AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಉರುಡುಗ ಮಾಡಿದ ತಪ್ಪಿಗೆ ಮನೆ ಮಂದಿಗೆ ಶಿಕ್ಷೆ ನೀಡಿದ ಬಿಗ್​ ಬಾಸ್​

ಪ್ರತಿ ವಾರ ಓರ್ವ ಸ್ಪರ್ಧಿಯನ್ನು ಬಿಗ್​ ಬಾಸ್​ ಮನೆಯಲ್ಲಿ ಕಳಪೆ ಹಾಗೂ ಅತ್ಯುತ್ತಮ ಎನ್ನುವ ಆಯ್ಕೆ ನೀಡಲಾಗುತ್ತದೆ. ಈ ಬಾರಿ ಪ್ರಶಾಂತ್​ ಅವರನ್ನು ಕಳಪೆ ಎಂದು ಮನೆಯವರು ನಿರ್ಧರಿಸಿದರು.

ದಿವ್ಯಾ ಉರುಡುಗ ಮಾಡಿದ ತಪ್ಪಿಗೆ ಮನೆ ಮಂದಿಗೆ ಶಿಕ್ಷೆ ನೀಡಿದ ಬಿಗ್​ ಬಾಸ್​
ದಿವ್ಯಾ ಉರುಡುಗ
TV9 Web
| Edited By: |

Updated on: Jul 11, 2021 | 8:03 AM

Share

ಬಿಗ್​ ಬಾಸ್​ ಮನೆಯಲ್ಲಿ ತಪ್ಪು ಮಾಡೋದು ಒಬ್ಬರಾದರೂ ಶಿಕ್ಷೆ ಮಾತ್ರ ಎಲ್ಲರಿಗೂ ಸಿಗುತ್ತದೆ. ಇದು ಈ ಮೊದಲು ಅನೇಕ ಬಾರಿ ಆಗಿದೆ. ಈಗ ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಮಾಡಿದ ತಪ್ಪಿಗೆ ಮನೆ ಮಂದಿ ಎಲ್ಲರೂ ಶಿಕ್ಷೆ ಪಡೆದಿದ್ದಾರೆ. ಈ ವಿಚಾರದಲ್ಲಿ ಕೆಲವರು ದಿವ್ಯಾ ಬಗ್ಗೆ ಬೇಸರ ಹೊರ ಹಾಕಿದ್ದಾರೆ.

ಪ್ರತಿ ವಾರ ಓರ್ವ ಸ್ಪರ್ಧಿಯನ್ನು ಬಿಗ್​ ಬಾಸ್​ ಮನೆಯಲ್ಲಿ ಕಳಪೆ ಹಾಗೂ ಅತ್ಯುತ್ತಮ ಎನ್ನುವ ಆಯ್ಕೆ ನೀಡಲಾಗುತ್ತದೆ. ಈ ಬಾರಿ ಪ್ರಶಾಂತ್​ ಅವರನ್ನು ಕಳಪೆ ಎಂದು ಮನೆಯವರು ನಿರ್ಧರಿಸಿದರು. ಅವರು ವಿನಾಕಾರಣ ಜಗಳವಾಡುತ್ತಾರೆ ಎಂಬ ಕಾರಣವನ್ನು ನೀಡಲಾಯಿತು. ಅವರನ್ನು ಮನೆಯವರು ಜೈಲಿಗೂ ಕೂಡ ಕಳುಹಿಸಿದರು.

ಬಿಗ್​ ಬಾಸ್​ ನಿಯಮದ ಪ್ರಕಾರ ಕಳಪೆ ಪಟ್ಟ ಪಡೆದು ಜೈಲಿಗೆ ಹೋದ ಸ್ಪರ್ಧಿ ಅಡುಗೆಗೆ ತರಕಾರಿ ಕತ್ತರಿಸಿಕೊಡಬೇಕು. ಆದರೆ, ದಿವ್ಯಾ ಉರುಡುಗೆ ಇದು ನೆನಪಿಲ್ಲದೆ ತಾವೇ ಕತ್ತರಿಸಿ ಬಿಟ್ಟರು. ಕತ್ತರಿಸಿ ಆದ ನಂತರದಲ್ಲಿ ಈ ಬಗ್ಗೆ ಅವರಿಗೆ ಇದು ಅರಿವಾಗಿದೆ. ಬಿಗ್​ ಬಾಸ್ ನನ್ನ ಕಡೆಯಿಂದ ತಪ್ಪಾಗಿದೆ ಎಂದು ಕ್ಯಾಮೆರಾ ಎದುರು ನಿಂತು ಅವರು ಕೇಳಿಕೊಂಡರು.

ಇದಾದ ಬೆನ್ನಲ್ಲೇ ಬಿಗ್​ ಬಾಸ್ ಮನೆಯಿಂದ ಆದೇಶವೊಂದು ಬಂತು. ಇದನ್ನು ಕೇಳಿ ಬಿಗ್​ ಬಾಸ್​ ಮನೆಯವರು ಶಾಕ್​ಗೆ ಒಳಗಾದರು. ‘ದಿವ್ಯಾ ಕತ್ತರಿಸಿದ ನುಗ್ಗೇಕಾಯಿ, ಆಲೂಗಡ್ಡೆ, ಕ್ಯಾರೆಟ್​ ಜತೆಗೆ ಫ್ರಿಡ್ಜ್​ನಲ್ಲಿರುವ​ ನುಗ್ಗೇಕಾಯಿ, ಆಲೂಗಡ್ಡೆ, ಕ್ಯಾರೆಟ್ ಕೂಡ ಸ್ಟೋರೂಮ್​ಗೆ ಇಡಬೇಕು’ ಎನ್ನುವ ಆದೇಶವನ್ನು ಬಿಗ್ ಬಾಸ್​ ಮಾಡಿದರು. ಈ ಮೂಲಕ ಆ ತರಕಾರಿಗಳನ್ನು ಬಳಸುವುದರಿಂದ ಮನೆಯವರು ವಂಚಿತರಾದರು.

ನಂತರ, ರೆಫ್ರಿಜರೇಟರ್​ನಲ್ಲಿದ್ದ ಬೀನ್ಸ್​, ಟೊಮ್ಯಾಟೋವನ್ನು ಪ್ರಶಾಂತ್​ಗೆ ಕತ್ತರಿಸೋಕೆ ನೀಡಿದರು. ‘ನಾನು ಕತ್ತರಿಸೋದಿಲ್ಲ. ನನ್ನ ಪಾಲಿಂದನ್ನು ನೀವೆ ಕತ್ತರಿಸಿದ್ದೀರಿ’ ಎಂದು ಪ್ರಶಾಂತ್​ ಅವಾಜ್​ ಹಾಕಿದರು. ನಂತರ ಸ್ವಲ್ಪ ಸತಾಯಿಸಿ ತರಕಾರಿ ಕತ್ತರಿಸಿದರು.

ಇದನ್ನೂ ಓದಿ: Divya Uruduga: ಕನ್ನಡ ಬಿಗ್​ ಬಾಸ್​ ಸೀಸನ್​ 8ರಲ್ಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ

ಅರವಿಂದ್ ಗೆಲ್ಲಿಸೋಕೆ ಚಕ್ರವರ್ತಿಗೆ ಅನ್ಯಾಯ ಮಾಡಿದ್ರಾ ದಿವ್ಯಾ ಉರುಡುಗ? ಬಿಗ್​ ಬಾಸ್​ ಮನೆಯಲ್ಲಿ ಹೀಗೊಂದು ಪ್ರಶ್ನೆ

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ