AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಷ್ಟು ಸುಂದರವಾಗಿರುವ ನಾನು ನಿನ್ನ ಹಿಂದೆ ಯಾಕೆ ಬಿದ್ದೆ? ಮಂಜು ಬಗ್ಗೆ ದಿವ್ಯಾ ಮನದಲ್ಲಿ ಹೊಸ ಪ್ರಶ್ನೆ!

Bigg Boss Kannada: ನೋಡೋಕೆ ಇಷ್ಟು ಚೆನ್ನಾಗಿರುವ ಹುಡುಗಿಯ ಹಿಂದೆ ಹುಡುಗ ಬರಬೇಕು. ಆದರೆ ನಾನು ಯಾಕೆ ಹೀಗೆ ಆಗಿದ್ದೇನೆ ಎಂದು ದಿವ್ಯಾ ಸುರೇಶ್​ ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದಾರೆ.

ಇಷ್ಟು ಸುಂದರವಾಗಿರುವ ನಾನು ನಿನ್ನ ಹಿಂದೆ ಯಾಕೆ ಬಿದ್ದೆ? ಮಂಜು ಬಗ್ಗೆ ದಿವ್ಯಾ ಮನದಲ್ಲಿ ಹೊಸ ಪ್ರಶ್ನೆ!
ದಿವ್ಯಾ ಸುರೇಶ್​ - ಮಂಜು ಪಾವಗಡ
ಮದನ್​ ಕುಮಾರ್​
| Edited By: |

Updated on: Apr 10, 2021 | 6:39 PM

Share

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಸುರೇಶ್​ ಮತ್ತು ಮಂಜು ಪಾವಗಡ ಅವರ ಲವ್​ ಟ್ರ್ಯಾಕ್​ ಎಲ್ಲೆಲ್ಲಿಗೋ ಹೋಗುತ್ತಿದೆ. ಸದಾ ಕಾಲ ಮಂಜ ಮಂಜ ಎಂದು ದಿವ್ಯಾ ಜಪ ಮಾಡುತ್ತಾರೆ. ಇಬ್ಬರೂ ಜೊತೆಯಾಗಿಯೇ ಹೆಚ್ಚು ಕಾಲ ಕಳೆಯುತ್ತಾರೆ. ನೋಡುವವರ ಕಣ್ಣು ಕುಕ್ಕುವ ರೀತಿಯಲ್ಲಿ ಈ ಜೋಡಿ ನಡೆದುಕೊಳ್ಳುತ್ತದೆ. ಒಟ್ಟಾರೆ ಇವರಿಬ್ಬರ ಕುರಿತು ಸದಾ ಒಂದಿಲ್ಲೊಂದು ಚರ್ಚೆ ನಡೆಯುವಂತಾಗಿದೆ. ವೀಕೆಂಡ್​ನಲ್ಲಿ ಸುದೀಪ್​ ಕೂಡ ಈ ವಿಚಾರ ಮಾತನಾಡಿದ್ದರು. ಈಗ ವೈಲ್ಡ್​ ಕಾರ್ಡ್​ ಎಂಟ್ರಿ ಪಡೆದ ಪ್ರಿಯಾಂಕಾ ತಿಮ್ಮೇಶ್​ ಕೂಡ ಮಂಜು-ದಿವ್ಯಾ ಲವ್​ಸ್ಟೋರಿಯನ್ನೇ ಒತ್ತಿ ಹೇಳಿದ್ದಾರೆ.

ನೀವು ಯಾವಾಗಲೂ ಮಂಜು ಪಾವಗಡ ಜೊತೆಗೆ ಕಾಲ ಕಳೆಯುತ್ತೀರಿ ಎಂದು ದಿವ್ಯಾಗೆ ನೇರವಾಗಿ ಹೇಳಿದ್ದಾರೆ ಪ್ರಿಯಾಂಕಾ. ಅದರಲ್ಲಿ ತಪ್ಪೇನಿದೆ? ಬೇರೆ ಸ್ಪರ್ಧಿಗಳೂ ಜೊತೆಯಾಗಿ ಇರುತ್ತಾರಲ್ಲ? ನಮ್ಮಿಬ್ಬರದ್ದು ಮಾತ್ರ ಯಾಕೆ ಹೈಲೈಟ್​ ಆಗುತ್ತಿದೆ ಎಂದು ದಿವ್ಯಾ ಮರುಪ್ರಶ್ನೆ ಹಾಕಿದ್ದಾರೆ. ಆಗ ದಿವ್ಯಾಗೆ ಅರ್ಥ ಮಾಡಿಸುವ ಸಲುವಾಗಿ ಪ್ರಿಯಾಂಕಾ ಎಲ್ಲವನ್ನೂ ಬಿಡಿಸಿ ಹೇಳಿದ್ದಾರೆ.

‘ಬೇರೆ ಸ್ಪರ್ಧಿಗಳು ಜೊತೆಗಿರುತ್ತಾರೆ ನಿಜ. ಆದರೆ ನೀವಿಬ್ಬರು ಮೂಲೆಗೆ ಹೋಗಿ ಪ್ರತ್ಯೇಕವಾಗಿ ಮಾತನಾಡುತ್ತಾ ಇರುತ್ತೀರಿ. ಇಷ್ಟು ದಿನ ದಿವ್ಯಾ ಮಂಜನ ಬಾಲ ಎಂಬ ಮಾತು ಬಂದಿದೆಯೇ ಹೊರತು, ಮಂಜು ದಿವ್ಯಾಳ ಬಾಲ ಅಂತ ಯಾರೂ ಹೇಳಿಲ್ಲ. ಇಷ್ಟು ಸುಂದರವಾಗಿರುವ ನಿಮ್ಮ ಹಿಂದೆ ಅವರು ಬರಬೇಕಿತ್ತು. ಆದರೆ ಇಲ್ಲಿ ಬೇರೆ ರೀತಿ ಆಗಿದೆ’ ಎಂದು ದಿವ್ಯಾ ಸುರೇಶ್​ ತಲೆಗೆ ಪ್ರಿಯಾಂಕಾ ಹುಳ ಬಿಟ್ಟಿದ್ದಾರೆ. ಇದರ ಬಗ್ಗೆ ದಿವ್ಯಾ ಸಿಕ್ಕಾಪಟ್ಟೆ ತಲೆ ಕೆಡಿಸಿಕೊಂಡಿದ್ದಾರೆ.

ಪ್ರಿಯಾಂಕಾ ತಿಮ್ಮೇಶ್​ ಹೇಳಿದ ಈ ಮಾತನ್ನು ತಮ್ಮಲ್ಲಿಯೇ ಇಟ್ಟುಕೊಂಡು ಸುಮ್ಮನಾಗುವ ಬದಲು ಮಂಜು ಬಳಿ ಹೋಗಿ ದಿವ್ಯಾ ಚರ್ಚೆ ಮಾಡಿದ್ದಾರೆ. ತಮಗೆ ಯಾಕೆ ಹೀಗೆ ಆಗುತ್ತಿದೆ ಅಂತ ಮಂಜು ಬಳಿ ಗೋಳು ತೋಡಿಕೊಂಡಿದ್ದಾರೆ. ‘ಪ್ರಿಯಾಂಕಾ ಹೇಳಿದ್ದು ನನಗೆ ಸರಿ ಎನಿಸಿತು. ಅವರ ಮಾತಿನಿಂದ ಖುಷಿ ಆಯಿತು. ಎಲ್ಲ ಸಾಮರ್ಥ್ಯ ಇದ್ದರೂ ಕೂಡ ನಾನು ಕೆಳಗೆ ಹೋಗುತ್ತಿದ್ದೇನೆ. ನೋಡೋಕೆ ಇಷ್ಟು ಚೆನ್ನಾಗಿರುವ ಹುಡುಗಿಯ ಹಿಂದೆ ಹುಡುಗ ಬರಬೇಕು. ಆದರೆ ನಾನು ಯಾಕೆ ಹೀಗೆ ಆಗಿದ್ದೇನೆ ಅಂತ ನನಗೆ ಆಲೋಚನೆ ಮೂಡಿತು’ ಎಂದು ದಿವ್ಯಾ ಹೇಳಿದ್ದಾರೆ.

ಇದನ್ನೆಲ್ಲ ಕೇಳಿಸಿಕೊಂಡು ಮಂಜು ಸುಮ್ಮನಾಗಿದ್ದಾರೆ. ಬೇರೆ ಎಲ್ಲ ವಿಚಾರದ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದರೇ ಹೊರತು, ‘ಇಷ್ಟು ಚೆನ್ನಾಗಿರುವ ನಾನು ನಿನ್ನ ಹಿಂದೆ ಯಾಕೆ ಬಿದ್ದೆ’ ಎಂದು ದಿವ್ಯಾ ಹೇಳಿದ ಮಾತಿಗೆ ಮಂಜು ಉತ್ತರ ನೀಡಿಲ್ಲ. ದಿವ್ಯಾ ನೇರವಾಗಿ ಇಂಥ ಮಾತು ಹೇಳಿದ ಮೇಲೆ ಮಂಜು ಭಾವನೆಗಳು ಬದಲಾಗುವ ಸಾಧ್ಯತೆ ಹೆಚ್ಚಿದೆ. ಪ್ರೀತಿ-ಪ್ರೇಮವನ್ನೆಲ್ಲ ಬದಿಗಿಟ್ಟು ಅವರು ಇನ್ಮುಂದೆ ಬರೀ ಆಟದ ಕಡೆಗೆ ಗಮನ ಹರಿಸಿದರೆ ಅಚ್ಚರಿ ಏನಿಲ್ಲ.

ಇದನ್ನೂ ಓದಿ: ಬಿಗ್​ ಬಾಸ್​ ಸ್ಪರ್ಧಿಯ ಲಿಪ್​ಲಾಕ್​ ವಿಡಿಯೋ ವೈರಲ್! ಪೂರ್ತಿ ಎಪಿಸೋಡ್​ ಪ್ರಸಾರ ಯಾವಾಗ?

ಲೈಟ್​ ಆಫ್​ ಆದಾಗ ಅರವಿಂದ್​-ದಿವ್ಯಾ ಕಣ್​ ಕಣ್ಣ ಸಲಿಗೆ! ಕದ್ದು ನೋಡಿದ ಶಮಂತ್​-ರಘು

(Bigg Boss Kannada 8: Divya Suresh becomes introspective about her relationship with Manju Pavagada in BBK8)

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ