AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಅಶ್ವತ್ಥ್​ ಶಂಕರ್​ ನಿಜವಾದ ಬಣ್ಣ ಬಯಲು..

ಶಂಕರ್​ ಅಶ್ವತ್ಥ್​ ಈ ಸೀಸನ್​​ನ ಅತಿ ಹಿರಿಯ ಸ್ಪರ್ಧಿ. ಇದೇ ಕಾರಣಕ್ಕೆ ಮನೆ ಮಂದಿಗೆಲ್ಲ ಅವರ ಮೇಲೆ ವಿಶೇಷ ಗೌರವವಿದೆ. ಈ ವಿಚಾರದ ಬಗ್ಗೆ ಶಂಕರ್​ ಅಶ್ವತ್ಥ್​ ಭಿನ್ನವಾಗಿ ಮಾತನಾಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಅಶ್ವತ್ಥ್​ ಶಂಕರ್​ ನಿಜವಾದ ಬಣ್ಣ ಬಯಲು..
ಶಂಕರ್​ ಆಶ್ವತ್ಥ್​
ರಾಜೇಶ್ ದುಗ್ಗುಮನೆ
|

Updated on:Mar 17, 2021 | 8:31 PM

Share

ಬಿಗ್​ ಬಾಸ್​ ಮನೆಯಲ್ಲಿ ಈಗ 15 ಮಂದಿ ಇದ್ದಾರೆ. ಒಬ್ಬೊಬ್ಬರದ್ದೂ ಒಂದೊಂದು ಮುಖ. ಇಷ್ಟು ದಿನ ತಮ್ಮ ನಿಜವಾದ ಮುಖವನ್ನು ಮುಚ್ಚಿಡಲು ಪ್ರಯತ್ನಿಸಿದ್ದವರ ಅಸಲಿ ಬಣ್ಣ ಹೊರಬರುತ್ತಿದೆ. ರೀತಿ ಬಿಗ್​ ಬಾಸ್​ ಮನೆಯಲ್ಲಿರುವ ಶಂಕರ್​ ಅಶ್ವತ್ಥ್​ ಅವರ ನಿಜವಾದ ಬಣ್ಣ ಈಗ ಬಯಲಾಗಿದೆ. ಶಂಕರ್​ ಅಶ್ವತ್ಥ್​ ಈ ಸೀಸನ್​​ನ ಅತಿ ಹಿರಿಯ ಸ್ಪರ್ಧಿ. ಇದೇ ಕಾರಣಕ್ಕೆ ಮನೆ ಮಂದಿಗೆಲ್ಲ ಅವರ ಮೇಲೆ ವಿಶೇಷ ಗೌರವವಿದೆ. ಎರಡು ಬಾರಿ ಅವರು ಎಲಿಮಿನೇಷನ್​ಗೆ ನಾಮಿನೇಟ್​ ಆದಾಗ ಅವರನ್ನು ಕ್ಯಾಪ್ಟನ್​ ಸೇವ್​ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು. ಮನೆ ಮಂದಿ ನೀಡುತ್ತಿರುವ ವಿಶೇಷ ಗೌರವದಿಂದ ಅವರು ಮುಕ್ತಿ ಹೊಂದಬೇಕು ಎಂದು ಬಯಸಿದಂತೆ ಕಾಣುತ್ತಿದೆ.

ಟಾಸ್ಕ್​ವೊಂದರಲ್ಲಿ ಗೆದ್ದ ಅರವಿಂದ್​-ದಿವ್ಯಾ ಉರುಡುಗ ಜೋಡಿಗೆ ವಿಶೇಷವಾದ ಚಾರ್ಜರ್​ ಸಿಕ್ಕಿತು. ಅದನ್ನು ಅವರೇ ಇಟ್ಟುಕೊಳ್ಳಬಹುದು ಅಥವಾ ಅದನ್ನು ತ್ಯಾಗ ಮಾಡಿ ಮನೆಯ ಎಲ್ಲರಿಗೂ ಬೆಡ್​ ರೂಮ್​ ಕೊಡಿಸಬಹುದು. ಈ ಎರಡು ಅವಕಾಶಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಲು ದಿವ್ಯಾ ಮತ್ತು ಅರವಿಂದ್​ 10 ನಿಮಿಷ ಸಮಯಾವಕಾಶ ಕೇಳಿದರು. ಖಂಡಿತವಾಗಿಯೂ ಅವರು ಆ ಚಾರ್ಜರ್​ ತ್ಯಾಗ ಮಾಡಿ, ಮನೆಯ ಸದಸ್ಯರಿಗೆ ಬೆಡ್​ ರೂಮ್​ ಕೊಡಿಸುತ್ತಾರೆ ಎಂದೇ ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಅವರ ಊಹೆ ತಪ್ಪಾಯಿತು. ದಿವ್ಯಾ ಮತ್ತು ಅರವಿಂದ್​ ಚಾರ್ಜರ್​ ಅನ್ನು ತಮ್ಮ ಬಳಿಯೇ ಇಟ್ಟುಕೊಳ್ಳಲು ನಿರ್ಧರಿಸಿದರು. ಈ ವಿಚಾರದಲ್ಲಿ ಮನೆ ಮಂದಿ ಬೇಸರಗೊಂಡಿದ್ದಾರೆ. ಆದರೆ ಶಂಕರ್​ ಅಶ್ವತ್ಥ್​ ಮಾತ್ರ ಭಿನ್ನವಾಗಿ ಉತ್ತರಿಸಿದ್ದಾರೆ.

ನನಗೆ ವಯಸ್ಸಾಗಿದೆ, ನನಗೆ ತೊಂದರೆ ಆಗಿದೆ ಎಂದು ಭಾವಿಸಬೇಡಿ. ಎಲ್ಲರಿಗೂ ಹೇಗೆ ಹೇಳ್ತಾರೋ ಹಾಗೆ ಮಾಡ್ತೇನೆ. ನನ್ನ ಬಗ್ಗೆ ಚಿಂತಿಸಬೇಡಿ. ಬಿಗ್​ ಬಾಸ್​ ಕೊಟ್ಟಿದ್ದನ್ನು ಇಟ್ಟುಕೊಳ್ಳುವ ಎಲ್ಲಾ ಹಕ್ಕು ನಿಮಗಿದೆ ಎಂದು ದಿವ್ಯಾ ಹಾಗೂ ಅರವಿಂದ್​ ಬಳಿ ಹೇಳಿದ್ದಾರೆ ಶಂಕರ್​ ಅಶ್ವತ್ಥ್​. ಈ ವಿಚಾರ ಕೇಳಿ ದಿವ್ಯಾ-ಅರವಿಂದ್ ನಿಜಕ್ಕೂ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: Bigg Boss Kannada: ಮನೆಯೊಳಗಿನ ಕಷ್ಟ ತಾಳಲಾರದೆ ಬಿಕ್ಕಿ ಬಿಕ್ಕಿ ಅತ್ತ ನಿಧಿ ಸುಬ್ಬಯ್ಯ, ಶುಭಾ ಪೂಂಜಾ!

Published On - 8:29 pm, Wed, 17 March 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ