AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಕನ್ನಡ 12: ಉತ್ತಮ ಸ್ಪರ್ಧಿಯೇ ಹೊರಕ್ಕೆ, ಒಳ್ಳೆಯವರಿಗಿದು ಕಾಲವಲ್ಲ ಬಿಡಿ

Bigg Boss Kannada 12: ಬಿಗ್​​ಬಾಸ್ ಮನೆ ಒಳ್ಳೆಯವರಿಗಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇತರರಿಗೆ ಮನನೋಯಿಸದೆ, ಅನವಶ್ಯಕ ಮಾತುಗಳನ್ನಾಡದೆ, ಅನವಶ್ಯಕ ಜಗಳ ಮಾಡದೆ, ಎಲ್ಲರನ್ನೂ ಗೌರವಿಸುತ್ತಾ, ನಾಟಕೀಯತೆ ಪ್ರದರ್ಶಿಸದೆ ಜಂಟಲ್​​ಮನ್ ಗೇಮ್ ಆಡುತ್ತಿದ್ದ ಒಳ್ಳೆಯ ಸ್ಪರ್ಧಿ ಈ ವಾರ ಮನೆಯಿಂದ ಹೊರಗೆ ಹೋಗಿದ್ದಾರೆ.

ಬಿಗ್​​ಬಾಸ್ ಕನ್ನಡ 12: ಉತ್ತಮ ಸ್ಪರ್ಧಿಯೇ ಹೊರಕ್ಕೆ, ಒಳ್ಳೆಯವರಿಗಿದು ಕಾಲವಲ್ಲ ಬಿಡಿ
Bigg Boss Kannada 12
ಮಂಜುನಾಥ ಸಿ.
|

Updated on: Dec 07, 2025 | 10:52 PM

Share

ಜೋರಾಗಿ ಗದ್ದಲ ಮಾಡುವವರಿಗೆ, ಸುಖಾ ಸುಮ್ಮನೆ ಜಗಳ ಮಾಡುವವರಿಗೆ, ನಾಟಕೀಯತೆ ಪ್ರದರ್ಶಿಸುವವರಿಗೆ, ಎಲ್ಲ ಭಾವನೆಗಳನ್ನು ಅತಿಯಾಗಿ ತೋರ್ಪಡಿಸಿಕೊಳ್ಳುವವರಿಗೆ, ಸುಖಾ ಸುಮ್ಮನೆ ಮಾತನಾಡುವವರಿಗಷ್ಟೆ ಬಿಗ್​​ಬಾಸ್ (Bigg Boss) ಮನೆಯಲ್ಲಿ ಪ್ರಾಮುಖ್ಯತೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಶಾಂತವಾಗಿದ್ದು, ಪರಿಸ್ಥಿತಿಗೆ ತಕ್ಕಂತೆ ವರ್ತಿಸುತ್ತಾ, ಇತರರಿಗೆ ಮನನೋಯಿಸದೆ, ಅನವಶ್ಯಕ ಮಾತುಗಳನ್ನಾಡದೆ, ಅನವಶ್ಯಕ ಜಗಳ ಮಾಡದೆ, ಎಲ್ಲರಿಗೂ ಗೌರವಿಸುತ್ತಾ, ನಾಟಕೀಯತೆ ಪ್ರದರ್ಶಿಸದೆ ಜಂಟಲ್​​ಮನ್ ಗೇಮ್ ಆಡುತ್ತಿದ್ದ ಒಳ್ಳೆಯ ಸ್ಪರ್ಧಿ ಈ ವಾರ ಮನೆಯಿಂದ ಹೊರಗೆ ಹೋಗಿದ್ದಾರೆ. ಆ ಮೂಲಕ ಬಿಗ್​​ಬಾಸ್ ಮನೆ ಒಳ್ಳೆಯವರಿಗಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಆರಂಭದಿಂದಲೂ ತಮ್ಮ ಒಳ್ಳೆಯತನದಿಂದ ಸೆಳೆದಿದ್ದ ಅಭಿಷೇಕ್ ಅವರು ಈ ವಾರ ಬಿಗ್​​ಬಾಸ್ ಮನೆಯಿಂದ ಹೊರಗೆ ಹೋಗಿದ್ದಾರೆ. ಅಭಿಷೇಕ್ ಅವರು ಈ ವಾರ ಚೆನ್ನಾಗಿ ಆಟವಾಡಿ ಎರಡನೇ ಬಾರಿ ಕ್ಯಾಪ್ಟನ್ ಸಹ ಆಗಿದ್ದರು. ಆದರೆ ಗಿಲ್ಲಿ ಮಾಡಿದ ತರ್ಲೆ ಕೆಲಸದಿಂದ ಅವರ ಕ್ಯಾಪ್ಟೆನ್ಸಿ ಹೋಗಿದ್ದು ಮಾತ್ರವಲ್ಲದೆ. ಈಗ ಅವರು ಬಿಗ್​​ಬಾಸ್ ಮನೆಯಿಂದಲೇ ಹೊರಗೆ ಹೋಗಿದ್ದಾರೆ.

ಈ ವಾರ ಸಾಕಷ್ಟು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಗಿಲ್ಲಿ, ಕಾವ್ಯಾ, ಅಶ್ವಿನಿ, ಧ್ರುವಂತ್, ಧನುಶ್, ಸೂರಜ್, ಮಾಳು, ರಾಶಿಕಾ, ಸ್ಪಂದನಾ ಅವರುಗಳು ಈ ವಾರ ನಾಮಿನೇಟ್ ಆಗಿದ್ದರು. ಎಲ್ಲರೂ ಸೇಫ್ ಆಗಿ ಕೊನೆಯದಾಗಿ ಸೂರಜ್, ಮಾಳು ಮತ್ತು ಅಭಿಷೇಕ್ ಮಾತ್ರವೇ ಉಳಿದುಕೊಂಡರು. ಅವರು ಮೂವರನ್ನೂ ಆಕ್ಟಿವಿಟಿ ರೂಂಗೆ ಕಳಿಸಲಾಯ್ತು. ಮೂವರ ಮುಂದೆ ಸೂಟ್​ಕೇಸ್ ಇಡಲಾಗಿತ್ತು. ಸೂಟ್​​ಕೇಸ್​​ನಲ್ಲಿ ಅವರ ಎವಿಕ್ಷನ್​​ಗೆ ಸಂಬಂಧಿಸಿದ ಬೋರ್ಡ್ ಇಡಲಾಗಿತ್ತು. ಅಭಿಷೇಕ್ ಅವರ ಸೂಟ್​ಕೇಸ್​​ನಲ್ಲಿ ‘ದಿ ಎಂಡ್’ ಎಂದು ಬರೆದಿತ್ತು. ಅಲ್ಲಿಗೆ ಅಭಿಷೇಕ್ ಅವರ ಆಟ ಅಂತ್ಯವಾಯ್ತು.

ಇದನ್ನೂ ಓದಿ:ಆ ಒಂದು ಆರೋಪಕ್ಕೆ ಬಿಗ್​​ಬಾಸ್ ವೇದಿಕೆ ಮೇಲೆ ಉತ್ತರ ನೀಡಿದ ಕಿಚ್ಚ

ಅಭಿಷೇಕ್ ಅವರು ಬಿಗ್​​ಬಾಸ್ ಸೀಸನ್ 12ರ ಜಂಟಲ್​​ಮ್ಯಾನ್ ಆಗಿದ್ದರು. ಚೆನ್ನಾಗಿ ಟಾಸ್ಕ್ ಆಡುತ್ತಿದ್ದರು. ಮನೆಯ ನಿಯಮಗಳನ್ನು ಮೀರುತ್ತಿರಲಿಲ್ಲ. ಯಾರೊಟ್ಟಿಗೂ ಜಗಳ ಮಾಡುತ್ತಿರಲಿಲ್ಲ. ಯಾರ ಬಗ್ಗೆಯೂ ವಿನಾ ಕಾರಣ ಮಾತನಾಡುತ್ತಿರಲಿಲ್ಲ. ಯಾರ ಬೆನ್ನ ಹಿಂದೆಯೂ ನಿಂದನೆ ಮಾಡುತ್ತಿರಲಿಲ್ಲ. ದರ್ಪ ತೋರಿಸುತ್ತಿರಲಿಲ್ಲ, ಹಾಸ್ಯದ ಹೆಸರಲ್ಲಿ ತೇಜೋವಧೆ ಮಾಡುತ್ತಿರಲಿಲ್ಲ. ಒಟ್ಟಾರೆ ಒಬ್ಬ ಜಂಟಲ್​​ಮ್ಯಾನ್ ರೀತಿ ಬಿಗ್​​ಬಾಸ್ ಮನೆಯಲ್ಲಿದ್ದರು. ಆದರೆ ಅದೇ ಅವರಿಗೆ ಮುಳುವಾಯ್ತು. ಅಭಿಷೇಕ್ ಅವರು ಹೊರಗೆ ಬಂದ ಮೇಲೂ ಸಹ ಸುದೀಪ್ ಅವರು, ‘ನೀವೊಬ್ಬ ಒಳ್ಳೆಯ ವ್ಯಕ್ತಿ’ ಎಂದು ಬೆನ್ನುತಟ್ಟಿದರು. ಅಲ್ಲದೆ, ನೀವು ಹೊರಗೆ ಇದ್ದಂತೆ ಬಿಗ್​​ಬಾಸ್ ಮನೆಯಲ್ಲಿ ಇದ್ದಿರಿ ಬಹುಷಃ ಹಾಗೆ ಇರಬಾರದಿತ್ತೇನೋ ಎಂದರು. ಏನೇ ಆಗಲಿ ಒಬ್ಬ ಒಳ್ಳೆಯ ಸ್ಪರ್ಧಿ ಬಿಗ್​​ಬಾಸ್ ಮನೆಯಿಂದ ಹೊರಗೆ ಹೋಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!