AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿದ್ದಾರೆ ಸಂಬಂಧಿಕರು; ಯಾರ್ಯಾರು ಗೊತ್ತಾ?

ಈ ವಿಚಾರ ಕೇಳಿದ ಮನೆಯ ಅನೇಕ ಸದಸ್ಯರು ಅಚ್ಚರಿ ಹೊರ ಹಾಕಿದರು. ಅಷ್ಟೇ ಅಲ್ಲ, ವೀಕ್ಷಕರ ಪಾಲಿಗೂ ಇದು ಹೊಸ ವಿಷಯವೇ.

ಬಿಗ್ ಬಾಸ್ ಮನೆಯಲ್ಲಿದ್ದಾರೆ ಸಂಬಂಧಿಕರು; ಯಾರ್ಯಾರು ಗೊತ್ತಾ?
ಬಿಗ್​ ಬಾಸ್​ ಕನ್ನಡ
TV9 Web
| Edited By: |

Updated on: Jun 26, 2021 | 4:55 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 8’ ಎರಡನೇ ಇನ್ನಿಂಗ್ಸ್ ಆರಂಭವಾಗಿದೆ. ಕೊವಿಡ್​ನಿಂದ ಅರ್ಧಕ್ಕೆ ನಿಂತಿದ್ದ ದೊಡ್ಮನೆ ಶೋ ಮತ್ತೆ ಶುರುವಾಗಿರೋದು ಪ್ರೇಕ್ಷಕರಿಗೆ ಖುಷಿ ನೀಡಿದೆ. ಎಲ್ಲಾ ಸ್ಪರ್ಧಿಗಳು ಹೊಸ ಲೆಕ್ಕಾಚಾರದೊಂದಿಗೆ ಮನೆ ಸೇರಿದ್ದಾರೆ. ಈ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಸಂಬಂಧಿಕರು ಇರುವ ವಿಚಾರ ಬಯಲಾಗಿದೆ.

ಶಮಂತ್ ಬ್ರೋ ಗೌಡ ಹಾಗೂ ಪ್ರಶಾಂತ್ ಸಂಬರಗಿ ರಿಲೇಟಿವ್ಸ್. ಈ ವಿಚಾರವನ್ನು ಪ್ರಶಾಂತ್ ಹೇಳಿಕೊಂಡಿದ್ದಾರೆ. ಬಿಗ್ ಬಾಸ್​ ಮೊದಲ ಇನ್ನಿಂಗ್ಸ್​ ಆರಂಭವಾದಾಗ ಪ್ರಶಾಂತ್ ಪರ ಇದ್ದವರು ಕೆಲವೇ ಕೆಲವು ಮಂದಿ. ಡಲ್ ಆಗಿದ್ದ ಶಮಂತ್​ಗೆ ಹೊಸ ಹುರುಪು ತುಂಬುವ ಮೂಲಕ ಅವರನ್ನು ಪ್ರಶಾಂತ್ ತಮ್ಮೆಡೆ ಸೆಳೆದುಕೊಂಡಿದ್ದರು. ಮೊದಲ ಇನ್ನಿಂಗ್ಸ್ ಕೊನೆ ಕೊನೆಯಲ್ಲಿ ಪ್ರಶಾಂತ್ ಪರ ನಿಲ್ಲುವ ಕೆಲಸವನ್ನು ಶಮಂತ್​ ಮಾಡಿದ್ದರು. ಅಚ್ಚರಿ ಎಂಬಂತೆ ಬಿಗ್ ಬಾಸ್ ಮನೆಯಿಂದ ಹೊರ ಬಂದ ನಂತರದಲ್ಲಿ ಇವರಿಗೆ ತಾವು ನೆಂಟರು ಎನ್ನುವ ವಿಚಾರ ಗೊತ್ತಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಕೂರ್ಚಿ ಪಾಲಿಟಿಕ್ಸ್ ಟಾಸ್ಕ್ ನೀಡಲಾಗಿದೆ. ಈ ಟಾಸ್ಕ್​ನ ನಿಯಮದ ಪ್ರಕಾರ ಮನೆಯಲ್ಲಿರುವ ಎರಡು ತಂಡಗಳ ಸದಸ್ಯರು ಚೇರ್ ಮೇಲೆ ಕೂರಬೇಕು. ಎರಡೂ ತಂಡದ ತಲಾ ಮೂರು ಸದಸ್ಯರು ಕೂತಿದ್ದಾರೆ. ಶಮಂತ್-ಪ್ರಶಾಂತ್ ಅಕ್ಕಪಕ್ಕದಲ್ಲೇ ಕುಳಿತಿದ್ದಾರೆ.

ಈ ವೇಳೆ ಏನೋ ಚರ್ಚೆ ಬಂದಾಗ, ‘ಸಂಬಂಧಿಕರು ಅನ್ನೋದೆಲ್ಲ ಬಿಗ್ ಬಾಸ್ ಮನೆಯ ಹೊರಗೆ’ ಎಂದು ಪ್ರಶಾಂತ್​ಗೆ ಶಮಂತ್​ ಹೇಳಿದರು. ಆಗ ಮಂಜು ಪಾವಗಡ, ಯಾರು ರಿಲೇಟಿವ್ಸ್ ಎಂದು ಪ್ರಶ್ನೆ ಮಾಡಿದರು. ಅಲ್ಲೇ ಇದ್ದ ಚಕ್ರವರ್ತಿ ಚಂದ್ರಚೂಡ್, ‘ಅವರಿಬ್ಬರೂ ರಿಲೇಟಿವ್ಸ್. ಬ್ರೋ ಗೌಡ ದಾವಣಗೆರೆಯವನು. ಇವರು ನೆಂಟಸ್ತನ ಬೆಳೆಸಿದ್ದಲ್ಲ. ಅದಾಗಿಯೇ ಬೆಳೆದುಬಿಟ್ಟಿದೆ’ ಎಂದು ವಿವರಣೆ ನೀಡಿದರು. ಈ ವಿಚಾರದ ಬಗ್ಗೆ ಮಾತನಾಡಿದ ಪ್ರಶಾಂತ್, ‘ಒಂದೇ ಬೀಗರ ಕಡೆಯಿಂದ ಗಂಡು-ಹೆಣ್ಣು ಪಡೆದುಕೊಳ್ಳಲಾಗಿದೆ ಅಷ್ಟೇ’ ಎಂದು ಹೇಳುವ ಮೂಲಕ ತಾವಿಬ್ಬರೂ ನೆಂಟರು ಎಂಬುದನ್ನು ಒಪ್ಪಿಕೊಂಡರು.

ಈ ವಿಚಾರ ಕೇಳಿದ ಮನೆಯ ಅನೇಕ ಸದಸ್ಯರು ಅಚ್ಚರಿ ಹೊರ ಹಾಕಿದರು. ಅಷ್ಟೇ ಅಲ್ಲ, ವೀಕ್ಷಕರ ಪಾಲಿಗೂ ಇದು ಹೊಸ ವಿಷಯವೇ.

ಇದನ್ನೂ ಓದಿ:

ವಾರ್ನಿಂಗ್​ ನಂತರವೂ ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡ 11 ಸ್ಪರ್ಧಿಗಳು; ಕಾದಿದೆಯಾ ದೊಡ್ಡ ಶಿಕ್ಷೆ?

ಕನ್ನಡ ಬಿಗ್​ ಬಾಸ್​ ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮೊದಲು ಎಲಿಮಿನೇಟ್​ ಆಗೋರು ಇವರೇನಾ?

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ