AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾತ್​ರೂಂನಲ್ಲೂ ಇಡಲಾಗಿತ್ತು ಮೈಕ್ರೋಫೋನ್; ‘ಬಿಗ್ ಬಾಸ್’ ಮುಗಿದಮೇಲೆ ಗೊತ್ತಾಯ್ತು ವಿಚಾರ

‘ಬಿಗ್ ಬಾಸ್ ಹಿಂದಿ ಸೀಸನ್ 17’ ಫಿನಾಲೆಯಲ್ಲಿ ಮುನಾವರ್ ಫಾರೂಖಿ, ಅಭಿಷೇಕ್ ಕುಮಾರ್, ಅಂಕಿತಾ ಲೋಖಂಡೆ, ಮನ್ನಾರಾ ಚೋಪ್ರಾ, ಅರುಣ್ ಮಾಶೆಟ್ಟಿ ಇದ್ದರು. ಈ ಪೈಕಿ ಮುನಾವರ್ ಅವರು ಕಪ್ ಗೆದ್ದಿದ್ದಾರೆ. ಮುನಾವರ್ ಕಪ್ ಗೆದ್ದ ಬಗ್ಗೆ ಇಶಾ ಅವರಿಗೆ ಸಾಕಷ್ಟು ಖುಷಿ ಇದೆ.

ಬಾತ್​ರೂಂನಲ್ಲೂ ಇಡಲಾಗಿತ್ತು ಮೈಕ್ರೋಫೋನ್; ‘ಬಿಗ್ ಬಾಸ್’ ಮುಗಿದಮೇಲೆ ಗೊತ್ತಾಯ್ತು ವಿಚಾರ
ಬಿಗ್ ಬಾಸ್ ಬಾತ್​ರೂಂ
ರಾಜೇಶ್ ದುಗ್ಗುಮನೆ
|

Updated on: Jan 31, 2024 | 2:55 PM

Share

‘ಬಿಗ್ ಬಾಸ್’ (Bigg Boss) ಮನೆಯಲ್ಲಿ ಮೈಕ್ ಬಳಸದೇ ಇರುವ ಜಾಗ ಎಂದರೆ ಅದು ಬಾತ್​ರೂಂ ಮಾತ್ರ. ಅಲ್ಲಿ ಮೈಕ್ ಧರಿಸಲೇಬೇಕು ಎಂಬ ನಿಯಮ ಇಲ್ಲ. ಹೀಗಾಗಿ, ಸ್ಪರ್ಧಿಗಳು ಕೆಲವೊಮ್ಮೆ ಅಲ್ಲಿ ಹೋಗಿ ಮಾತನಾಡಿದ್ದಿದೆ. ಅಕ್ಕ-ಪಕ್ಕದ ಬಾತ್​ರೂಂನಲ್ಲಿ ಕುಳಿತು ಚರ್ಚೆ ಮಾಡಿದ್ದಿದೆ. ಈ ವಿಚಾರವನ್ನು ಅರಿತ ಹಿಂದಿ ಬಿಗ್ ಬಾಸ್ ಮಂದಿ ಬಾತ್​ರೂಂನಲ್ಲೂ ಮೈಕ್ ಇಟ್ಟಿದ್ದರು. ಈ ವಿಚಾರವನ್ನು ‘ಬಿಗ್ ಬಾಸ್ ಹಿಂದಿ ಸೀಸನ್ 17’ ಸ್ಪರ್ಧಿ ಇಶಾ ಮಾಳವಿಯಾ (Isha Malaviya) ಹೇಳಿದ್ದಾರೆ. ಅವರು ಬಿಗ್ ಬಾಸ್ ಫಿನಾಲೆ ತಲುಪುವ ಮೊದಲೇ ಎಲಿಮಿನೇಟ್ ಆಗಿದ್ದರು.

ಭಾರ್ತಿ ಸಿಂಗ್ ಹಾಗೂ ಹರ್ಷ ಜೊತೆ ಇಶಾ ಮಾತನಾಡಿದ್ದಾರೆ. ಈ ವೇಳೆ ಅವರು ಹಲವು ವಿಚಾರ ಹಂಚಿಕೊಂಡಿದ್ದಾರೆ. ‘ವೀಕೆಂಡ್ ಕಾ ವಾರ್’ನಲ್ಲಿ ಸಲ್ಮಾನ್ ಖಾನ್ ಅವರು ಇಶಾಗೆ ಕ್ಲಾಸ್​ ತೆಗೆದುಕೊಂಡಿದ್ದರು. ಈ ವೇಳೆ ಅವರು ಹೋಗಿ ಬಾತ್​ರೂಂನಲ್ಲಿ ಅತ್ತಿದ್ದರು. ಬಾತ್​ರೂಂನಲ್ಲಿ ಮೈಕ್ರೋಫೋನ್ ಇತ್ತು ಅನ್ನೋ ವಿಚಾರವನ್ನು ಅವರು ರಿವೀಲ್ ಮಾಡಿದ್ದಾರೆ.

‘ಯಾರಾದರೂ ಬಾತ್​​ರೂಂಗೆ ಮೈಕ್ ಧರಿಸದೇ ಹೋದರೆ ಅದು ಹೆಚ್ಚು ವ್ಯತ್ಯಾಸ ಎನಿಸುವುದಿಲ್ಲ. ಏಕೆಂದರೆ ಬಾತ್​​ರೂಂನ ಛಾವಣಿಯಲ್ಲೇ ಮೈಕ್ರೋಫೋನ್​ಗಳನ್ನು ಇಡಲಾಗಿದೆ. ನೀವು ಬಾತ್​ರೂಂನಲ್ಲಿ ಮಾತನಾಡಿದರೆ ಅಥವಾ ಅತ್ತರೆ ಅದನ್ನು ಕ್ಯಾಪ್ಚರ್ ಮಾಡಲಾಗುತ್ತಿತ್ತು’ ಎಂದಿದ್ದಾರೆ ಇಶಾ. ಟಾಪ್​ ಐದರಲ್ಲಿ ತಮ್ಮ ಹೆಸರೂ ಇರಬಹುದು ಎಂದು ಇಶಾ ಭಾವಿಸಿದ್ದರು. ಆದರೆ, ಹಾಗಾಗಿಲ್ಲ. ಇದು ಅವರಿಗೆ ಬೇಸರ ತರಿಸಿದೆ.

‘ಬಿಗ್ ಬಾಸ್ ಹಿಂದಿ ಸೀಸನ್ 17’ ಫಿನಾಲೆಯಲ್ಲಿ ಮುನಾವರ್ ಫಾರೂಖಿ, ಅಭಿಷೇಕ್ ಕುಮಾರ್, ಮನ್ನಾರಾ ಚೋಪ್ರಾ, ಅಂಕಿತಾ ಲೋಖಂಡೆ, ಅರುಣ್ ಮಾಶೆಟ್ಟಿ ಇದ್ದರು. ಈ ಪೈಕಿ ಮುನಾವರ್ ಅವರು ಕಪ್ ಗೆದ್ದಿದ್ದಾರೆ. ಮುನಾವರ್ ರಿಲೇಶನ್​ಶಿಪ್ ವಿಚಾರ ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಚರ್ಚೆ ಆಗಿತ್ತು. ಆದರೆ, ಈ ಬಗ್ಗೆ ಅಭಿಮಾನಿಗಳು ಹೆಚ್ಚು ಗಮನ ಹರಿಸಿಲ್ಲ. ಈ ಬಗ್ಗೆ ಇಶಾ ಮಾತನಾಡಿದ್ದಾರೆ.

ಇದನ್ನೂ ಓದಿ: ಟ್ರೋಫಿ ಗೆದ್ದ ಬಳಿಕ ಸಲ್ಮಾನ್ ಖಾನ್ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಮುನಾವರ್

‘ಮುನಾವರ್ ಅಭಿಮಾನಿಗಳು ಈ ವಿಚಾರಗಳಿಂದ ಬೇಸರ ಮಾಡಿಕೊಂಡಿಲ್ಲ. ಅವರು ಗೆದ್ದಿರುವುದೇ ಇದಕ್ಕೆ ಸಾಕ್ಷಿ. ಮುನಾವರ್ ಒಳ್ಳೆಯ ವ್ಯಕ್ತಿ. ಅದು ನಮಗೆ ಗೊತ್ತು’ ಎಂದಿದ್ದಾರೆ ಇಶಾ. ಮುನಾವರ್ ಕಪ್ ಗೆದ್ದ ಬಗ್ಗೆ ಅವರಿಗೆ ಸಾಕಷ್ಟು ಖುಷಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು