ಬಿಗ್​ ಬಾಸ್​ ಮನೆಯಲ್ಲಿ ಅಶ್ವತ್ಥ್​ ಶಂಕರ್​ ನಿಜವಾದ ಬಣ್ಣ ಬಯಲು..

|

Updated on: Mar 17, 2021 | 8:31 PM

ಶಂಕರ್​ ಅಶ್ವತ್ಥ್​ ಈ ಸೀಸನ್​​ನ ಅತಿ ಹಿರಿಯ ಸ್ಪರ್ಧಿ. ಇದೇ ಕಾರಣಕ್ಕೆ ಮನೆ ಮಂದಿಗೆಲ್ಲ ಅವರ ಮೇಲೆ ವಿಶೇಷ ಗೌರವವಿದೆ. ಈ ವಿಚಾರದ ಬಗ್ಗೆ ಶಂಕರ್​ ಅಶ್ವತ್ಥ್​ ಭಿನ್ನವಾಗಿ ಮಾತನಾಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಅಶ್ವತ್ಥ್​ ಶಂಕರ್​ ನಿಜವಾದ ಬಣ್ಣ ಬಯಲು..
ಶಂಕರ್​ ಆಶ್ವತ್ಥ್​
Follow us on

ಬಿಗ್​ ಬಾಸ್​ ಮನೆಯಲ್ಲಿ ಈಗ 15 ಮಂದಿ ಇದ್ದಾರೆ. ಒಬ್ಬೊಬ್ಬರದ್ದೂ ಒಂದೊಂದು ಮುಖ. ಇಷ್ಟು ದಿನ ತಮ್ಮ ನಿಜವಾದ ಮುಖವನ್ನು ಮುಚ್ಚಿಡಲು ಪ್ರಯತ್ನಿಸಿದ್ದವರ ಅಸಲಿ ಬಣ್ಣ ಹೊರಬರುತ್ತಿದೆ. ರೀತಿ ಬಿಗ್​ ಬಾಸ್​ ಮನೆಯಲ್ಲಿರುವ ಶಂಕರ್​ ಅಶ್ವತ್ಥ್​ ಅವರ ನಿಜವಾದ ಬಣ್ಣ ಈಗ ಬಯಲಾಗಿದೆ.

ಶಂಕರ್​ ಅಶ್ವತ್ಥ್​ ಈ ಸೀಸನ್​​ನ ಅತಿ ಹಿರಿಯ ಸ್ಪರ್ಧಿ. ಇದೇ ಕಾರಣಕ್ಕೆ ಮನೆ ಮಂದಿಗೆಲ್ಲ ಅವರ ಮೇಲೆ ವಿಶೇಷ ಗೌರವವಿದೆ. ಎರಡು ಬಾರಿ ಅವರು ಎಲಿಮಿನೇಷನ್​ಗೆ ನಾಮಿನೇಟ್​ ಆದಾಗ ಅವರನ್ನು ಕ್ಯಾಪ್ಟನ್​ ಸೇವ್​ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು. ಮನೆ ಮಂದಿ ನೀಡುತ್ತಿರುವ ವಿಶೇಷ ಗೌರವದಿಂದ ಅವರು ಮುಕ್ತಿ ಹೊಂದಬೇಕು ಎಂದು ಬಯಸಿದಂತೆ ಕಾಣುತ್ತಿದೆ.

ಟಾಸ್ಕ್​ವೊಂದರಲ್ಲಿ ಗೆದ್ದ ಅರವಿಂದ್​-ದಿವ್ಯಾ ಉರುಡುಗ ಜೋಡಿಗೆ ವಿಶೇಷವಾದ ಚಾರ್ಜರ್​ ಸಿಕ್ಕಿತು. ಅದನ್ನು ಅವರೇ ಇಟ್ಟುಕೊಳ್ಳಬಹುದು ಅಥವಾ ಅದನ್ನು ತ್ಯಾಗ ಮಾಡಿ ಮನೆಯ ಎಲ್ಲರಿಗೂ ಬೆಡ್​ ರೂಮ್​ ಕೊಡಿಸಬಹುದು. ಈ ಎರಡು ಅವಕಾಶಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಲು ದಿವ್ಯಾ ಮತ್ತು ಅರವಿಂದ್​ 10 ನಿಮಿಷ ಸಮಯಾವಕಾಶ ಕೇಳಿದರು. ಖಂಡಿತವಾಗಿಯೂ ಅವರು ಆ ಚಾರ್ಜರ್​ ತ್ಯಾಗ ಮಾಡಿ, ಮನೆಯ ಸದಸ್ಯರಿಗೆ ಬೆಡ್​ ರೂಮ್​ ಕೊಡಿಸುತ್ತಾರೆ ಎಂದೇ ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಅವರ ಊಹೆ ತಪ್ಪಾಯಿತು. ದಿವ್ಯಾ ಮತ್ತು ಅರವಿಂದ್​ ಚಾರ್ಜರ್​ ಅನ್ನು ತಮ್ಮ ಬಳಿಯೇ ಇಟ್ಟುಕೊಳ್ಳಲು ನಿರ್ಧರಿಸಿದರು. ಈ ವಿಚಾರದಲ್ಲಿ ಮನೆ ಮಂದಿ ಬೇಸರಗೊಂಡಿದ್ದಾರೆ. ಆದರೆ ಶಂಕರ್​ ಅಶ್ವತ್ಥ್​ ಮಾತ್ರ ಭಿನ್ನವಾಗಿ ಉತ್ತರಿಸಿದ್ದಾರೆ.

ನನಗೆ ವಯಸ್ಸಾಗಿದೆ, ನನಗೆ ತೊಂದರೆ ಆಗಿದೆ ಎಂದು ಭಾವಿಸಬೇಡಿ. ಎಲ್ಲರಿಗೂ ಹೇಗೆ ಹೇಳ್ತಾರೋ ಹಾಗೆ ಮಾಡ್ತೇನೆ. ನನ್ನ ಬಗ್ಗೆ ಚಿಂತಿಸಬೇಡಿ. ಬಿಗ್​ ಬಾಸ್​ ಕೊಟ್ಟಿದ್ದನ್ನು ಇಟ್ಟುಕೊಳ್ಳುವ ಎಲ್ಲಾ ಹಕ್ಕು ನಿಮಗಿದೆ ಎಂದು ದಿವ್ಯಾ ಹಾಗೂ ಅರವಿಂದ್​ ಬಳಿ ಹೇಳಿದ್ದಾರೆ ಶಂಕರ್​ ಅಶ್ವತ್ಥ್​. ಈ ವಿಚಾರ ಕೇಳಿ ದಿವ್ಯಾ-ಅರವಿಂದ್ ನಿಜಕ್ಕೂ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: Bigg Boss Kannada: ಮನೆಯೊಳಗಿನ ಕಷ್ಟ ತಾಳಲಾರದೆ ಬಿಕ್ಕಿ ಬಿಕ್ಕಿ ಅತ್ತ ನಿಧಿ ಸುಬ್ಬಯ್ಯ, ಶುಭಾ ಪೂಂಜಾ!

Published On - 8:29 pm, Wed, 17 March 21