AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೂವರೆ ಲಕ್ಷ ಕೊಟ್ಟರು; ಸಂಭಾವನೆ ಬಗ್ಗೆ ಮಲ್ಲಮ್ಮ ಮಾತು

Bigg Boss Kannada 12: ಬಿಗ್​​ಬಾಸ್ ಕನ್ನಡ ರಿಯಾಲಿಟಿ ಶೋನಿಂದ ಕಳೆದ ವಾರ ಮಲ್ಲಮ್ಮ ಹೊರಬಂದಿದ್ದಾರೆ. ಮಲ್ಲಮ್ಮ ವಯಸ್ಸಿನ ಮಿತಿಗಳನ್ನು ಮೀರಿ ಬಹಳ ಚೆನ್ನಾಗಿ ಆಡಿದ್ದರು. ಆದರೆ ಅನಿವಾರ್ಯವಾಗಿ ಹೊರಬರಲೇ ಬೇಕಾಯ್ತು. ಇದೀಗ ಮಲ್ಲಮ್ಮ ಬಿಗ್​​ಬಾಸ್​​ ಶೋನ ಅನುಭವಗಳ ಬಗ್ಗೆ ಮಾತನಾಡಿದ್ದು, ಜೊತೆಗೆ ತಮಗೆ ಶೋನಿಂದ ಸಿಕ್ಕ ಸಂಭಾವನೆ ಬಗ್ಗೆಯೂ ಮಾತನಾಡಿದ್ದಾರೆ.

ಒಂದೂವರೆ ಲಕ್ಷ ಕೊಟ್ಟರು; ಸಂಭಾವನೆ ಬಗ್ಗೆ ಮಲ್ಲಮ್ಮ ಮಾತು
Bigg Boss Mallamma
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 06, 2025 | 11:58 AM

Share

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (Bigg Boss Kannada) ಮಲ್ಲಮ್ಮ ಅವರು ಪ್ರಮುಖ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದರು. ಕೇವಲ ಐದನೇ ವಾರಕ್ಕೆ ಅವರು ದೊಡ್ಮನೆಯಿಂದ ಹೊರಕ್ಕೆ ಹೋಗಬೇಕಾದ ಪರಿಸ್ಥಿತಿ ಬಂತು. ಬಿಗ್ ಬಾಸ್ ಮನೆಯಲ್ಲಿ ನೀಡಿದ ಸಂಭಾವನೆ ಬಗ್ಗೆ ಈಗ ಅವರು ಮಾತನಾಡಿದ್ದಾರೆ. ಎಷ್ಟು ಸಂಭಾವನೆ ನೀಡಿದರು ಎಂಬ ವಿಚಾರವನ್ನು ಅವರು ರಿವೀಲ್ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಮಲ್ಲಮ್ಮ ಅವರು ‘ಬಿಗ್ ಬಾಸ್’ನಿಂದ ಬಂದ ಬಳಿಕ ಸಾಕಷ್ಟು ಕಡೆಗಳಲ್ಲಿ ಸಂದರ್ಶನಗಳನ್ನು ನೀಡಿದರು. ಈ ವೇಳೆ ಅವರು ಹಲವು ವಿಚಾರಗಳನ್ನು ಹಂಚಿಕೊಂಡರು. ‘ಬಾಸ್’ ಹೆಸರಿನ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಅವರು ಸಂಭಾವನೆ ವಿಚಾರ ಮಾತನಾಡಿದರು.

‘ನನಗೆ ಒಂದೂವರೆ ಲಕ್ಷ ಕೊಟ್ಟಿದ್ದಾರೆ. ಸಾಲ ಇದೆ. ಅದನ್ನು ತೀರಿಸಬೇಕು. ಈ ಹಣವನ್ನು ಅದಕ್ಕೆ ಬಳಸುತ್ತೇನೆ. ಆದರೂ ಸಾಲ ಉಳಿಯುತ್ತೆ. ಬೇರೆ ಏನಾದರೂ ಮಾಡಬೇಕು. ಇನ್ನೂ ಸ್ವಲ್ಪ ದಿನ ಇದ್ದಿದ್ದರೆ ಸಾಲ ತೀರುತ್ತಿತ್ತು’ ಎಂದು ಮಲ್ಲಮ್ಮ ಅವರು ಹೇಳಿದರು.

ಮಲ್ಲಮ್ಮ ಮಾತನಾಡಿರುವುದು ಮನೆಯಲ್ಲಿ ಇದ್ದಿದ್ದಕ್ಕೆ ನೀಡಿದ ಸಂಭಾವನೆ ವಿಚಾರ ಅಲ್ಲ. ಬದಲಿಗೆ ಮನೆಯಿಂದ ಹೊರ ಬಂದ ಬಳಿಕ ಅವರಿಗೆ ನೀಡುವ ಸಂಭಾವನೆ ವಿಚಾರದ ಬಗ್ಗೆ. ಅವರಿಗೆ ದೊಡ್ಮನೆಯಲ್ಲಿ ಇದ್ದಿದ್ದಕ್ಕೆ ಎಷ್ಟು ಸಂಭಾವನೆ ನೀಡಿದರು ಎಂಬುದರ ವಿಚಾರ ಇನ್ನೂ ರಿವೀಲ್ ಆಗಿಲ್ಲ. ಅದನ್ನು ಸಾಮಾನ್ಯವಾಗಿ ಯಾವ ಸ್ಪರ್ಧಿಗಳು ಹೇಳಿಕೊಳ್ಳುವುದಿಲ್ಲ.

ಮಲ್ಲಮ್ಮನ ಬಗ್ಗೆ

ಮಲ್ಲಮ್ಮ ಅವರು ಯಾದಗಿರಿ ಜಿಲ್ಲೆಯವರು. ಬೆಂಗಳೂರಿಗೆ ಕೆಲಸಕ್ಕೋಸ್ಕರ ಬಂದರು. ಅವರು ಮಾತನಾಡುವ ವಿಡಿಯೋಗಳನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡರು. ಆ ಬಳಿಕ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ಅವರು ತಮ್ಮದೇ ಇನ್​ಸ್ಟಾಗ್ರಾಮ್, ಯೂಟ್ಯೂಬ್ ಚಾನೆಲ್ ಮಾಡಿಕೊಂಡು ವಿಡಿಯೋಗಳನ್ನು ಮಾಡಿ ಹಾಕಲು ಆರಂಭಿಸಿದರು. ಅಂದಿನಿಂದ ಮಲ್ಲಮ್ಮ ಅವರು ಮತ್ತಷ್ಟು ಫೇಮಸ್ ಆದರು. ಈಗ ಮಲ್ಲಮ್ಮ ಅವರ ಹಿಂಬಾಲಕರ ಸಂಖ್ಯೆ ಹೆಚ್ಚಾಗಿದೆ. ದೊಡ್ಮನೆಯಲ್ಲಿ ಅವರು ಮಾತು ಕಡಿಮೆ ಆಡಿದರು ಎಂಬ ಅಭಿಪ್ರಾಯವೂ ಇದೆ. ಇದು ಕೂಡ ಅವರಿಗೆ ಹಿನ್ನಡೆ ಉಂಟು ಮಾಡಿತು ಎನ್ನಬಹುದು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:34 am, Thu, 6 November 25

ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ
ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ
ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ
ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ
ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು
ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು
ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ
ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ
‘37 ಕೋಟಿ ವೋಟ್ ಅವನಿಗೆ ಬಿದ್ದಿದೆ’; ಹನುಮಂತನ ಪ್ರಕಾರವೂ ಗಿಲ್ಲಿನೇ ವಿನ್ನರ್
‘37 ಕೋಟಿ ವೋಟ್ ಅವನಿಗೆ ಬಿದ್ದಿದೆ’; ಹನುಮಂತನ ಪ್ರಕಾರವೂ ಗಿಲ್ಲಿನೇ ವಿನ್ನರ್
ಕಾರುಗಳಿಗೆ ಡಿಕ್ಕಿ ಹೊಡೆದು, ಟೋಲ್ ಸಿಬ್ಬಂದಿಯ ಎಳೆದೊಯ್ದ ಟ್ರಕ್
ಕಾರುಗಳಿಗೆ ಡಿಕ್ಕಿ ಹೊಡೆದು, ಟೋಲ್ ಸಿಬ್ಬಂದಿಯ ಎಳೆದೊಯ್ದ ಟ್ರಕ್
ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಸಿಎಂ ಕಾರು: ಅಧಿಕಾರಿಗಳು ಹರಸಾಹಸ
ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಸಿಎಂ ಕಾರು: ಅಧಿಕಾರಿಗಳು ಹರಸಾಹಸ
ಕಾರಿನಲ್ಲಿ ಕುಳಿತು ರಾಜಾರೋಷವಾಗಿ ಗನ್ ತೋರಿಸಿದ ವ್ಯಕ್ತಿ!
ಕಾರಿನಲ್ಲಿ ಕುಳಿತು ರಾಜಾರೋಷವಾಗಿ ಗನ್ ತೋರಿಸಿದ ವ್ಯಕ್ತಿ!
ಓವರ್ ಟೇಕ್ ಮಾಡೋಕೆ ಹೋಗಿ ಆಗಿದ್ದೇನು ನೋಡಿ; ಭೀಕರ ಅಪಘಾತದ ಸಿಸಿಟಿವಿ ದೃಶ್ಯ
ಓವರ್ ಟೇಕ್ ಮಾಡೋಕೆ ಹೋಗಿ ಆಗಿದ್ದೇನು ನೋಡಿ; ಭೀಕರ ಅಪಘಾತದ ಸಿಸಿಟಿವಿ ದೃಶ್ಯ
ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್​ಡಿಎ!
ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್​ಡಿಎ!