AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಶಿಯಲ್​ ತಂದ ಆಪತ್ತು; ಬಿಗ್​ ಬಾಸ್​ ಮಾಜಿ ಸ್ಪರ್ಧಿಯ ಮುಖ ಹೀಗಾಗೋಯ್ತಾ?

ಕಾಲಿವುಡ್​ ನಟಿ ರೈಜಾ ವಿಲ್ಸನ್​ ಇತ್ತೀಚೆಗೆ ಫೇಶಿಯಲ್​ ಮಾಡಿಸಿಕೊಳ್ಳೋಕೆ ಆಸ್ಪತ್ರೆ ಒಂದಕ್ಕೆ ತೆರಳಿದ್ದರು. ಆಸ್ಪತ್ರೆಯವರು ಫೇಶಿಯಲ್​ ಮಾತ್ರ ನಿಲ್ಲಿಸಲಿಲ್ಲ. ಒತ್ತಾಯದಿಂದ ಚಿಕಿತ್ಸೆ ಕೊಟ್ಟಿದ್ದರು.

ಫೇಶಿಯಲ್​ ತಂದ ಆಪತ್ತು; ಬಿಗ್​ ಬಾಸ್​ ಮಾಜಿ ಸ್ಪರ್ಧಿಯ ಮುಖ ಹೀಗಾಗೋಯ್ತಾ?
ರೈಜಾ ವಿಲ್ಸನ್​
ರಾಜೇಶ್ ದುಗ್ಗುಮನೆ
|

Updated on:Apr 18, 2021 | 9:14 PM

Share

ಹೀರೋಯಿನ್​ಗಳು ಸೌಂದರ್ಯ ಕಾಪಾಡಿಕೊಳ್ಳಲು ಸಾಕಷ್ಟು ಮುನ್ನೆಚ್ಚರಿಕೆ ವಹಿಸುತ್ತಾರೆ. ಮುಖಕ್ಕೆ ಬಿಸಿಲು ತಾಗದಂತೆ ನೋಡಿಕೊಳ್ಳುವುದು ಮಾತ್ರವಲ್ಲ, ಆಗಾಗ ಪಾರ್ಲರ್​ಗೆ ಹೋಗಿ ಫೇಶಿಯಲ್​ ಕೂಡ ಮಾಡಿಸಿಕೊಳ್ಳುತ್ತಾರೆ. ಇದೇ ರೀತಿ ಫೇಶಿಯಲ್​ ಮಾಡಿಕೊಳ್ಳೋಕೆ ಹೋಗಿ ತಮಿಳು ನಟಿ ಹಾಗೂ ಮಾಜಿ ಬಿಗ್​ ಬಾಸ್​ ಸ್ಪರ್ಧಿಯ ಮುಖದ ಅಂದವೇ ಹೊರಟು ಹೋಗಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಅಸಮಧಾನ ಹೊರ ಹಾಕಿದ್ದಾರೆ. ಕಾಲಿವುಡ್​ ನಟಿ ರೈಜಾ ವಿಲ್ಸನ್​ ಇತ್ತೀಚೆಗೆ ಫೇಶಿಯಲ್​ ಮಾಡಿಸಿಕೊಳ್ಳೋಕೆ ಆಸ್ಪತ್ರೆ ಒಂದಕ್ಕೆ ತೆರಳಿದ್ದರು. ಆಸ್ಪತ್ರೆಯವರು ಫೇಶಿಯಲ್ ಮಾತ್ರ ಮಾಡಿಲ್ಲ. ನಿಮ್ಮ ಸೌಂದರ್ಯ ವೃದ್ಧಿಸುತ್ತೇವೆ ಎಂದು ಚಿಕಿತ್ಸೆಗೆ ಮುಂದಾಗಿದ್ದಾರೆ. ರೈಜಾ ಎಷ್ಟೇ ಹೇಳಿದರೂ ಕೇಳದೆ ಚಿಕಿತ್ಸೆ ನೀಡಿದ್ದಾರೆ.

ಈ ಚಿಕಿತ್ಸೆ ಪಡೆದ ರೈಜಾ ಮನೆಗೆ ಬಂದಿದ್ದಾರೆ. ನಿಧಾನವಾಗಿ ಅವರ ಮುಖ ಊದಿಕೊಳ್ಳೋಕೆ ಆರಂಭವಾಗಿದೆ. ಬೆಳಗೆದ್ದು ನೋಡಿದರೆ ಅವರ ಕಣ್ಣಿನ ಕೆಳ ಭಾಗ ಸಂಪೂರ್ಣವಾಗಿ ಊದಿಕೊಂಡಿತ್ತು. ನಂತರ ಚಿಕಿತ್ಸೆ ನೀಡಿದ ವೈದ್ಯರಿಗೆ ಕರೆ ಮಾಡಿದರೆ ಅವರು ಕಾಲ್​ ಪಿಕ್​ ಮಾಡಲಿಲ್ಲ. ಆಸ್ಪತ್ರೆಗೆ ಕರೆ ಮಾಡಿದರೆ ವೈದ್ಯರು ಊರಿನಲ್ಲಿಲ್ಲ ಎನ್ನುವ ಉತ್ತರ ಬಂತು.

ಇನ್ನು, ಸಾಕಷ್ಟು ಜನರು ಈ ಆಸ್ಪತ್ರೆಯಿಂದ ಇದೇ ಮಾದರಿಯ ಸಮಸ್ಯೆ ಎದುರಿಸಿದ್ದಾರಂತೆ. ಈ ಬಗ್ಗೆ ರೈಜಾ ಇನ್​ ಬಾಕ್ಸ್​ಗೆ ಸಾಕಷ್ಟು ಜನರು ಮೆಸೇಜ್​ ಮಾಡಿ ಇದೇ ರೀತಿಯ ಸಮಸ್ಯೆ ಹೇಳಿಕೊಂಡಿದ್ದಾರೆ. ಸದ್ಯ, ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಆಗುತ್ತಿದೆ.

ತಮಿಳು ಬಿಗ್​ ಬಾಸ್​ ಮೊದಲ ಸೀಸನ್​ಅನ್ನು ಕಮಲ್​ ಹಾಸನ್​ ನಡೆಸಿಕೊಟ್ಟಿದ್ದರು. ಈ ಸೀಸನ್​ನಲ್ಲಿ ರೈಜಾ ಸ್ಪರ್ಧಿಯಾಗಿ ಮನೆ ಸೇರಿದ್ದರು. ಈ ಮೂಲಕ ಅವರು ಖ್ಯಾತಿ ಹೆಚ್ಚಿಸಿಕೊಂಡಿದ್ದರು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಕಿಡಿ ಹಚ್ತೀವಿ; ಶಪಥ ಮಾಡಿದ ಚಕ್ರವರ್ತಿ, ಸಂಬರಗಿ 

Bigg Boss Elimination: ಈ ವಾರದ ಎಲಿಮಿನೇಷನ್​ಗೆ ಹೊಸ ಮಾರ್ಗ ಅನುಸರಿಸಿದ ಬಿಗ್​ ಬಾಸ್​!

Published On - 8:44 pm, Sun, 18 April 21

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು