AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Elimination: ಈ ವಾರದ ಎಲಿಮಿನೇಷನ್​ಗೆ ಹೊಸ ಮಾರ್ಗ ಅನುಸರಿಸಿದ ಬಿಗ್​ ಬಾಸ್​!

ಸಿನಿಮಾ ಕೆಲಸಗಳಿಗೆ ಸುದೀಪ್​ ಬೇರೆ ಬೇರೆ ಕಡೆಗಳಿಗೆ ತೆರಳಿದರೂ ವೀಕೆಂಡ್​ನಲ್ಲಿ ಬೆಂಗಳೂರಿಗೆ ವಾಪಾಸಾಗುತ್ತಿದ್ದರು. ಇದು 8 ವರ್ಷಗಳಿಂದಲೂ ನಡೆದುಕೊಂಡೇ ಬಂದಿದೆ.

Bigg Boss Elimination: ಈ ವಾರದ ಎಲಿಮಿನೇಷನ್​ಗೆ ಹೊಸ ಮಾರ್ಗ ಅನುಸರಿಸಿದ ಬಿಗ್​ ಬಾಸ್​!
ಬಿಗ್​ ಬಾಸ್​ ಕನ್ನಡ
ರಾಜೇಶ್ ದುಗ್ಗುಮನೆ
|

Updated on: Apr 18, 2021 | 7:48 PM

Share

ಬಿಗ್​ ಬಾಸ್​ ಮನೆಯ ಏಳನೆ ವಾರದ ವೀಕೆಂಡ್​ ಭಿನ್ನ ರೀತಿಯ ಎಪಿಸೋಡ್​ಗೆ ಸಾಕ್ಷಿಯಾಗಿದೆ. ಪ್ರತಿ ವೀಕೆಂಡ್​ನಲ್ಲಿ ಕಿಚ್ಚ ಸುದೀಪ್​ ಬಂದು ಪ್ರೇಕ್ಷಕರನ್ನು ರಂಜಿಸುತ್ತಿದ್ದರು. ಆದರೆ, ಅನಾರೋಗ್ಯ ಕಾರಣದಿಂದ ಸುದೀಪ್​ ಬಂದಿಲ್ಲ. ಹೀಗಾಗಿ, ಎಲಿಮಿನೇಷನ್​ ಬೇರೆ ರೀತಿಯಲ್ಲಿ ನಡೆದಿದೆ. ಸಿನಿಮಾ ಕೆಲಸಗಳಿಗೆ ಸುದೀಪ್​ ಬೇರೆ ಬೇರೆ ಕಡೆಗಳಿಗೆ ತೆರಳಿದರೂ ವೀಕೆಂಡ್​ನಲ್ಲಿ ಬೆಂಗಳೂರಿಗೆ ವಾಪಾಸಾಗುತ್ತಿದ್ದರು. ಇದು 8 ವರ್ಷಗಳಿಂದಲೂ ನಡೆದುಕೊಂಡೇ ಬಂದಿದೆ. ಆದರೆ, ಈ ಬಾರಿ ಅನಾರೋಗ್ಯದ ಕಾರಣದಿಂದ ಅವರು ನಿರೂಪಣೆ ಮಾಡುತ್ತಿಲ್ಲ. ಈ ವಿಚಾರವನ್ನು ಅವರು ಇತ್ತೀಚೆಗೆ ಅಧಿಕೃತಗೊಳಿಸಿದ್ದರು.

ಸುದೀಪ್​ ಈ ವಾರ ಬರುವುದಿಲ್ಲ ಎಂಬುದು ಮನೆ ಮಂದಿಗೆ ಗೊತ್ತಿರಲಿಲ್ಲ. ಸ್ಪರ್ಧಿಗಳಿಗೆ ಈ ವಿಚಾರ ತಿಳಿದಾಗ ಶಾಕ್​ ಆಗಿದ್ದರು. ಸುದೀಪ್​ ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದರು. ಈ ವಾರ ಟಾಸ್ಕ್​ಗಳನ್ನು ನೀಡುವ ಮೂಲಕ ಪ್ರೇಕ್ಷಕರನ್ನು ರಂಜಿಸುವ ಕೆಲಸವನ್ನು ಬಿಗ್​ ಬಾಸ್​ ಮಾಡಿದೆ.

ಪ್ರತಿವಾರ ಎಲಿಮಿನೇಷ್​ನಗೆ ನಾಮಿನೇಟ್​ ಆದವರ ಪೈಕಿ ಸೇಫ್​ ಆದ ಕೆಲವರ ಹೆಸರನ್ನು ಸುದೀಪ್​ ಶನಿವಾರವೇ ಘೋಷಣೆ ಮಾಡುತ್ತಿದ್ದರು. ನಂತರ ಭಾನುವಾರ ಅಂತಿಮವಾಗಿ ಯಾರು ಮನೆಯಿಂದ ಹೊರ ಹೋಗುತ್ತಾರೆ ಎಂಬುದು ಘೋಷಣೆ ಆಗುತ್ತಿತ್ತು. ಆದರೆ, ಈ ಬಾರಿ ಬಿಗ್​ ಬಾಸ್​ ಬೇರೆಯದೇ ಮಾರ್ಗ ಅನುಸರಿಸಿದ್ದಾರೆ.

ಈ ವಾರ ಎಲ್ಲಾ ಸ್ಪರ್ಧಿಗಳನ್ನು ಲಿವಿಂಗ್​ ಏರಿಯಾದಲ್ಲಿ ಕೂರಿಸಲಾಗಿದೆ. ಕೊನೆಗೆ ಪರದೆ ಮೇಲೆ ಈ ವಾರ ನಾಮಿನೇಟ್​ ಆದವರ ವಿಡಿಯೋವನ್ನು ವಿಟಿಯನ್ನು ತೋರಿಸಲಾಗಿದೆ. ಇದನ್ನು ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಮೂಲಕ ಹಂಚಿಕೊಂಡಿದೆ. ಸುದೀಪ್​ ಇಲ್ಲ ಎಂದ ಮಾತ್ರಕ್ಕೆ ಬೇರೆ ಯಾವುದೇ ಸ್ಟಾರ್​ ಕಲಾವಿದರಿಗೂ ಕಲರ್ಸ್​ ಕನ್ನಡ ವಾಹಿನಿ ಮಣೆ ಹಾಕಿಲ್ಲ.

ಅಂದಹಾಗೆ, ಈ ವಾರ ವಿಶ್ವನಾಥ್​ ಬಿಗ್​ ಬಾಸ್​ ಮನೆಯಿಂದ ಹೊರ ಹೋಗಿದ್ದಾರೆ ಎನ್ನಲಾಗಿದೆ. ಅವರು ಈ ವಾರ ಅಷ್ಟಾಗಿ ಪರ್ಫಾರ್ಮೆನ್ಸ್​ ನೀಡಿಲ್ಲ. ಹೀಗಾಗಿ, ಅವರಿಗೆ ಕಡಿಮೆ ವೋಟ್​ಗಳು ಬಿದ್ದಿವೆ.

ಇದನ್ನೂ ಓದಿ: Kichcha Sudeep: ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ವೀಕೆಂಡ್ ಶೋ ನಡೆಸಿಕೊಡುವ ಸ್ಟಾರ್ ಯಾರು?

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ