AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Elimination: ಈ ವಾರದ ಎಲಿಮಿನೇಷನ್​ಗೆ ಹೊಸ ಮಾರ್ಗ ಅನುಸರಿಸಿದ ಬಿಗ್​ ಬಾಸ್​!

ಸಿನಿಮಾ ಕೆಲಸಗಳಿಗೆ ಸುದೀಪ್​ ಬೇರೆ ಬೇರೆ ಕಡೆಗಳಿಗೆ ತೆರಳಿದರೂ ವೀಕೆಂಡ್​ನಲ್ಲಿ ಬೆಂಗಳೂರಿಗೆ ವಾಪಾಸಾಗುತ್ತಿದ್ದರು. ಇದು 8 ವರ್ಷಗಳಿಂದಲೂ ನಡೆದುಕೊಂಡೇ ಬಂದಿದೆ.

Bigg Boss Elimination: ಈ ವಾರದ ಎಲಿಮಿನೇಷನ್​ಗೆ ಹೊಸ ಮಾರ್ಗ ಅನುಸರಿಸಿದ ಬಿಗ್​ ಬಾಸ್​!
ಬಿಗ್​ ಬಾಸ್​ ಕನ್ನಡ
ರಾಜೇಶ್ ದುಗ್ಗುಮನೆ
|

Updated on: Apr 18, 2021 | 7:48 PM

Share

ಬಿಗ್​ ಬಾಸ್​ ಮನೆಯ ಏಳನೆ ವಾರದ ವೀಕೆಂಡ್​ ಭಿನ್ನ ರೀತಿಯ ಎಪಿಸೋಡ್​ಗೆ ಸಾಕ್ಷಿಯಾಗಿದೆ. ಪ್ರತಿ ವೀಕೆಂಡ್​ನಲ್ಲಿ ಕಿಚ್ಚ ಸುದೀಪ್​ ಬಂದು ಪ್ರೇಕ್ಷಕರನ್ನು ರಂಜಿಸುತ್ತಿದ್ದರು. ಆದರೆ, ಅನಾರೋಗ್ಯ ಕಾರಣದಿಂದ ಸುದೀಪ್​ ಬಂದಿಲ್ಲ. ಹೀಗಾಗಿ, ಎಲಿಮಿನೇಷನ್​ ಬೇರೆ ರೀತಿಯಲ್ಲಿ ನಡೆದಿದೆ. ಸಿನಿಮಾ ಕೆಲಸಗಳಿಗೆ ಸುದೀಪ್​ ಬೇರೆ ಬೇರೆ ಕಡೆಗಳಿಗೆ ತೆರಳಿದರೂ ವೀಕೆಂಡ್​ನಲ್ಲಿ ಬೆಂಗಳೂರಿಗೆ ವಾಪಾಸಾಗುತ್ತಿದ್ದರು. ಇದು 8 ವರ್ಷಗಳಿಂದಲೂ ನಡೆದುಕೊಂಡೇ ಬಂದಿದೆ. ಆದರೆ, ಈ ಬಾರಿ ಅನಾರೋಗ್ಯದ ಕಾರಣದಿಂದ ಅವರು ನಿರೂಪಣೆ ಮಾಡುತ್ತಿಲ್ಲ. ಈ ವಿಚಾರವನ್ನು ಅವರು ಇತ್ತೀಚೆಗೆ ಅಧಿಕೃತಗೊಳಿಸಿದ್ದರು.

ಸುದೀಪ್​ ಈ ವಾರ ಬರುವುದಿಲ್ಲ ಎಂಬುದು ಮನೆ ಮಂದಿಗೆ ಗೊತ್ತಿರಲಿಲ್ಲ. ಸ್ಪರ್ಧಿಗಳಿಗೆ ಈ ವಿಚಾರ ತಿಳಿದಾಗ ಶಾಕ್​ ಆಗಿದ್ದರು. ಸುದೀಪ್​ ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದರು. ಈ ವಾರ ಟಾಸ್ಕ್​ಗಳನ್ನು ನೀಡುವ ಮೂಲಕ ಪ್ರೇಕ್ಷಕರನ್ನು ರಂಜಿಸುವ ಕೆಲಸವನ್ನು ಬಿಗ್​ ಬಾಸ್​ ಮಾಡಿದೆ.

ಪ್ರತಿವಾರ ಎಲಿಮಿನೇಷ್​ನಗೆ ನಾಮಿನೇಟ್​ ಆದವರ ಪೈಕಿ ಸೇಫ್​ ಆದ ಕೆಲವರ ಹೆಸರನ್ನು ಸುದೀಪ್​ ಶನಿವಾರವೇ ಘೋಷಣೆ ಮಾಡುತ್ತಿದ್ದರು. ನಂತರ ಭಾನುವಾರ ಅಂತಿಮವಾಗಿ ಯಾರು ಮನೆಯಿಂದ ಹೊರ ಹೋಗುತ್ತಾರೆ ಎಂಬುದು ಘೋಷಣೆ ಆಗುತ್ತಿತ್ತು. ಆದರೆ, ಈ ಬಾರಿ ಬಿಗ್​ ಬಾಸ್​ ಬೇರೆಯದೇ ಮಾರ್ಗ ಅನುಸರಿಸಿದ್ದಾರೆ.

ಈ ವಾರ ಎಲ್ಲಾ ಸ್ಪರ್ಧಿಗಳನ್ನು ಲಿವಿಂಗ್​ ಏರಿಯಾದಲ್ಲಿ ಕೂರಿಸಲಾಗಿದೆ. ಕೊನೆಗೆ ಪರದೆ ಮೇಲೆ ಈ ವಾರ ನಾಮಿನೇಟ್​ ಆದವರ ವಿಡಿಯೋವನ್ನು ವಿಟಿಯನ್ನು ತೋರಿಸಲಾಗಿದೆ. ಇದನ್ನು ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಮೂಲಕ ಹಂಚಿಕೊಂಡಿದೆ. ಸುದೀಪ್​ ಇಲ್ಲ ಎಂದ ಮಾತ್ರಕ್ಕೆ ಬೇರೆ ಯಾವುದೇ ಸ್ಟಾರ್​ ಕಲಾವಿದರಿಗೂ ಕಲರ್ಸ್​ ಕನ್ನಡ ವಾಹಿನಿ ಮಣೆ ಹಾಕಿಲ್ಲ.

ಅಂದಹಾಗೆ, ಈ ವಾರ ವಿಶ್ವನಾಥ್​ ಬಿಗ್​ ಬಾಸ್​ ಮನೆಯಿಂದ ಹೊರ ಹೋಗಿದ್ದಾರೆ ಎನ್ನಲಾಗಿದೆ. ಅವರು ಈ ವಾರ ಅಷ್ಟಾಗಿ ಪರ್ಫಾರ್ಮೆನ್ಸ್​ ನೀಡಿಲ್ಲ. ಹೀಗಾಗಿ, ಅವರಿಗೆ ಕಡಿಮೆ ವೋಟ್​ಗಳು ಬಿದ್ದಿವೆ.

ಇದನ್ನೂ ಓದಿ: Kichcha Sudeep: ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ವೀಕೆಂಡ್ ಶೋ ನಡೆಸಿಕೊಡುವ ಸ್ಟಾರ್ ಯಾರು?

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ