AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಉರುಡುಗ ಮಾಡಿದ ತಪ್ಪಿಗೆ ಮನೆ ಮಂದಿಗೆ ಶಿಕ್ಷೆ ನೀಡಿದ ಬಿಗ್​ ಬಾಸ್​

ಪ್ರತಿ ವಾರ ಓರ್ವ ಸ್ಪರ್ಧಿಯನ್ನು ಬಿಗ್​ ಬಾಸ್​ ಮನೆಯಲ್ಲಿ ಕಳಪೆ ಹಾಗೂ ಅತ್ಯುತ್ತಮ ಎನ್ನುವ ಆಯ್ಕೆ ನೀಡಲಾಗುತ್ತದೆ. ಈ ಬಾರಿ ಪ್ರಶಾಂತ್​ ಅವರನ್ನು ಕಳಪೆ ಎಂದು ಮನೆಯವರು ನಿರ್ಧರಿಸಿದರು.

ದಿವ್ಯಾ ಉರುಡುಗ ಮಾಡಿದ ತಪ್ಪಿಗೆ ಮನೆ ಮಂದಿಗೆ ಶಿಕ್ಷೆ ನೀಡಿದ ಬಿಗ್​ ಬಾಸ್​
ದಿವ್ಯಾ ಉರುಡುಗ
TV9 Web
| Edited By: ಆಯೇಷಾ ಬಾನು|

Updated on: Jul 11, 2021 | 8:03 AM

Share

ಬಿಗ್​ ಬಾಸ್​ ಮನೆಯಲ್ಲಿ ತಪ್ಪು ಮಾಡೋದು ಒಬ್ಬರಾದರೂ ಶಿಕ್ಷೆ ಮಾತ್ರ ಎಲ್ಲರಿಗೂ ಸಿಗುತ್ತದೆ. ಇದು ಈ ಮೊದಲು ಅನೇಕ ಬಾರಿ ಆಗಿದೆ. ಈಗ ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಮಾಡಿದ ತಪ್ಪಿಗೆ ಮನೆ ಮಂದಿ ಎಲ್ಲರೂ ಶಿಕ್ಷೆ ಪಡೆದಿದ್ದಾರೆ. ಈ ವಿಚಾರದಲ್ಲಿ ಕೆಲವರು ದಿವ್ಯಾ ಬಗ್ಗೆ ಬೇಸರ ಹೊರ ಹಾಕಿದ್ದಾರೆ.

ಪ್ರತಿ ವಾರ ಓರ್ವ ಸ್ಪರ್ಧಿಯನ್ನು ಬಿಗ್​ ಬಾಸ್​ ಮನೆಯಲ್ಲಿ ಕಳಪೆ ಹಾಗೂ ಅತ್ಯುತ್ತಮ ಎನ್ನುವ ಆಯ್ಕೆ ನೀಡಲಾಗುತ್ತದೆ. ಈ ಬಾರಿ ಪ್ರಶಾಂತ್​ ಅವರನ್ನು ಕಳಪೆ ಎಂದು ಮನೆಯವರು ನಿರ್ಧರಿಸಿದರು. ಅವರು ವಿನಾಕಾರಣ ಜಗಳವಾಡುತ್ತಾರೆ ಎಂಬ ಕಾರಣವನ್ನು ನೀಡಲಾಯಿತು. ಅವರನ್ನು ಮನೆಯವರು ಜೈಲಿಗೂ ಕೂಡ ಕಳುಹಿಸಿದರು.

ಬಿಗ್​ ಬಾಸ್​ ನಿಯಮದ ಪ್ರಕಾರ ಕಳಪೆ ಪಟ್ಟ ಪಡೆದು ಜೈಲಿಗೆ ಹೋದ ಸ್ಪರ್ಧಿ ಅಡುಗೆಗೆ ತರಕಾರಿ ಕತ್ತರಿಸಿಕೊಡಬೇಕು. ಆದರೆ, ದಿವ್ಯಾ ಉರುಡುಗೆ ಇದು ನೆನಪಿಲ್ಲದೆ ತಾವೇ ಕತ್ತರಿಸಿ ಬಿಟ್ಟರು. ಕತ್ತರಿಸಿ ಆದ ನಂತರದಲ್ಲಿ ಈ ಬಗ್ಗೆ ಅವರಿಗೆ ಇದು ಅರಿವಾಗಿದೆ. ಬಿಗ್​ ಬಾಸ್ ನನ್ನ ಕಡೆಯಿಂದ ತಪ್ಪಾಗಿದೆ ಎಂದು ಕ್ಯಾಮೆರಾ ಎದುರು ನಿಂತು ಅವರು ಕೇಳಿಕೊಂಡರು.

ಇದಾದ ಬೆನ್ನಲ್ಲೇ ಬಿಗ್​ ಬಾಸ್ ಮನೆಯಿಂದ ಆದೇಶವೊಂದು ಬಂತು. ಇದನ್ನು ಕೇಳಿ ಬಿಗ್​ ಬಾಸ್​ ಮನೆಯವರು ಶಾಕ್​ಗೆ ಒಳಗಾದರು. ‘ದಿವ್ಯಾ ಕತ್ತರಿಸಿದ ನುಗ್ಗೇಕಾಯಿ, ಆಲೂಗಡ್ಡೆ, ಕ್ಯಾರೆಟ್​ ಜತೆಗೆ ಫ್ರಿಡ್ಜ್​ನಲ್ಲಿರುವ​ ನುಗ್ಗೇಕಾಯಿ, ಆಲೂಗಡ್ಡೆ, ಕ್ಯಾರೆಟ್ ಕೂಡ ಸ್ಟೋರೂಮ್​ಗೆ ಇಡಬೇಕು’ ಎನ್ನುವ ಆದೇಶವನ್ನು ಬಿಗ್ ಬಾಸ್​ ಮಾಡಿದರು. ಈ ಮೂಲಕ ಆ ತರಕಾರಿಗಳನ್ನು ಬಳಸುವುದರಿಂದ ಮನೆಯವರು ವಂಚಿತರಾದರು.

ನಂತರ, ರೆಫ್ರಿಜರೇಟರ್​ನಲ್ಲಿದ್ದ ಬೀನ್ಸ್​, ಟೊಮ್ಯಾಟೋವನ್ನು ಪ್ರಶಾಂತ್​ಗೆ ಕತ್ತರಿಸೋಕೆ ನೀಡಿದರು. ‘ನಾನು ಕತ್ತರಿಸೋದಿಲ್ಲ. ನನ್ನ ಪಾಲಿಂದನ್ನು ನೀವೆ ಕತ್ತರಿಸಿದ್ದೀರಿ’ ಎಂದು ಪ್ರಶಾಂತ್​ ಅವಾಜ್​ ಹಾಕಿದರು. ನಂತರ ಸ್ವಲ್ಪ ಸತಾಯಿಸಿ ತರಕಾರಿ ಕತ್ತರಿಸಿದರು.

ಇದನ್ನೂ ಓದಿ: Divya Uruduga: ಕನ್ನಡ ಬಿಗ್​ ಬಾಸ್​ ಸೀಸನ್​ 8ರಲ್ಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ

ಅರವಿಂದ್ ಗೆಲ್ಲಿಸೋಕೆ ಚಕ್ರವರ್ತಿಗೆ ಅನ್ಯಾಯ ಮಾಡಿದ್ರಾ ದಿವ್ಯಾ ಉರುಡುಗ? ಬಿಗ್​ ಬಾಸ್​ ಮನೆಯಲ್ಲಿ ಹೀಗೊಂದು ಪ್ರಶ್ನೆ

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?