AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Elimination: ಈ ವಾರದ ಎಲಿಮಿನೇಷನ್​ಗೆ ಹೊಸ ಮಾರ್ಗ ಅನುಸರಿಸಿದ ಬಿಗ್​ ಬಾಸ್​!

ಸಿನಿಮಾ ಕೆಲಸಗಳಿಗೆ ಸುದೀಪ್​ ಬೇರೆ ಬೇರೆ ಕಡೆಗಳಿಗೆ ತೆರಳಿದರೂ ವೀಕೆಂಡ್​ನಲ್ಲಿ ಬೆಂಗಳೂರಿಗೆ ವಾಪಾಸಾಗುತ್ತಿದ್ದರು. ಇದು 8 ವರ್ಷಗಳಿಂದಲೂ ನಡೆದುಕೊಂಡೇ ಬಂದಿದೆ.

Bigg Boss Elimination: ಈ ವಾರದ ಎಲಿಮಿನೇಷನ್​ಗೆ ಹೊಸ ಮಾರ್ಗ ಅನುಸರಿಸಿದ ಬಿಗ್​ ಬಾಸ್​!
ಬಿಗ್​ ಬಾಸ್​ ಕನ್ನಡ
ರಾಜೇಶ್ ದುಗ್ಗುಮನೆ
|

Updated on: Apr 18, 2021 | 7:48 PM

Share

ಬಿಗ್​ ಬಾಸ್​ ಮನೆಯ ಏಳನೆ ವಾರದ ವೀಕೆಂಡ್​ ಭಿನ್ನ ರೀತಿಯ ಎಪಿಸೋಡ್​ಗೆ ಸಾಕ್ಷಿಯಾಗಿದೆ. ಪ್ರತಿ ವೀಕೆಂಡ್​ನಲ್ಲಿ ಕಿಚ್ಚ ಸುದೀಪ್​ ಬಂದು ಪ್ರೇಕ್ಷಕರನ್ನು ರಂಜಿಸುತ್ತಿದ್ದರು. ಆದರೆ, ಅನಾರೋಗ್ಯ ಕಾರಣದಿಂದ ಸುದೀಪ್​ ಬಂದಿಲ್ಲ. ಹೀಗಾಗಿ, ಎಲಿಮಿನೇಷನ್​ ಬೇರೆ ರೀತಿಯಲ್ಲಿ ನಡೆದಿದೆ. ಸಿನಿಮಾ ಕೆಲಸಗಳಿಗೆ ಸುದೀಪ್​ ಬೇರೆ ಬೇರೆ ಕಡೆಗಳಿಗೆ ತೆರಳಿದರೂ ವೀಕೆಂಡ್​ನಲ್ಲಿ ಬೆಂಗಳೂರಿಗೆ ವಾಪಾಸಾಗುತ್ತಿದ್ದರು. ಇದು 8 ವರ್ಷಗಳಿಂದಲೂ ನಡೆದುಕೊಂಡೇ ಬಂದಿದೆ. ಆದರೆ, ಈ ಬಾರಿ ಅನಾರೋಗ್ಯದ ಕಾರಣದಿಂದ ಅವರು ನಿರೂಪಣೆ ಮಾಡುತ್ತಿಲ್ಲ. ಈ ವಿಚಾರವನ್ನು ಅವರು ಇತ್ತೀಚೆಗೆ ಅಧಿಕೃತಗೊಳಿಸಿದ್ದರು.

ಸುದೀಪ್​ ಈ ವಾರ ಬರುವುದಿಲ್ಲ ಎಂಬುದು ಮನೆ ಮಂದಿಗೆ ಗೊತ್ತಿರಲಿಲ್ಲ. ಸ್ಪರ್ಧಿಗಳಿಗೆ ಈ ವಿಚಾರ ತಿಳಿದಾಗ ಶಾಕ್​ ಆಗಿದ್ದರು. ಸುದೀಪ್​ ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದರು. ಈ ವಾರ ಟಾಸ್ಕ್​ಗಳನ್ನು ನೀಡುವ ಮೂಲಕ ಪ್ರೇಕ್ಷಕರನ್ನು ರಂಜಿಸುವ ಕೆಲಸವನ್ನು ಬಿಗ್​ ಬಾಸ್​ ಮಾಡಿದೆ.

ಪ್ರತಿವಾರ ಎಲಿಮಿನೇಷ್​ನಗೆ ನಾಮಿನೇಟ್​ ಆದವರ ಪೈಕಿ ಸೇಫ್​ ಆದ ಕೆಲವರ ಹೆಸರನ್ನು ಸುದೀಪ್​ ಶನಿವಾರವೇ ಘೋಷಣೆ ಮಾಡುತ್ತಿದ್ದರು. ನಂತರ ಭಾನುವಾರ ಅಂತಿಮವಾಗಿ ಯಾರು ಮನೆಯಿಂದ ಹೊರ ಹೋಗುತ್ತಾರೆ ಎಂಬುದು ಘೋಷಣೆ ಆಗುತ್ತಿತ್ತು. ಆದರೆ, ಈ ಬಾರಿ ಬಿಗ್​ ಬಾಸ್​ ಬೇರೆಯದೇ ಮಾರ್ಗ ಅನುಸರಿಸಿದ್ದಾರೆ.

ಈ ವಾರ ಎಲ್ಲಾ ಸ್ಪರ್ಧಿಗಳನ್ನು ಲಿವಿಂಗ್​ ಏರಿಯಾದಲ್ಲಿ ಕೂರಿಸಲಾಗಿದೆ. ಕೊನೆಗೆ ಪರದೆ ಮೇಲೆ ಈ ವಾರ ನಾಮಿನೇಟ್​ ಆದವರ ವಿಡಿಯೋವನ್ನು ವಿಟಿಯನ್ನು ತೋರಿಸಲಾಗಿದೆ. ಇದನ್ನು ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಮೂಲಕ ಹಂಚಿಕೊಂಡಿದೆ. ಸುದೀಪ್​ ಇಲ್ಲ ಎಂದ ಮಾತ್ರಕ್ಕೆ ಬೇರೆ ಯಾವುದೇ ಸ್ಟಾರ್​ ಕಲಾವಿದರಿಗೂ ಕಲರ್ಸ್​ ಕನ್ನಡ ವಾಹಿನಿ ಮಣೆ ಹಾಕಿಲ್ಲ.

ಅಂದಹಾಗೆ, ಈ ವಾರ ವಿಶ್ವನಾಥ್​ ಬಿಗ್​ ಬಾಸ್​ ಮನೆಯಿಂದ ಹೊರ ಹೋಗಿದ್ದಾರೆ ಎನ್ನಲಾಗಿದೆ. ಅವರು ಈ ವಾರ ಅಷ್ಟಾಗಿ ಪರ್ಫಾರ್ಮೆನ್ಸ್​ ನೀಡಿಲ್ಲ. ಹೀಗಾಗಿ, ಅವರಿಗೆ ಕಡಿಮೆ ವೋಟ್​ಗಳು ಬಿದ್ದಿವೆ.

ಇದನ್ನೂ ಓದಿ: Kichcha Sudeep: ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ವೀಕೆಂಡ್ ಶೋ ನಡೆಸಿಕೊಡುವ ಸ್ಟಾರ್ ಯಾರು?

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು