AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಶಿಯಲ್​ ತಂದ ಆಪತ್ತು; ಬಿಗ್​ ಬಾಸ್​ ಮಾಜಿ ಸ್ಪರ್ಧಿಯ ಮುಖ ಹೀಗಾಗೋಯ್ತಾ?

ಕಾಲಿವುಡ್​ ನಟಿ ರೈಜಾ ವಿಲ್ಸನ್​ ಇತ್ತೀಚೆಗೆ ಫೇಶಿಯಲ್​ ಮಾಡಿಸಿಕೊಳ್ಳೋಕೆ ಆಸ್ಪತ್ರೆ ಒಂದಕ್ಕೆ ತೆರಳಿದ್ದರು. ಆಸ್ಪತ್ರೆಯವರು ಫೇಶಿಯಲ್​ ಮಾತ್ರ ನಿಲ್ಲಿಸಲಿಲ್ಲ. ಒತ್ತಾಯದಿಂದ ಚಿಕಿತ್ಸೆ ಕೊಟ್ಟಿದ್ದರು.

ಫೇಶಿಯಲ್​ ತಂದ ಆಪತ್ತು; ಬಿಗ್​ ಬಾಸ್​ ಮಾಜಿ ಸ್ಪರ್ಧಿಯ ಮುಖ ಹೀಗಾಗೋಯ್ತಾ?
ರೈಜಾ ವಿಲ್ಸನ್​
ರಾಜೇಶ್ ದುಗ್ಗುಮನೆ
|

Updated on:Apr 18, 2021 | 9:14 PM

Share

ಹೀರೋಯಿನ್​ಗಳು ಸೌಂದರ್ಯ ಕಾಪಾಡಿಕೊಳ್ಳಲು ಸಾಕಷ್ಟು ಮುನ್ನೆಚ್ಚರಿಕೆ ವಹಿಸುತ್ತಾರೆ. ಮುಖಕ್ಕೆ ಬಿಸಿಲು ತಾಗದಂತೆ ನೋಡಿಕೊಳ್ಳುವುದು ಮಾತ್ರವಲ್ಲ, ಆಗಾಗ ಪಾರ್ಲರ್​ಗೆ ಹೋಗಿ ಫೇಶಿಯಲ್​ ಕೂಡ ಮಾಡಿಸಿಕೊಳ್ಳುತ್ತಾರೆ. ಇದೇ ರೀತಿ ಫೇಶಿಯಲ್​ ಮಾಡಿಕೊಳ್ಳೋಕೆ ಹೋಗಿ ತಮಿಳು ನಟಿ ಹಾಗೂ ಮಾಜಿ ಬಿಗ್​ ಬಾಸ್​ ಸ್ಪರ್ಧಿಯ ಮುಖದ ಅಂದವೇ ಹೊರಟು ಹೋಗಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಅಸಮಧಾನ ಹೊರ ಹಾಕಿದ್ದಾರೆ. ಕಾಲಿವುಡ್​ ನಟಿ ರೈಜಾ ವಿಲ್ಸನ್​ ಇತ್ತೀಚೆಗೆ ಫೇಶಿಯಲ್​ ಮಾಡಿಸಿಕೊಳ್ಳೋಕೆ ಆಸ್ಪತ್ರೆ ಒಂದಕ್ಕೆ ತೆರಳಿದ್ದರು. ಆಸ್ಪತ್ರೆಯವರು ಫೇಶಿಯಲ್ ಮಾತ್ರ ಮಾಡಿಲ್ಲ. ನಿಮ್ಮ ಸೌಂದರ್ಯ ವೃದ್ಧಿಸುತ್ತೇವೆ ಎಂದು ಚಿಕಿತ್ಸೆಗೆ ಮುಂದಾಗಿದ್ದಾರೆ. ರೈಜಾ ಎಷ್ಟೇ ಹೇಳಿದರೂ ಕೇಳದೆ ಚಿಕಿತ್ಸೆ ನೀಡಿದ್ದಾರೆ.

ಈ ಚಿಕಿತ್ಸೆ ಪಡೆದ ರೈಜಾ ಮನೆಗೆ ಬಂದಿದ್ದಾರೆ. ನಿಧಾನವಾಗಿ ಅವರ ಮುಖ ಊದಿಕೊಳ್ಳೋಕೆ ಆರಂಭವಾಗಿದೆ. ಬೆಳಗೆದ್ದು ನೋಡಿದರೆ ಅವರ ಕಣ್ಣಿನ ಕೆಳ ಭಾಗ ಸಂಪೂರ್ಣವಾಗಿ ಊದಿಕೊಂಡಿತ್ತು. ನಂತರ ಚಿಕಿತ್ಸೆ ನೀಡಿದ ವೈದ್ಯರಿಗೆ ಕರೆ ಮಾಡಿದರೆ ಅವರು ಕಾಲ್​ ಪಿಕ್​ ಮಾಡಲಿಲ್ಲ. ಆಸ್ಪತ್ರೆಗೆ ಕರೆ ಮಾಡಿದರೆ ವೈದ್ಯರು ಊರಿನಲ್ಲಿಲ್ಲ ಎನ್ನುವ ಉತ್ತರ ಬಂತು.

ಇನ್ನು, ಸಾಕಷ್ಟು ಜನರು ಈ ಆಸ್ಪತ್ರೆಯಿಂದ ಇದೇ ಮಾದರಿಯ ಸಮಸ್ಯೆ ಎದುರಿಸಿದ್ದಾರಂತೆ. ಈ ಬಗ್ಗೆ ರೈಜಾ ಇನ್​ ಬಾಕ್ಸ್​ಗೆ ಸಾಕಷ್ಟು ಜನರು ಮೆಸೇಜ್​ ಮಾಡಿ ಇದೇ ರೀತಿಯ ಸಮಸ್ಯೆ ಹೇಳಿಕೊಂಡಿದ್ದಾರೆ. ಸದ್ಯ, ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಆಗುತ್ತಿದೆ.

ತಮಿಳು ಬಿಗ್​ ಬಾಸ್​ ಮೊದಲ ಸೀಸನ್​ಅನ್ನು ಕಮಲ್​ ಹಾಸನ್​ ನಡೆಸಿಕೊಟ್ಟಿದ್ದರು. ಈ ಸೀಸನ್​ನಲ್ಲಿ ರೈಜಾ ಸ್ಪರ್ಧಿಯಾಗಿ ಮನೆ ಸೇರಿದ್ದರು. ಈ ಮೂಲಕ ಅವರು ಖ್ಯಾತಿ ಹೆಚ್ಚಿಸಿಕೊಂಡಿದ್ದರು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಕಿಡಿ ಹಚ್ತೀವಿ; ಶಪಥ ಮಾಡಿದ ಚಕ್ರವರ್ತಿ, ಸಂಬರಗಿ 

Bigg Boss Elimination: ಈ ವಾರದ ಎಲಿಮಿನೇಷನ್​ಗೆ ಹೊಸ ಮಾರ್ಗ ಅನುಸರಿಸಿದ ಬಿಗ್​ ಬಾಸ್​!

Published On - 8:44 pm, Sun, 18 April 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು