AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅತೀ ಸುರಕ್ಷಿತ ಮನೆ ಬಿಗ್ ಬಾಸ್’; ಸ್ಪರ್ಧಿಗಳಿಗೆ ಸುದೀಪ್ ಎಚ್ಚರಿಕೆ

‘ಅತೀ ಸುರಕ್ಷಿತ ಮನೆ ಎಂದರೆ ಅದು ಬಿಗ್ ಬಾಸ್. ಇಲ್ಲಿ ಯಾರಿಗೂ ಏನೂ ಆಗುವುದಿಲ್ಲ’ ಎಂದರು ಸುದೀಪ್. ಈ ಮಾತನ್ನು ಮನೆಯವರು ಕೂಡ ಒಪ್ಪಿಕೊಂಡರು.

‘ಅತೀ ಸುರಕ್ಷಿತ ಮನೆ ಬಿಗ್ ಬಾಸ್’; ಸ್ಪರ್ಧಿಗಳಿಗೆ ಸುದೀಪ್ ಎಚ್ಚರಿಕೆ
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Oct 22, 2023 | 12:26 PM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಈ ವಾರ ಹೆಚ್ಚು ಬಳಕೆ ಆದ ಶಬ್ದ ‘ಥ್ರೆಟ್​’. ವಿನಯ್ ಅವರಿಂದ ಥ್ರೆಟ್ ಆಗುತ್ತಿದೆ ಎಂದು ಸಂಗೀತಾ ಹೇಳುತ್ತಲೇ ಬಂದರು. ವಿನಯ್ ಜೋರಾಗಿ ಮಾತನಾಡಿದ್ದೇ ಇದಕ್ಕೆ ಕಾರಣ. ವೀಕೆಂಡ್​ನಲ್ಲಿ ಈ ವಿಚಾರ ಚರ್ಚೆಗೆ ಬಂದಿದೆ. ಸುದೀಪ್ ಅವರು ಮನೆ ಮಂದಿಗೆ ಬುದ್ಧಿವಾದ ಹೇಳಿದ್ದಾರೆ. ಈ ರೀತಿಯ ಪದ ಬಳಕೆ ಮಾಡುವ ಮೊದಲು ಎಚ್ಚರಿಕೆಯಿಂದ ಇರಿ ಎಂದು ಹೇಳಿದ್ದಾರೆ ಸುದೀಪ್.

ವಿನಯ್ ಅವರು ಜೋರು ಧ್ವನಿಯಲ್ಲಿ ಮಾತನಾಡಿದ್ದರು. ಇದರಿಂದ ಅಸಮಾಧಾನಗೊಂಡ ಸಂಗೀತಾ ಅವರು ನಮಗೆ ನಿಮ್ಮ ಮಾತುಗಳಿಂದ ಭಯ ಆಗುತ್ತಿದೆ ಎಂದರು. ನಾನು ಯಾರಿಗೂ ಥ್ರೆಟ್ ಮಾಡುತ್ತಿಲ್ಲ ಎಂದು ವಿನಯ್ ಹೇಳಿದರು. ಸಂಗೀತಾ ಅವರ ಮಾತಿನಿಂದ ಪ್ರಭಾವಿತರಾದ ತನಿಶಾ ಕೂಡ ಥ್ರೆಟ್ ಶಬ್ದ ಬಳಕೆ ಮಾಡಿದರು. ಈ ಬಗ್ಗೆ ಸುದೀಪ್ ಮಾತನಾಡಿದರು.

‘ಇಲ್ಲಿ ಯಾರಿಗೂ ಥ್ರೆಟ್ ಇಲ್ಲ. ಒಂದೊಮ್ಮೆ ಥ್ರೆಟ್ ಬಂತು ಎಂದರೆ ಅಂಥವರಿಗೆ ಡೋರ್ ಓಪನ್ ಆಗುತ್ತದೆ. ಅವರು ನೇರವಾಗಿ ಮನೆಯಿಂದ ಹೋಗುತ್ತಾರೆ. ಮಾತನಾಡುವ ಮೊದಲು ಎಚ್ಚರಿಕೆ ಇರಲಿ. ಅತೀ ಸುರಕ್ಷಿತ ಮನೆ ಎಂದರೆ ಅದು ಬಿಗ್ ಬಾಸ್. ಇಲ್ಲಿ ಯಾರಿಗೂ ಏನೂ ಆಗುವುದಿಲ್ಲ’ ಎಂದರು ಸುದೀಪ್. ಈ ಮಾತನ್ನು ಮನೆಯವರು ಕೂಡ ಒಪ್ಪಿಕೊಂಡರು.

ಇದನ್ನೂ ಓದಿ: ‘ಈ ಮನಸ್ಥಿತಿಯಿಂದಲೇ ಮಹಿಳೆಯರು ಬಿಗ್ ಬಾಸ್ ಗೆಲ್ತಿಲ್ಲ’; ನೇರವಾಗಿ ಕ್ಲಾಸ್ ತೆಗೆದುಕೊಂಡ ಸುದೀಪ್

‘ಬಿಗ್ ಬಾಸ್’ ರಿಯಾಲಿಟಿ ಶೋ ಹಲವು ದೇಶಗಳಲ್ಲಿ, ಹಲವು ಭಾಷೆಗಳಲ್ಲಿ ನಡೆಯುತ್ತಿದೆ. ಒಂದೊಂದು ದೇಶದಿಂದ ಒಂದು ಹೆಸರಿನಿಂದ ಶೋನ ಕರೆಯಲಾಗುತ್ತದೆ. ಇಲ್ಲಿ ಒಬ್ಬರ ಮೇಲೆ ಹಲ್ಲೆ ನಡೆದರೆ ಅಂಥವರನ್ನು ಮನೆಯಿಂದ ಹೊರಗೆ ಕಳುಹಿಸಲಾಗುತ್ತದೆ. ಈ ಕಾರಣಕ್ಕೆ ಸ್ಪರ್ಧಿಗಳು ಹೆಚ್ಚು ಸುರಕ್ಷಿತ ಎನಿಸಿಕೊಳ್ಳುತ್ತಾರೆ. ಈ ಮೊದಲು ಕೈ ಮಾಡಿ ದೊಡ್ಮನೆಯಿಂದ ಹೊರ ಹೋದ ಅನೇಕರಿದ್ದಾರೆ. ಕಲರ್ಸ್ ಕನ್ನಡದಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಆಗುತ್ತಿದೆ. ಜಿಯೋದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:37 am, Sun, 22 October 23

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ