AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅತೀ ಸುರಕ್ಷಿತ ಮನೆ ಬಿಗ್ ಬಾಸ್’; ಸ್ಪರ್ಧಿಗಳಿಗೆ ಸುದೀಪ್ ಎಚ್ಚರಿಕೆ

‘ಅತೀ ಸುರಕ್ಷಿತ ಮನೆ ಎಂದರೆ ಅದು ಬಿಗ್ ಬಾಸ್. ಇಲ್ಲಿ ಯಾರಿಗೂ ಏನೂ ಆಗುವುದಿಲ್ಲ’ ಎಂದರು ಸುದೀಪ್. ಈ ಮಾತನ್ನು ಮನೆಯವರು ಕೂಡ ಒಪ್ಪಿಕೊಂಡರು.

‘ಅತೀ ಸುರಕ್ಷಿತ ಮನೆ ಬಿಗ್ ಬಾಸ್’; ಸ್ಪರ್ಧಿಗಳಿಗೆ ಸುದೀಪ್ ಎಚ್ಚರಿಕೆ
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Oct 22, 2023 | 12:26 PM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಈ ವಾರ ಹೆಚ್ಚು ಬಳಕೆ ಆದ ಶಬ್ದ ‘ಥ್ರೆಟ್​’. ವಿನಯ್ ಅವರಿಂದ ಥ್ರೆಟ್ ಆಗುತ್ತಿದೆ ಎಂದು ಸಂಗೀತಾ ಹೇಳುತ್ತಲೇ ಬಂದರು. ವಿನಯ್ ಜೋರಾಗಿ ಮಾತನಾಡಿದ್ದೇ ಇದಕ್ಕೆ ಕಾರಣ. ವೀಕೆಂಡ್​ನಲ್ಲಿ ಈ ವಿಚಾರ ಚರ್ಚೆಗೆ ಬಂದಿದೆ. ಸುದೀಪ್ ಅವರು ಮನೆ ಮಂದಿಗೆ ಬುದ್ಧಿವಾದ ಹೇಳಿದ್ದಾರೆ. ಈ ರೀತಿಯ ಪದ ಬಳಕೆ ಮಾಡುವ ಮೊದಲು ಎಚ್ಚರಿಕೆಯಿಂದ ಇರಿ ಎಂದು ಹೇಳಿದ್ದಾರೆ ಸುದೀಪ್.

ವಿನಯ್ ಅವರು ಜೋರು ಧ್ವನಿಯಲ್ಲಿ ಮಾತನಾಡಿದ್ದರು. ಇದರಿಂದ ಅಸಮಾಧಾನಗೊಂಡ ಸಂಗೀತಾ ಅವರು ನಮಗೆ ನಿಮ್ಮ ಮಾತುಗಳಿಂದ ಭಯ ಆಗುತ್ತಿದೆ ಎಂದರು. ನಾನು ಯಾರಿಗೂ ಥ್ರೆಟ್ ಮಾಡುತ್ತಿಲ್ಲ ಎಂದು ವಿನಯ್ ಹೇಳಿದರು. ಸಂಗೀತಾ ಅವರ ಮಾತಿನಿಂದ ಪ್ರಭಾವಿತರಾದ ತನಿಶಾ ಕೂಡ ಥ್ರೆಟ್ ಶಬ್ದ ಬಳಕೆ ಮಾಡಿದರು. ಈ ಬಗ್ಗೆ ಸುದೀಪ್ ಮಾತನಾಡಿದರು.

‘ಇಲ್ಲಿ ಯಾರಿಗೂ ಥ್ರೆಟ್ ಇಲ್ಲ. ಒಂದೊಮ್ಮೆ ಥ್ರೆಟ್ ಬಂತು ಎಂದರೆ ಅಂಥವರಿಗೆ ಡೋರ್ ಓಪನ್ ಆಗುತ್ತದೆ. ಅವರು ನೇರವಾಗಿ ಮನೆಯಿಂದ ಹೋಗುತ್ತಾರೆ. ಮಾತನಾಡುವ ಮೊದಲು ಎಚ್ಚರಿಕೆ ಇರಲಿ. ಅತೀ ಸುರಕ್ಷಿತ ಮನೆ ಎಂದರೆ ಅದು ಬಿಗ್ ಬಾಸ್. ಇಲ್ಲಿ ಯಾರಿಗೂ ಏನೂ ಆಗುವುದಿಲ್ಲ’ ಎಂದರು ಸುದೀಪ್. ಈ ಮಾತನ್ನು ಮನೆಯವರು ಕೂಡ ಒಪ್ಪಿಕೊಂಡರು.

ಇದನ್ನೂ ಓದಿ: ‘ಈ ಮನಸ್ಥಿತಿಯಿಂದಲೇ ಮಹಿಳೆಯರು ಬಿಗ್ ಬಾಸ್ ಗೆಲ್ತಿಲ್ಲ’; ನೇರವಾಗಿ ಕ್ಲಾಸ್ ತೆಗೆದುಕೊಂಡ ಸುದೀಪ್

‘ಬಿಗ್ ಬಾಸ್’ ರಿಯಾಲಿಟಿ ಶೋ ಹಲವು ದೇಶಗಳಲ್ಲಿ, ಹಲವು ಭಾಷೆಗಳಲ್ಲಿ ನಡೆಯುತ್ತಿದೆ. ಒಂದೊಂದು ದೇಶದಿಂದ ಒಂದು ಹೆಸರಿನಿಂದ ಶೋನ ಕರೆಯಲಾಗುತ್ತದೆ. ಇಲ್ಲಿ ಒಬ್ಬರ ಮೇಲೆ ಹಲ್ಲೆ ನಡೆದರೆ ಅಂಥವರನ್ನು ಮನೆಯಿಂದ ಹೊರಗೆ ಕಳುಹಿಸಲಾಗುತ್ತದೆ. ಈ ಕಾರಣಕ್ಕೆ ಸ್ಪರ್ಧಿಗಳು ಹೆಚ್ಚು ಸುರಕ್ಷಿತ ಎನಿಸಿಕೊಳ್ಳುತ್ತಾರೆ. ಈ ಮೊದಲು ಕೈ ಮಾಡಿ ದೊಡ್ಮನೆಯಿಂದ ಹೊರ ಹೋದ ಅನೇಕರಿದ್ದಾರೆ. ಕಲರ್ಸ್ ಕನ್ನಡದಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಆಗುತ್ತಿದೆ. ಜಿಯೋದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:37 am, Sun, 22 October 23

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್