AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಶಿಯಲ್​ ತಂದ ಆಪತ್ತು; ಬಿಗ್​ ಬಾಸ್​ ಮಾಜಿ ಸ್ಪರ್ಧಿಯ ಮುಖ ಹೀಗಾಗೋಯ್ತಾ?

ಕಾಲಿವುಡ್​ ನಟಿ ರೈಜಾ ವಿಲ್ಸನ್​ ಇತ್ತೀಚೆಗೆ ಫೇಶಿಯಲ್​ ಮಾಡಿಸಿಕೊಳ್ಳೋಕೆ ಆಸ್ಪತ್ರೆ ಒಂದಕ್ಕೆ ತೆರಳಿದ್ದರು. ಆಸ್ಪತ್ರೆಯವರು ಫೇಶಿಯಲ್​ ಮಾತ್ರ ನಿಲ್ಲಿಸಲಿಲ್ಲ. ಒತ್ತಾಯದಿಂದ ಚಿಕಿತ್ಸೆ ಕೊಟ್ಟಿದ್ದರು.

ಫೇಶಿಯಲ್​ ತಂದ ಆಪತ್ತು; ಬಿಗ್​ ಬಾಸ್​ ಮಾಜಿ ಸ್ಪರ್ಧಿಯ ಮುಖ ಹೀಗಾಗೋಯ್ತಾ?
ರೈಜಾ ವಿಲ್ಸನ್​
ರಾಜೇಶ್ ದುಗ್ಗುಮನೆ
|

Updated on:Apr 18, 2021 | 9:14 PM

Share

ಹೀರೋಯಿನ್​ಗಳು ಸೌಂದರ್ಯ ಕಾಪಾಡಿಕೊಳ್ಳಲು ಸಾಕಷ್ಟು ಮುನ್ನೆಚ್ಚರಿಕೆ ವಹಿಸುತ್ತಾರೆ. ಮುಖಕ್ಕೆ ಬಿಸಿಲು ತಾಗದಂತೆ ನೋಡಿಕೊಳ್ಳುವುದು ಮಾತ್ರವಲ್ಲ, ಆಗಾಗ ಪಾರ್ಲರ್​ಗೆ ಹೋಗಿ ಫೇಶಿಯಲ್​ ಕೂಡ ಮಾಡಿಸಿಕೊಳ್ಳುತ್ತಾರೆ. ಇದೇ ರೀತಿ ಫೇಶಿಯಲ್​ ಮಾಡಿಕೊಳ್ಳೋಕೆ ಹೋಗಿ ತಮಿಳು ನಟಿ ಹಾಗೂ ಮಾಜಿ ಬಿಗ್​ ಬಾಸ್​ ಸ್ಪರ್ಧಿಯ ಮುಖದ ಅಂದವೇ ಹೊರಟು ಹೋಗಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಅಸಮಧಾನ ಹೊರ ಹಾಕಿದ್ದಾರೆ. ಕಾಲಿವುಡ್​ ನಟಿ ರೈಜಾ ವಿಲ್ಸನ್​ ಇತ್ತೀಚೆಗೆ ಫೇಶಿಯಲ್​ ಮಾಡಿಸಿಕೊಳ್ಳೋಕೆ ಆಸ್ಪತ್ರೆ ಒಂದಕ್ಕೆ ತೆರಳಿದ್ದರು. ಆಸ್ಪತ್ರೆಯವರು ಫೇಶಿಯಲ್ ಮಾತ್ರ ಮಾಡಿಲ್ಲ. ನಿಮ್ಮ ಸೌಂದರ್ಯ ವೃದ್ಧಿಸುತ್ತೇವೆ ಎಂದು ಚಿಕಿತ್ಸೆಗೆ ಮುಂದಾಗಿದ್ದಾರೆ. ರೈಜಾ ಎಷ್ಟೇ ಹೇಳಿದರೂ ಕೇಳದೆ ಚಿಕಿತ್ಸೆ ನೀಡಿದ್ದಾರೆ.

ಈ ಚಿಕಿತ್ಸೆ ಪಡೆದ ರೈಜಾ ಮನೆಗೆ ಬಂದಿದ್ದಾರೆ. ನಿಧಾನವಾಗಿ ಅವರ ಮುಖ ಊದಿಕೊಳ್ಳೋಕೆ ಆರಂಭವಾಗಿದೆ. ಬೆಳಗೆದ್ದು ನೋಡಿದರೆ ಅವರ ಕಣ್ಣಿನ ಕೆಳ ಭಾಗ ಸಂಪೂರ್ಣವಾಗಿ ಊದಿಕೊಂಡಿತ್ತು. ನಂತರ ಚಿಕಿತ್ಸೆ ನೀಡಿದ ವೈದ್ಯರಿಗೆ ಕರೆ ಮಾಡಿದರೆ ಅವರು ಕಾಲ್​ ಪಿಕ್​ ಮಾಡಲಿಲ್ಲ. ಆಸ್ಪತ್ರೆಗೆ ಕರೆ ಮಾಡಿದರೆ ವೈದ್ಯರು ಊರಿನಲ್ಲಿಲ್ಲ ಎನ್ನುವ ಉತ್ತರ ಬಂತು.

ಇನ್ನು, ಸಾಕಷ್ಟು ಜನರು ಈ ಆಸ್ಪತ್ರೆಯಿಂದ ಇದೇ ಮಾದರಿಯ ಸಮಸ್ಯೆ ಎದುರಿಸಿದ್ದಾರಂತೆ. ಈ ಬಗ್ಗೆ ರೈಜಾ ಇನ್​ ಬಾಕ್ಸ್​ಗೆ ಸಾಕಷ್ಟು ಜನರು ಮೆಸೇಜ್​ ಮಾಡಿ ಇದೇ ರೀತಿಯ ಸಮಸ್ಯೆ ಹೇಳಿಕೊಂಡಿದ್ದಾರೆ. ಸದ್ಯ, ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಆಗುತ್ತಿದೆ.

ತಮಿಳು ಬಿಗ್​ ಬಾಸ್​ ಮೊದಲ ಸೀಸನ್​ಅನ್ನು ಕಮಲ್​ ಹಾಸನ್​ ನಡೆಸಿಕೊಟ್ಟಿದ್ದರು. ಈ ಸೀಸನ್​ನಲ್ಲಿ ರೈಜಾ ಸ್ಪರ್ಧಿಯಾಗಿ ಮನೆ ಸೇರಿದ್ದರು. ಈ ಮೂಲಕ ಅವರು ಖ್ಯಾತಿ ಹೆಚ್ಚಿಸಿಕೊಂಡಿದ್ದರು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಕಿಡಿ ಹಚ್ತೀವಿ; ಶಪಥ ಮಾಡಿದ ಚಕ್ರವರ್ತಿ, ಸಂಬರಗಿ 

Bigg Boss Elimination: ಈ ವಾರದ ಎಲಿಮಿನೇಷನ್​ಗೆ ಹೊಸ ಮಾರ್ಗ ಅನುಸರಿಸಿದ ಬಿಗ್​ ಬಾಸ್​!

Published On - 8:44 pm, Sun, 18 April 21

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ