AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ಈ ಬಾರಿಯ ಬಿಗ್​ ಬಾಸ್​ 9 ಸದಸ್ಯರ ಮೇಲೆ ಎಲಿಮಿನೇಷನ್​ ತೂಗುಗತ್ತಿ

ಈಗ ಮೂರನೇ ವಾರದ ಎಲಿಮಿನೇಷನ್​​ ಪ್ರಕ್ರಿಯೆ ಆರಂಭವಾಗಿದೆ. ಈ ವಾರ 9 ಸದಸ್ಯರು ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದಾರೆ. ಅವರ ಹೆಸರುಗಳ ಬಗ್ಗೆ ಇಲ್ಲಿದೆ ಮಾಹಿತಿ.

BBK8: ಈ ಬಾರಿಯ ಬಿಗ್​ ಬಾಸ್​ 9 ಸದಸ್ಯರ ಮೇಲೆ ಎಲಿಮಿನೇಷನ್​ ತೂಗುಗತ್ತಿ
ಬಿಗ್ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
| Edited By: |

Updated on: Mar 16, 2021 | 6:48 AM

Share

ಕನ್ನಡ ಬಿಗ್​ ಬಾಸ್​ ಎಂಟನೇ ಸೀಸನ್​ನ ಮೊದಲೇ ವಾರದಲ್ಲಿ ಧನುಶ್ರೀ ,ಎರಡನೇ ವಾರದಲ್ಲಿ ನಿರ್ಮಲಾ ಎಲಿಮಿನೇಷ್​​ ಆಗಿ ಮನೆಯಿಂದ ಹೊರಹೋಗಿದ್ದಾರೆ. ಈಗ ಮೂರನೇ ವಾರದ ಎಲಿಮಿನೇಷನ್​​ ಪ್ರಕ್ರಿಯೆ ಆರಂಭವಾಗಿದೆ. ಈ ವಾರ 9 ಸದಸ್ಯರು ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದಾರೆ. ಅವರ ಹೆಸರುಗಳ ಬಗ್ಗೆ ಇಲ್ಲಿದೆ ಮಾಹಿತಿ.

ಶಮಂತ್​, ನಿಧಿ ಸುಬ್ಬಯ್ಯ, ಗೀತಾ, ರಘು, ಅರವಿಂದ್, ವಿಶ್ವನಾಥ್​, ದಿವ್ಯಾ ಉರುಡುಗ, ದಿವ್ಯಾ ಸುರೇಶ್, ಪ್ರಶಾಂತ್​ ಸಂಬರಗಿ ನಾಮಿನೇಟ್​ ಆದರು. ಶಂಕರ್​ ಅಶ್ವತ್ಥ್​ ನಾಮಿನೇಟ್​ ಆಗಿದ್ದರೂ ಮನೆಯ ಕ್ಯಾಪ್ಟನ್​ ಸೇವ್​ ಮಾಡಿದ್ದಾರೆ.

ಶಮಂತ್​ ಹಾಗೂ ನಿಧಿಗೆ ಅತಿ ಹೆಚ್ಚು ಮತ ಬಿದ್ದಿತ್ತು. ಶಮಂತ್​ ಎರಡು ವಾರ ಸರಿಯಾಗಿ ಆಟವಾಡಿಲ್ಲ. ಕ್ಯಾಪ್ಟನ್ಸಿಯಿಂದ ಅವರು ಸೇವ್​ ಆಗಿದ್ದಾರೆ. 20ರ ಹುಡುಗನ ತರ ಆಡ್ತಾರೆ. ಉದ್ದೇಶ ಮರೆತಿದಾರೆ ಎಂದು ಮನೆ ಸದಸ್ಯರು ದೂರಿದರು. ನಿಧಿ ಮನಸ್ಸಿನಿಂದ ಆಡಿಲ್ಲ. ನಿಧಿ ಎಲ್ಲರನ್ನೂ ಇಗ್ನೋರ್​ ಮಾಡ್ತಾ ಇದಾರೆ ಎನ್ನುವ ದೂರನ್ನು ಹೇಳಿದರು.

ಈ ವಾರ ಜೋಡಿಗಳು ನಾಮಿನೇಟ್​ ಮಾಡಬೇಕಿತ್ತು. ಹಾಗಾದರೆ ಯಾವ ಜೋಡಿ ಯಾರನ್ನು ನಾಮಿನೇಟ್​ ಮಾಡಿದರು ಎನ್ನುವ ಬಗ್ಗೆ ಇಲ್ಲಿದೆ ವಿವರ.

ಪ್ರಶಾಂತ್​-ಶುಭಾ: ಶಮಂತ್​-ನಿಧಿ ದಿವ್ಯಾ-ವಿಶ್ವ: ಶಮಂತ್​-ನಿಧಿ ರಘು-ವೈಷ್ಣವಿ: ಶಮಂತ್​-ಗೀತಾ ಅಶ್ವತ್ಥ್​-ಗೀತಾ: ರಘು-ನಿಧಿ ಗೀತಾ-ಮಂಜು: ಅರವಿಂದ್​ -ಶಮಂತ್​ ಶಮಂತ್​-ನಿಧಿ: ವಿಶ್ವ-ದಿವ್ಯ ಅರವಿಂದ್​-ದಿವ್ಯ: ದಿವ್ಯ ಸುರೇಶ್​-ಶಂಕರ್

ಶಮಂತ್ ಅವರನ್ನು ಮನೆಯಿಂದ ಹೊರಗೆ ಕಳಿಸೋ ಬೇಡಿಕೆ:

ಮೈಕ್​ ಇದ್ದ ಹೊರತಾಗಿಯೂ ಬ್ರೋ ಗೌಡ ಎಲ್ಲರ ಕಿವಿಯಲ್ಲಿ ಹೋಗಿ ಮಾತನಾಡುತ್ತಿದ್ದರು. ಇದಕ್ಕೆ ಸುದೀಪ್​ ಸಿಟ್ಟಾಗಿದ್ದರು. ಲಕ್ಷಾಂತರ ರೂಪಾಯಿ ಖರ್ಚುಮಾಡಿ ಮೈಕ್​ ನೀಡುತ್ತೇವೆ. ಆದರೆ, ಕಿವಿಯಲ್ಲಿ ಹೋಗಿ ಮಾತನಾಡುವ ಮೂಲಕ ಶಮಂತ್​ ಅವರು ಬಿಗ್​ ಬಾಸ್​ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದಿದ್ದ ಸುದೀಪ್​, ಇದಕ್ಕೆ ಶಿಕ್ಷೆ ನೀಡುವುದಾಗಿಯೂ ಹೇಳಿದರು.

ಬಿಗ್​ ಬಾಸ್​ ಮೂರನೇ ವಾರದ ಎಲಿಮಿನೇಷನ್​ಗೆ ಶಮಂತ್​ ನೇರವಾಗಿ ನಾಮಿನೇಟ್​ ಆಗಬೇಕು ಅಥವಾ ಮನೆಯವರೆಲ್ಲರೂ ಬೆಡ್​ರೂಂ ಏರಿಯಾವನ್ನು ಬಿಟ್ಟುಕೊಡಬೇಕು ಎನ್ನುವ ಕಂಡೀಷನ್​ ಹಾಕಿದರು ಸುದೀಪ್​. ಬ್ರೋ ಗೌಡ ಅವರನ್ನು ಉಳಿಸಲು ಮನೆಯಲ್ಲಿ ಕೆಲವರು ಸಮ್ಮತಿ ಸೂಚಿಸಿದರೆ ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದರು. ಆದರೆ, ಶಮಂತ್​ ಎಮೋಷನಲ್​ ಆಗಿ ಡೈಲಾಗ್​ ಹೊಡೆದರು. ನನ್ನ ಅಪ್ಪ-ಅಮ್ಮ ಉಸಿರಾಡ್ತಿರೋದು ನನ್ನ ಹೆಸರಿಂದ ಎಂದು ಹೇಳಿ ಭಾವುಕರಾದರು. ಹೀಗಾಗಿ ಮನೆಯವರೆಲ್ಲರೂ ಬೆಡ್​ ರೂಂ ಬಿಡೋಕೆ ಒಪ್ಪಿಕೊಂಡರು. ಈ ಮೂಲಕ ಶಮಂತ್​ ಸೇಫ್​ ಆದರು.

ಶಮಂತ್​ ಅವರನ್ನು ಉಳಿಸೋಕೆ ಹೋಗಿ ಈಗ ಮನೆಮಂದಿಯೆಲ್ಲ ಲಿವಿಂಗ್ ಏರಿಯಾದಲ್ಲಿ ಉಳಿದುಕೊಳ್ಳುವಂತಾಗಿದೆ. ಯಾರಿಗೂ ನಿದ್ರೆ ಕೂಡ ಬರುತ್ತಿಲ್ಲ. ಇದು ಮನೆಯವರ ಕೋಪಕ್ಕೆ ಕಾರಣವಾಗಿದೆ. ಎಲ್ಲರೂ ಶಮಂತ್​ ವಿರುದ್ಧ ಕಿಡಿಕಾರುತ್ತಿದ್ದಾರೆ. ಅಷ್ಟೇ ಅಲ್ಲ ಶಮಂತ್​ ಸ್ವಾರ್ಥ ಜೀವಿ ಎಂದು ಕಿಡಿಕಾರುತ್ತಿದ್ದಾರೆ. ಇಂದು ಬಿಗ್​ ಬಾಸ್​ ಎದುರು ಮನೆ ಮಂದಿ ಹೊಸ ಬೇಡಿಕೆ ಇಟ್ಟಿದ್ದಾರೆ. ಶಮಂತ್​ ಅವರನ್ನು ಬೇಕಿದ್ದರೆ ಮನೆಯಿಂದ ಹೊರಗೆ ಕಳುಹಿಸಿ. ನಮಗೆ ನಮ್ಮ ಬೆಡ್​ ರೂಂ ಮತ್ತೆ ಬೇಕು ಎಂದಿದ್ದಾರೆ.

ಇದನ್ನೂ ಓದಿ: ಶಮಂತ್ ಅವರನ್ನು ಮನೆಯಿಂದ ಹೊರಗೆ ಕಳುಹಿಸಿ; ಬಿಗ್​ ಬಾಸ್​ ಎದುರು ಸ್ಪರ್ಧಿಗಳ ಹೊಸ ಬೇಡಿಕೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?