AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿದ್ದಾರೆ ಸಂಬಂಧಿಕರು; ಯಾರ್ಯಾರು ಗೊತ್ತಾ?

ಈ ವಿಚಾರ ಕೇಳಿದ ಮನೆಯ ಅನೇಕ ಸದಸ್ಯರು ಅಚ್ಚರಿ ಹೊರ ಹಾಕಿದರು. ಅಷ್ಟೇ ಅಲ್ಲ, ವೀಕ್ಷಕರ ಪಾಲಿಗೂ ಇದು ಹೊಸ ವಿಷಯವೇ.

ಬಿಗ್ ಬಾಸ್ ಮನೆಯಲ್ಲಿದ್ದಾರೆ ಸಂಬಂಧಿಕರು; ಯಾರ್ಯಾರು ಗೊತ್ತಾ?
ಬಿಗ್​ ಬಾಸ್​ ಕನ್ನಡ
TV9 Web
| Edited By: |

Updated on: Jun 26, 2021 | 4:55 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 8’ ಎರಡನೇ ಇನ್ನಿಂಗ್ಸ್ ಆರಂಭವಾಗಿದೆ. ಕೊವಿಡ್​ನಿಂದ ಅರ್ಧಕ್ಕೆ ನಿಂತಿದ್ದ ದೊಡ್ಮನೆ ಶೋ ಮತ್ತೆ ಶುರುವಾಗಿರೋದು ಪ್ರೇಕ್ಷಕರಿಗೆ ಖುಷಿ ನೀಡಿದೆ. ಎಲ್ಲಾ ಸ್ಪರ್ಧಿಗಳು ಹೊಸ ಲೆಕ್ಕಾಚಾರದೊಂದಿಗೆ ಮನೆ ಸೇರಿದ್ದಾರೆ. ಈ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಸಂಬಂಧಿಕರು ಇರುವ ವಿಚಾರ ಬಯಲಾಗಿದೆ.

ಶಮಂತ್ ಬ್ರೋ ಗೌಡ ಹಾಗೂ ಪ್ರಶಾಂತ್ ಸಂಬರಗಿ ರಿಲೇಟಿವ್ಸ್. ಈ ವಿಚಾರವನ್ನು ಪ್ರಶಾಂತ್ ಹೇಳಿಕೊಂಡಿದ್ದಾರೆ. ಬಿಗ್ ಬಾಸ್​ ಮೊದಲ ಇನ್ನಿಂಗ್ಸ್​ ಆರಂಭವಾದಾಗ ಪ್ರಶಾಂತ್ ಪರ ಇದ್ದವರು ಕೆಲವೇ ಕೆಲವು ಮಂದಿ. ಡಲ್ ಆಗಿದ್ದ ಶಮಂತ್​ಗೆ ಹೊಸ ಹುರುಪು ತುಂಬುವ ಮೂಲಕ ಅವರನ್ನು ಪ್ರಶಾಂತ್ ತಮ್ಮೆಡೆ ಸೆಳೆದುಕೊಂಡಿದ್ದರು. ಮೊದಲ ಇನ್ನಿಂಗ್ಸ್ ಕೊನೆ ಕೊನೆಯಲ್ಲಿ ಪ್ರಶಾಂತ್ ಪರ ನಿಲ್ಲುವ ಕೆಲಸವನ್ನು ಶಮಂತ್​ ಮಾಡಿದ್ದರು. ಅಚ್ಚರಿ ಎಂಬಂತೆ ಬಿಗ್ ಬಾಸ್ ಮನೆಯಿಂದ ಹೊರ ಬಂದ ನಂತರದಲ್ಲಿ ಇವರಿಗೆ ತಾವು ನೆಂಟರು ಎನ್ನುವ ವಿಚಾರ ಗೊತ್ತಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಕೂರ್ಚಿ ಪಾಲಿಟಿಕ್ಸ್ ಟಾಸ್ಕ್ ನೀಡಲಾಗಿದೆ. ಈ ಟಾಸ್ಕ್​ನ ನಿಯಮದ ಪ್ರಕಾರ ಮನೆಯಲ್ಲಿರುವ ಎರಡು ತಂಡಗಳ ಸದಸ್ಯರು ಚೇರ್ ಮೇಲೆ ಕೂರಬೇಕು. ಎರಡೂ ತಂಡದ ತಲಾ ಮೂರು ಸದಸ್ಯರು ಕೂತಿದ್ದಾರೆ. ಶಮಂತ್-ಪ್ರಶಾಂತ್ ಅಕ್ಕಪಕ್ಕದಲ್ಲೇ ಕುಳಿತಿದ್ದಾರೆ.

ಈ ವೇಳೆ ಏನೋ ಚರ್ಚೆ ಬಂದಾಗ, ‘ಸಂಬಂಧಿಕರು ಅನ್ನೋದೆಲ್ಲ ಬಿಗ್ ಬಾಸ್ ಮನೆಯ ಹೊರಗೆ’ ಎಂದು ಪ್ರಶಾಂತ್​ಗೆ ಶಮಂತ್​ ಹೇಳಿದರು. ಆಗ ಮಂಜು ಪಾವಗಡ, ಯಾರು ರಿಲೇಟಿವ್ಸ್ ಎಂದು ಪ್ರಶ್ನೆ ಮಾಡಿದರು. ಅಲ್ಲೇ ಇದ್ದ ಚಕ್ರವರ್ತಿ ಚಂದ್ರಚೂಡ್, ‘ಅವರಿಬ್ಬರೂ ರಿಲೇಟಿವ್ಸ್. ಬ್ರೋ ಗೌಡ ದಾವಣಗೆರೆಯವನು. ಇವರು ನೆಂಟಸ್ತನ ಬೆಳೆಸಿದ್ದಲ್ಲ. ಅದಾಗಿಯೇ ಬೆಳೆದುಬಿಟ್ಟಿದೆ’ ಎಂದು ವಿವರಣೆ ನೀಡಿದರು. ಈ ವಿಚಾರದ ಬಗ್ಗೆ ಮಾತನಾಡಿದ ಪ್ರಶಾಂತ್, ‘ಒಂದೇ ಬೀಗರ ಕಡೆಯಿಂದ ಗಂಡು-ಹೆಣ್ಣು ಪಡೆದುಕೊಳ್ಳಲಾಗಿದೆ ಅಷ್ಟೇ’ ಎಂದು ಹೇಳುವ ಮೂಲಕ ತಾವಿಬ್ಬರೂ ನೆಂಟರು ಎಂಬುದನ್ನು ಒಪ್ಪಿಕೊಂಡರು.

ಈ ವಿಚಾರ ಕೇಳಿದ ಮನೆಯ ಅನೇಕ ಸದಸ್ಯರು ಅಚ್ಚರಿ ಹೊರ ಹಾಕಿದರು. ಅಷ್ಟೇ ಅಲ್ಲ, ವೀಕ್ಷಕರ ಪಾಲಿಗೂ ಇದು ಹೊಸ ವಿಷಯವೇ.

ಇದನ್ನೂ ಓದಿ:

ವಾರ್ನಿಂಗ್​ ನಂತರವೂ ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡ 11 ಸ್ಪರ್ಧಿಗಳು; ಕಾದಿದೆಯಾ ದೊಡ್ಡ ಶಿಕ್ಷೆ?

ಕನ್ನಡ ಬಿಗ್​ ಬಾಸ್​ ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮೊದಲು ಎಲಿಮಿನೇಟ್​ ಆಗೋರು ಇವರೇನಾ?

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ