AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಶಿಯಲ್​ ತಂದ ಆಪತ್ತು; ಬಿಗ್​ ಬಾಸ್​ ಮಾಜಿ ಸ್ಪರ್ಧಿಯ ಮುಖ ಹೀಗಾಗೋಯ್ತಾ?

ಕಾಲಿವುಡ್​ ನಟಿ ರೈಜಾ ವಿಲ್ಸನ್​ ಇತ್ತೀಚೆಗೆ ಫೇಶಿಯಲ್​ ಮಾಡಿಸಿಕೊಳ್ಳೋಕೆ ಆಸ್ಪತ್ರೆ ಒಂದಕ್ಕೆ ತೆರಳಿದ್ದರು. ಆಸ್ಪತ್ರೆಯವರು ಫೇಶಿಯಲ್​ ಮಾತ್ರ ನಿಲ್ಲಿಸಲಿಲ್ಲ. ಒತ್ತಾಯದಿಂದ ಚಿಕಿತ್ಸೆ ಕೊಟ್ಟಿದ್ದರು.

ಫೇಶಿಯಲ್​ ತಂದ ಆಪತ್ತು; ಬಿಗ್​ ಬಾಸ್​ ಮಾಜಿ ಸ್ಪರ್ಧಿಯ ಮುಖ ಹೀಗಾಗೋಯ್ತಾ?
ರೈಜಾ ವಿಲ್ಸನ್​
ರಾಜೇಶ್ ದುಗ್ಗುಮನೆ
|

Updated on:Apr 18, 2021 | 9:14 PM

Share

ಹೀರೋಯಿನ್​ಗಳು ಸೌಂದರ್ಯ ಕಾಪಾಡಿಕೊಳ್ಳಲು ಸಾಕಷ್ಟು ಮುನ್ನೆಚ್ಚರಿಕೆ ವಹಿಸುತ್ತಾರೆ. ಮುಖಕ್ಕೆ ಬಿಸಿಲು ತಾಗದಂತೆ ನೋಡಿಕೊಳ್ಳುವುದು ಮಾತ್ರವಲ್ಲ, ಆಗಾಗ ಪಾರ್ಲರ್​ಗೆ ಹೋಗಿ ಫೇಶಿಯಲ್​ ಕೂಡ ಮಾಡಿಸಿಕೊಳ್ಳುತ್ತಾರೆ. ಇದೇ ರೀತಿ ಫೇಶಿಯಲ್​ ಮಾಡಿಕೊಳ್ಳೋಕೆ ಹೋಗಿ ತಮಿಳು ನಟಿ ಹಾಗೂ ಮಾಜಿ ಬಿಗ್​ ಬಾಸ್​ ಸ್ಪರ್ಧಿಯ ಮುಖದ ಅಂದವೇ ಹೊರಟು ಹೋಗಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಅಸಮಧಾನ ಹೊರ ಹಾಕಿದ್ದಾರೆ. ಕಾಲಿವುಡ್​ ನಟಿ ರೈಜಾ ವಿಲ್ಸನ್​ ಇತ್ತೀಚೆಗೆ ಫೇಶಿಯಲ್​ ಮಾಡಿಸಿಕೊಳ್ಳೋಕೆ ಆಸ್ಪತ್ರೆ ಒಂದಕ್ಕೆ ತೆರಳಿದ್ದರು. ಆಸ್ಪತ್ರೆಯವರು ಫೇಶಿಯಲ್ ಮಾತ್ರ ಮಾಡಿಲ್ಲ. ನಿಮ್ಮ ಸೌಂದರ್ಯ ವೃದ್ಧಿಸುತ್ತೇವೆ ಎಂದು ಚಿಕಿತ್ಸೆಗೆ ಮುಂದಾಗಿದ್ದಾರೆ. ರೈಜಾ ಎಷ್ಟೇ ಹೇಳಿದರೂ ಕೇಳದೆ ಚಿಕಿತ್ಸೆ ನೀಡಿದ್ದಾರೆ.

ಈ ಚಿಕಿತ್ಸೆ ಪಡೆದ ರೈಜಾ ಮನೆಗೆ ಬಂದಿದ್ದಾರೆ. ನಿಧಾನವಾಗಿ ಅವರ ಮುಖ ಊದಿಕೊಳ್ಳೋಕೆ ಆರಂಭವಾಗಿದೆ. ಬೆಳಗೆದ್ದು ನೋಡಿದರೆ ಅವರ ಕಣ್ಣಿನ ಕೆಳ ಭಾಗ ಸಂಪೂರ್ಣವಾಗಿ ಊದಿಕೊಂಡಿತ್ತು. ನಂತರ ಚಿಕಿತ್ಸೆ ನೀಡಿದ ವೈದ್ಯರಿಗೆ ಕರೆ ಮಾಡಿದರೆ ಅವರು ಕಾಲ್​ ಪಿಕ್​ ಮಾಡಲಿಲ್ಲ. ಆಸ್ಪತ್ರೆಗೆ ಕರೆ ಮಾಡಿದರೆ ವೈದ್ಯರು ಊರಿನಲ್ಲಿಲ್ಲ ಎನ್ನುವ ಉತ್ತರ ಬಂತು.

ಇನ್ನು, ಸಾಕಷ್ಟು ಜನರು ಈ ಆಸ್ಪತ್ರೆಯಿಂದ ಇದೇ ಮಾದರಿಯ ಸಮಸ್ಯೆ ಎದುರಿಸಿದ್ದಾರಂತೆ. ಈ ಬಗ್ಗೆ ರೈಜಾ ಇನ್​ ಬಾಕ್ಸ್​ಗೆ ಸಾಕಷ್ಟು ಜನರು ಮೆಸೇಜ್​ ಮಾಡಿ ಇದೇ ರೀತಿಯ ಸಮಸ್ಯೆ ಹೇಳಿಕೊಂಡಿದ್ದಾರೆ. ಸದ್ಯ, ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಆಗುತ್ತಿದೆ.

ತಮಿಳು ಬಿಗ್​ ಬಾಸ್​ ಮೊದಲ ಸೀಸನ್​ಅನ್ನು ಕಮಲ್​ ಹಾಸನ್​ ನಡೆಸಿಕೊಟ್ಟಿದ್ದರು. ಈ ಸೀಸನ್​ನಲ್ಲಿ ರೈಜಾ ಸ್ಪರ್ಧಿಯಾಗಿ ಮನೆ ಸೇರಿದ್ದರು. ಈ ಮೂಲಕ ಅವರು ಖ್ಯಾತಿ ಹೆಚ್ಚಿಸಿಕೊಂಡಿದ್ದರು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಕಿಡಿ ಹಚ್ತೀವಿ; ಶಪಥ ಮಾಡಿದ ಚಕ್ರವರ್ತಿ, ಸಂಬರಗಿ 

Bigg Boss Elimination: ಈ ವಾರದ ಎಲಿಮಿನೇಷನ್​ಗೆ ಹೊಸ ಮಾರ್ಗ ಅನುಸರಿಸಿದ ಬಿಗ್​ ಬಾಸ್​!

Published On - 8:44 pm, Sun, 18 April 21

Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!