AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Elimination: ಈ ವಾರದ ಎಲಿಮಿನೇಷನ್​ಗೆ ಹೊಸ ಮಾರ್ಗ ಅನುಸರಿಸಿದ ಬಿಗ್​ ಬಾಸ್​!

ಸಿನಿಮಾ ಕೆಲಸಗಳಿಗೆ ಸುದೀಪ್​ ಬೇರೆ ಬೇರೆ ಕಡೆಗಳಿಗೆ ತೆರಳಿದರೂ ವೀಕೆಂಡ್​ನಲ್ಲಿ ಬೆಂಗಳೂರಿಗೆ ವಾಪಾಸಾಗುತ್ತಿದ್ದರು. ಇದು 8 ವರ್ಷಗಳಿಂದಲೂ ನಡೆದುಕೊಂಡೇ ಬಂದಿದೆ.

Bigg Boss Elimination: ಈ ವಾರದ ಎಲಿಮಿನೇಷನ್​ಗೆ ಹೊಸ ಮಾರ್ಗ ಅನುಸರಿಸಿದ ಬಿಗ್​ ಬಾಸ್​!
ಬಿಗ್​ ಬಾಸ್​ ಕನ್ನಡ
ರಾಜೇಶ್ ದುಗ್ಗುಮನೆ
|

Updated on: Apr 18, 2021 | 7:48 PM

Share

ಬಿಗ್​ ಬಾಸ್​ ಮನೆಯ ಏಳನೆ ವಾರದ ವೀಕೆಂಡ್​ ಭಿನ್ನ ರೀತಿಯ ಎಪಿಸೋಡ್​ಗೆ ಸಾಕ್ಷಿಯಾಗಿದೆ. ಪ್ರತಿ ವೀಕೆಂಡ್​ನಲ್ಲಿ ಕಿಚ್ಚ ಸುದೀಪ್​ ಬಂದು ಪ್ರೇಕ್ಷಕರನ್ನು ರಂಜಿಸುತ್ತಿದ್ದರು. ಆದರೆ, ಅನಾರೋಗ್ಯ ಕಾರಣದಿಂದ ಸುದೀಪ್​ ಬಂದಿಲ್ಲ. ಹೀಗಾಗಿ, ಎಲಿಮಿನೇಷನ್​ ಬೇರೆ ರೀತಿಯಲ್ಲಿ ನಡೆದಿದೆ. ಸಿನಿಮಾ ಕೆಲಸಗಳಿಗೆ ಸುದೀಪ್​ ಬೇರೆ ಬೇರೆ ಕಡೆಗಳಿಗೆ ತೆರಳಿದರೂ ವೀಕೆಂಡ್​ನಲ್ಲಿ ಬೆಂಗಳೂರಿಗೆ ವಾಪಾಸಾಗುತ್ತಿದ್ದರು. ಇದು 8 ವರ್ಷಗಳಿಂದಲೂ ನಡೆದುಕೊಂಡೇ ಬಂದಿದೆ. ಆದರೆ, ಈ ಬಾರಿ ಅನಾರೋಗ್ಯದ ಕಾರಣದಿಂದ ಅವರು ನಿರೂಪಣೆ ಮಾಡುತ್ತಿಲ್ಲ. ಈ ವಿಚಾರವನ್ನು ಅವರು ಇತ್ತೀಚೆಗೆ ಅಧಿಕೃತಗೊಳಿಸಿದ್ದರು.

ಸುದೀಪ್​ ಈ ವಾರ ಬರುವುದಿಲ್ಲ ಎಂಬುದು ಮನೆ ಮಂದಿಗೆ ಗೊತ್ತಿರಲಿಲ್ಲ. ಸ್ಪರ್ಧಿಗಳಿಗೆ ಈ ವಿಚಾರ ತಿಳಿದಾಗ ಶಾಕ್​ ಆಗಿದ್ದರು. ಸುದೀಪ್​ ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದರು. ಈ ವಾರ ಟಾಸ್ಕ್​ಗಳನ್ನು ನೀಡುವ ಮೂಲಕ ಪ್ರೇಕ್ಷಕರನ್ನು ರಂಜಿಸುವ ಕೆಲಸವನ್ನು ಬಿಗ್​ ಬಾಸ್​ ಮಾಡಿದೆ.

ಪ್ರತಿವಾರ ಎಲಿಮಿನೇಷ್​ನಗೆ ನಾಮಿನೇಟ್​ ಆದವರ ಪೈಕಿ ಸೇಫ್​ ಆದ ಕೆಲವರ ಹೆಸರನ್ನು ಸುದೀಪ್​ ಶನಿವಾರವೇ ಘೋಷಣೆ ಮಾಡುತ್ತಿದ್ದರು. ನಂತರ ಭಾನುವಾರ ಅಂತಿಮವಾಗಿ ಯಾರು ಮನೆಯಿಂದ ಹೊರ ಹೋಗುತ್ತಾರೆ ಎಂಬುದು ಘೋಷಣೆ ಆಗುತ್ತಿತ್ತು. ಆದರೆ, ಈ ಬಾರಿ ಬಿಗ್​ ಬಾಸ್​ ಬೇರೆಯದೇ ಮಾರ್ಗ ಅನುಸರಿಸಿದ್ದಾರೆ.

ಈ ವಾರ ಎಲ್ಲಾ ಸ್ಪರ್ಧಿಗಳನ್ನು ಲಿವಿಂಗ್​ ಏರಿಯಾದಲ್ಲಿ ಕೂರಿಸಲಾಗಿದೆ. ಕೊನೆಗೆ ಪರದೆ ಮೇಲೆ ಈ ವಾರ ನಾಮಿನೇಟ್​ ಆದವರ ವಿಡಿಯೋವನ್ನು ವಿಟಿಯನ್ನು ತೋರಿಸಲಾಗಿದೆ. ಇದನ್ನು ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಮೂಲಕ ಹಂಚಿಕೊಂಡಿದೆ. ಸುದೀಪ್​ ಇಲ್ಲ ಎಂದ ಮಾತ್ರಕ್ಕೆ ಬೇರೆ ಯಾವುದೇ ಸ್ಟಾರ್​ ಕಲಾವಿದರಿಗೂ ಕಲರ್ಸ್​ ಕನ್ನಡ ವಾಹಿನಿ ಮಣೆ ಹಾಕಿಲ್ಲ.

ಅಂದಹಾಗೆ, ಈ ವಾರ ವಿಶ್ವನಾಥ್​ ಬಿಗ್​ ಬಾಸ್​ ಮನೆಯಿಂದ ಹೊರ ಹೋಗಿದ್ದಾರೆ ಎನ್ನಲಾಗಿದೆ. ಅವರು ಈ ವಾರ ಅಷ್ಟಾಗಿ ಪರ್ಫಾರ್ಮೆನ್ಸ್​ ನೀಡಿಲ್ಲ. ಹೀಗಾಗಿ, ಅವರಿಗೆ ಕಡಿಮೆ ವೋಟ್​ಗಳು ಬಿದ್ದಿವೆ.

ಇದನ್ನೂ ಓದಿ: Kichcha Sudeep: ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ವೀಕೆಂಡ್ ಶೋ ನಡೆಸಿಕೊಡುವ ಸ್ಟಾರ್ ಯಾರು?

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ