೇಳ್ತಾ ಇಲ್ಲ. ಆದರೆ ಯಾರಾದರೂ ಕೆಟ್ಟ ಉದ್ದೇಶದಿಂದ, ಅಕಸ್ಮಾತ್ ಆಗಿ ಅಂಥದ್ದೇನಾದರೂ ನಡೆಸ್ತಾ ಇದಾರೆ ಅಂತ ಗೊತ್ತಾದರೆ ಬಿಗ್​ ಬಾಸ್​ ಖಡಾಖಂಡಿತವಾಗಿ ತಕ್ಷಣ ಮಧ್ಯ ಪ್ರವೇಶಿಸ್ತಾರೆ. ನೀವು ನಂಬಲೇ ಬೇಕು. ಬಿಗ್​ ಬಾಸ್​ ನಿಮ್ಮ ಜೊತೆ ಇದ್ದೇ ಇರ್ತಾರೆ’ ಎಂದಿದ್ದಾರೆ ಸುದೀಪ್​.

ಇದನ್ನೂ ಓದಿ: ಸಿಕ್ಕಾಪಟ್ಟೆ ಹಾರಾಡೋ​ ಮಂಜುಗೆ ಅಲ್ಲಿ ಸರ್ಜರಿ ಮಾಡಿಸಬೇಕು; ಸೈಲೆಂಟ್​ ವೈಷ್ಣವಿ ಕೊಟ್ರು ಖಡಕ್​ ಟಾಂಗ್​!

Published On - 9:39 pm, Sun, 14 March 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ