ಶಮಂತ್ ಅವರನ್ನು ಮನೆಯಿಂದ ಹೊರಗೆ ಕಳುಹಿಸಿ; ಬಿಗ್​ ಬಾಸ್​ ಎದುರು ಸ್ಪರ್ಧಿಗಳ ಹೊಸ ಬೇಡಿಕೆ

ಇಂದು ಬಿಗ್​ ಬಾಸ್​ ಎದುರು ಮನೆ ಮಂದಿ ಹೊಸ ಬೇಡಿಕೆ ಇಟ್ಟಿದ್ದಾರೆ. ಶಮಂತ್​ ಅವರನ್ನು ಮನೆಯಿಂದ ಹೊರಗೆ ಕಳುಹಿಸಿ ಎಂದಿದ್ದಾರೆ ಮನೆ ಮಂದಿ.

ಶಮಂತ್ ಅವರನ್ನು ಮನೆಯಿಂದ ಹೊರಗೆ ಕಳುಹಿಸಿ; ಬಿಗ್​ ಬಾಸ್​ ಎದುರು ಸ್ಪರ್ಧಿಗಳ ಹೊಸ ಬೇಡಿಕೆ
ಬಿಗ್​ ಬಾಸ್​ ಕನ್ನಡ ಸೀಸನ್​ 8
Follow us
|

Updated on: Mar 15, 2021 | 10:21 PM

ಬಿಗ್​ ಬಾಸ್​ ಮನೆಯಲ್ಲಿ ಎಲ್ಲರದ್ದೂ ಒಂದೇ ಬೇಡಿಕೆ. ಶಮಂತ್ ಅವರನ್ನು ಮನೆಯಿಂದ ಹೊರಗೆ ಕಳುಹಿಸಬೇಕು! ಅಷ್ಟಕ್ಕೂ ಎಲ್ಲರೂ ಈ ಬೇಡಿಕೆ ಇಟ್ಟಿದ್ದೇಕೆ ಎನ್ನುವ ಪ್ರಶ್ನೆಗೆ ಉತ್ತರ ಶಮಂತ್​ ಅಲಿಯಾಸ್​ ಬ್ರೋ ಗೌಡ ಅವರ ಸ್ವಾರ್ಥ! ಮೈಕ್​ ಇದ್ದ ಹೊರತಾಗಿಯೂ ಬ್ರೋ ಗೌಡ ಎಲ್ಲರ ಕಿವಿಯಲ್ಲಿ ಹೋಗಿ ಮಾತನಾಡುತ್ತಿದ್ದರು. ಇದಕ್ಕೆ ಸುದೀಪ್​ ಸಿಟ್ಟಾಗಿದ್ದರು. ಲಕ್ಷಾಂತರ ರೂಪಾಯಿ ಖರ್ಚುಮಾಡಿ ಮೈಕ್​ ನೀಡುತ್ತೇವೆ. ಆದರೆ, ಕಿವಿಯಲ್ಲಿ ಹೋಗಿ ಮಾತನಾಡುವ ಮೂಲಕ ಶಮಂತ್​  ಅವರು ಬಿಗ್​ ಬಾಸ್​ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದಿದ್ದ ಸುದೀಪ್​, ಇದಕ್ಕೆ ಶಿಕ್ಷೆ ನೀಡುವುದಾಗಿಯೂ ಹೇಳಿದರು.

ಬಿಗ್​ ಬಾಸ್​ ಮೂರನೇ ವಾರದ ಎಲಿಮಿನೇಷನ್​ಗೆ ಶಮಂತ್​ ನೇರವಾಗಿ ನಾಮಿನೇಟ್​ ಆಗಬೇಕು ಅಥವಾ ಮನೆಯವರೆಲ್ಲರೂ ಬೆಡ್​ರೂಂ ಏರಿಯಾವನ್ನು ಬಿಟ್ಟುಕೊಡಬೇಕು ಎನ್ನುವ ಕಂಡೀಷನ್​ ಹಾಕಿದರು ಸುದೀಪ್​. ಬ್ರೋ ಗೌಡ ಅವರನ್ನು ಉಳಿಸಲು ಮನೆಯಲ್ಲಿ ಕೆಲವರು ಸಮ್ಮತಿ ಸೂಚಿಸಿದರೆ ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದರು. ಆದರೆ, ಶಮಂತ್​ ಎಮೋಷನಲ್​ ಆಗಿ ಡೈಲಾಗ್​ ಹೊಡೆದರು. ನನ್ನ ಅಪ್ಪ-ಅಮ್ಮ ಉಸಿರಾಡ್ತಿರೋದು ನನ್ನ ಹೆಸರಿಂದ ಎಂದು ಹೇಳಿ ಭಾವುಕರಾದರು. ಹೀಗಾಗಿ ಮನೆಯವರೆಲ್ಲರೂ ಬೆಡ್​ ರೂಂ ಬಿಡೋಕೆ ಒಪ್ಪಿಕೊಂಡರು. ಈ ಮೂಲಕ ಶಮಂತ್​ ಸೇಫ್​ ಆದರು.

ಶಮಂತ್​ ಅವರನ್ನು ಉಳಿಸೋಕೆ ಹೋಗಿ ಈಗ ಮನೆಮಂದಿಯೆಲ್ಲ ಲಿವಿಂಗ್ ಏರಿಯಾದಲ್ಲಿ ಉಳಿದುಕೊಳ್ಳುವಂತಾಗಿದೆ. ಯಾರಿಗೂ ನಿದ್ರೆ ಕೂಡ ಬರುತ್ತಿಲ್ಲ. ಇದು ಮನೆಯವರ ಕೋಪಕ್ಕೆ ಕಾರಣವಾಗಿದೆ. ಎಲ್ಲರೂ ಶಮಂತ್​ ವಿರುದ್ಧ ಕಿಡಿಕಾರುತ್ತಿದ್ದಾರೆ. ಅಷ್ಟೇ ಅಲ್ಲ ಶಮಂತ್​ ಸ್ವಾರ್ಥ ಜೀವಿ ಎಂದು ಕಿಡಿಕಾರುತ್ತಿದ್ದಾರೆ. ಇಂದು ಬಿಗ್​ ಬಾಸ್​ ಎದುರು ಮನೆ ಮಂದಿ ಹೊಸ ಬೇಡಿಕೆ ಇಟ್ಟಿದ್ದಾರೆ. ಶಮಂತ್​ ಅವರನ್ನು ಬೇಕಿದ್ದರೆ ಮನೆಯಿಂದ ಹೊರಗೆ ಕಳುಹಿಸಿ. ನಮಗೆ ನಮ್ಮ ಬೆಡ್​ ರೂಂ ಮತ್ತೆ ಬೇಕು ಎಂದಿದ್ದಾರೆ.

ಇದನ್ನೂ ಓದಿ: BBK8: ‘ದಿವ್ಯಾನ ಬಿಟ್ಟು ಕೊಡು ಗುರೂ’ ಅಂತ ಮಂಜುಗೆ ಮನವಿ ಮಾಡಿದ ಶಮಂತ್​! ಕಿಚ್ಚನ ಎದುರಲ್ಲೇ ರಹಸ್ಯ ಬಯಲು

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ