‘ಅತೀ ಸುರಕ್ಷಿತ ಮನೆ ಬಿಗ್ ಬಾಸ್’; ಸ್ಪರ್ಧಿಗಳಿಗೆ ಸುದೀಪ್ ಎಚ್ಚರಿಕೆ

‘ಅತೀ ಸುರಕ್ಷಿತ ಮನೆ ಎಂದರೆ ಅದು ಬಿಗ್ ಬಾಸ್. ಇಲ್ಲಿ ಯಾರಿಗೂ ಏನೂ ಆಗುವುದಿಲ್ಲ’ ಎಂದರು ಸುದೀಪ್. ಈ ಮಾತನ್ನು ಮನೆಯವರು ಕೂಡ ಒಪ್ಪಿಕೊಂಡರು.

‘ಅತೀ ಸುರಕ್ಷಿತ ಮನೆ ಬಿಗ್ ಬಾಸ್’; ಸ್ಪರ್ಧಿಗಳಿಗೆ ಸುದೀಪ್ ಎಚ್ಚರಿಕೆ
ಸುದೀಪ್
Follow us
|

Updated on:Oct 22, 2023 | 12:26 PM

ಬಿಗ್ ಬಾಸ್ (Bigg Boss) ಮನೆಯಲ್ಲಿ ಈ ವಾರ ಹೆಚ್ಚು ಬಳಕೆ ಆದ ಶಬ್ದ ‘ಥ್ರೆಟ್​’. ವಿನಯ್ ಅವರಿಂದ ಥ್ರೆಟ್ ಆಗುತ್ತಿದೆ ಎಂದು ಸಂಗೀತಾ ಹೇಳುತ್ತಲೇ ಬಂದರು. ವಿನಯ್ ಜೋರಾಗಿ ಮಾತನಾಡಿದ್ದೇ ಇದಕ್ಕೆ ಕಾರಣ. ವೀಕೆಂಡ್​ನಲ್ಲಿ ಈ ವಿಚಾರ ಚರ್ಚೆಗೆ ಬಂದಿದೆ. ಸುದೀಪ್ ಅವರು ಮನೆ ಮಂದಿಗೆ ಬುದ್ಧಿವಾದ ಹೇಳಿದ್ದಾರೆ. ಈ ರೀತಿಯ ಪದ ಬಳಕೆ ಮಾಡುವ ಮೊದಲು ಎಚ್ಚರಿಕೆಯಿಂದ ಇರಿ ಎಂದು ಹೇಳಿದ್ದಾರೆ ಸುದೀಪ್.

ವಿನಯ್ ಅವರು ಜೋರು ಧ್ವನಿಯಲ್ಲಿ ಮಾತನಾಡಿದ್ದರು. ಇದರಿಂದ ಅಸಮಾಧಾನಗೊಂಡ ಸಂಗೀತಾ ಅವರು ನಮಗೆ ನಿಮ್ಮ ಮಾತುಗಳಿಂದ ಭಯ ಆಗುತ್ತಿದೆ ಎಂದರು. ನಾನು ಯಾರಿಗೂ ಥ್ರೆಟ್ ಮಾಡುತ್ತಿಲ್ಲ ಎಂದು ವಿನಯ್ ಹೇಳಿದರು. ಸಂಗೀತಾ ಅವರ ಮಾತಿನಿಂದ ಪ್ರಭಾವಿತರಾದ ತನಿಶಾ ಕೂಡ ಥ್ರೆಟ್ ಶಬ್ದ ಬಳಕೆ ಮಾಡಿದರು. ಈ ಬಗ್ಗೆ ಸುದೀಪ್ ಮಾತನಾಡಿದರು.

‘ಇಲ್ಲಿ ಯಾರಿಗೂ ಥ್ರೆಟ್ ಇಲ್ಲ. ಒಂದೊಮ್ಮೆ ಥ್ರೆಟ್ ಬಂತು ಎಂದರೆ ಅಂಥವರಿಗೆ ಡೋರ್ ಓಪನ್ ಆಗುತ್ತದೆ. ಅವರು ನೇರವಾಗಿ ಮನೆಯಿಂದ ಹೋಗುತ್ತಾರೆ. ಮಾತನಾಡುವ ಮೊದಲು ಎಚ್ಚರಿಕೆ ಇರಲಿ. ಅತೀ ಸುರಕ್ಷಿತ ಮನೆ ಎಂದರೆ ಅದು ಬಿಗ್ ಬಾಸ್. ಇಲ್ಲಿ ಯಾರಿಗೂ ಏನೂ ಆಗುವುದಿಲ್ಲ’ ಎಂದರು ಸುದೀಪ್. ಈ ಮಾತನ್ನು ಮನೆಯವರು ಕೂಡ ಒಪ್ಪಿಕೊಂಡರು.

ಇದನ್ನೂ ಓದಿ: ‘ಈ ಮನಸ್ಥಿತಿಯಿಂದಲೇ ಮಹಿಳೆಯರು ಬಿಗ್ ಬಾಸ್ ಗೆಲ್ತಿಲ್ಲ’; ನೇರವಾಗಿ ಕ್ಲಾಸ್ ತೆಗೆದುಕೊಂಡ ಸುದೀಪ್

‘ಬಿಗ್ ಬಾಸ್’ ರಿಯಾಲಿಟಿ ಶೋ ಹಲವು ದೇಶಗಳಲ್ಲಿ, ಹಲವು ಭಾಷೆಗಳಲ್ಲಿ ನಡೆಯುತ್ತಿದೆ. ಒಂದೊಂದು ದೇಶದಿಂದ ಒಂದು ಹೆಸರಿನಿಂದ ಶೋನ ಕರೆಯಲಾಗುತ್ತದೆ. ಇಲ್ಲಿ ಒಬ್ಬರ ಮೇಲೆ ಹಲ್ಲೆ ನಡೆದರೆ ಅಂಥವರನ್ನು ಮನೆಯಿಂದ ಹೊರಗೆ ಕಳುಹಿಸಲಾಗುತ್ತದೆ. ಈ ಕಾರಣಕ್ಕೆ ಸ್ಪರ್ಧಿಗಳು ಹೆಚ್ಚು ಸುರಕ್ಷಿತ ಎನಿಸಿಕೊಳ್ಳುತ್ತಾರೆ. ಈ ಮೊದಲು ಕೈ ಮಾಡಿ ದೊಡ್ಮನೆಯಿಂದ ಹೊರ ಹೋದ ಅನೇಕರಿದ್ದಾರೆ. ಕಲರ್ಸ್ ಕನ್ನಡದಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಆಗುತ್ತಿದೆ. ಜಿಯೋದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:37 am, Sun, 22 October 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ