AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ್​ಗೆ ಪ್ರೀತಿಯ ರಿಂಗ್​ ತೊಡಿಸಿದ ದಿವ್ಯಾ! ಮರುಕ್ಷಣವೇ ಇಬ್ಬರ ಲವ್​ನಲ್ಲಿ ಸುನಾಮಿ

Bigg Boss Kannada: ‘ಅರವಿಂದ್​ ಜೀವನಪರ್ಯಂತ ನನ್ನ ಜೊತೆಗೆ ಇರಬೇಕು. ಅವನು ನನಗೆ ನಿಜಕ್ಕೂ ಸ್ಪೆಷಲ್​. ನಮ್ಮ ಅಪ್ಪಾಜಿ ಕೊಟ್ಟಿರುವ ರಿಂಗ್​ ಅನ್ನು ನಾನು ಅರವಿಂದ್​ಗೆ ನೀಡುತ್ತೇನೆ’ ಎಂದು ದಿವ್ಯಾ ಉರುಡುಗ ಹೇಳಿದ್ದಾರೆ!

ಅರವಿಂದ್​ಗೆ ಪ್ರೀತಿಯ ರಿಂಗ್​ ತೊಡಿಸಿದ ದಿವ್ಯಾ! ಮರುಕ್ಷಣವೇ ಇಬ್ಬರ ಲವ್​ನಲ್ಲಿ ಸುನಾಮಿ
ದಿವ್ಯಾ ಉರುಡುಗ - ಅರವಿಂದ್​ ಕೆ.ಪಿ.
ಮದನ್​ ಕುಮಾರ್​
|

Updated on: Apr 12, 2021 | 1:18 PM

Share

ಬಿಗ್​ ಬಾಸ್​ನಲ್ಲಿ ದಿವ್ಯಾ ಉರುಡುಗ ಮತ್ತು ಅರವಿಂದ್​ ಕೆ.ಪಿ. ನಡುವೆ ಏನು ನಡೆಯುತ್ತಿದೆ ಎಂಬುದನ್ನು ಹೊಸದಾಗಿ ಹೇಳಬೇಕಾದ್ದಿಲ್ಲ. ದಿನದಿಂದ ದಿನಕ್ಕೆ ಅವರಿಬ್ಬರ ಪ್ರೀತಿ ಒಂದೊಂದು ಹಂತ ಮೇಲೇರುತ್ತಿದೆ. ಅವರ ನಡುವಿನ ಸ್ನೇಹ-ಪ್ರೀತಿ ಕಂಡು ಮನೆಯ ಸದಸ್ಯರು ಅಚ್ಚರಿಪಡುತ್ತಿದ್ದಾರೆ. ಬಿಗ್​ ಬಾಸ್​ನಿಂದ ಹೊರಬಂದ ಬಳಿಕ ಅವರಿಬ್ಬರು ಮದುವೆ ಆದರೂ ಅಚ್ಚರಿ ಏನಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಮಾತಿಗೆ ಇನ್ನಷ್ಟು ಪುಷ್ಠಿ ನೀಡುವಂತಹ ಘಟನೆ ನಡೆದಿದೆ. ಅರವಿಂದ್​ಗೆ ದಿವ್ಯಾ ಪ್ರೀತಿಯ ರಿಂಗ್​ ತೊಡಿಸಿದ್ದಾರೆ!

ಮನೆಯ ಸದಸ್ಯರಿಗೆ ಬಿಗ್​ ಬಾಸ್​ ಒಂದು ಚಟುವಟಿಕೆ ನೀಡಿದ್ದಾರೆ. ತಮ್ಮ ಮನಸ್ಸು ಗೆದ್ದ ಹುಡುಗಿಗೆ ಹುಡುಗರು ಹಾರ್ಟ್​ ಶೇಪ್​ನ ಬಲೂನ್​ ನೀಡಬೇಕು. ಹುಡುಗರಿಗೆ ಹುಡುಗಿಯರು ತಮ್ಮಿಷ್ಟದ ಒಂದು ವಸ್ತುವನ್ನು ನೀಡಬೇಕು. ಈ ವೇಳೆ ಅರವಿಂದ್​ ಕೆ.ಪಿ. ಮತ್ತು ದಿವ್ಯಾ ಉರುಡುಗ ನಡುವಿನ ಪ್ರೀತಿಯ ತೀವ್ರತೆ ಜಗಜ್ಜಾಹೀರಾಗಿದೆ. ‘ನಾನು ಜಾಸ್ತಿ ಮಾತನಾಡುವುದಿಲ್ಲ. ಮಾತು ಇಲ್ಲದೆಯೂ ಅವಳಿಗೆ ಅರ್ಥವಾಗುತ್ತದೆ’ ಎಂದು ದಿವ್ಯಾ ಬಗ್ಗೆ ಅರವಿಂದ್​ ಹೇಳಿದ್ದಾರೆ.

‘ಅರವಿಂದ್​ ಜೀವನಪರ್ಯಂತ ನನ್ನ ಜೊತೆಗೆ ಇರಬೇಕು. ಅವನು ನನಗೆ ನಿಜಕ್ಕೂ ಸ್ಪೆಷಲ್​. ನಮ್ಮ ಅಪ್ಪಾಜಿ ಕೊಟ್ಟಿರುವ ರಿಂಗ್​ ಅನ್ನು ನಾನು ಅರವಿಂದ್​ಗೆ ನೀಡುತ್ತೇನೆ’ ಎಂದು ದಿವ್ಯಾ ಹೇಳಿದಾಗ ಅರವಿಂದ್​ ಕಣ್ಣಲ್ಲಿ ಆನಂದಬಾಷ್ಪ ಸುರಿದಿದೆ. ಎಲ್ಲರ ಸಮ್ಮುಖದಲ್ಲಿ ಅವರಿಗೆ ದಿವ್ಯಾ ರಿಂಗ್​ ತೊಡಿಸಿದ್ದಾರೆ. ಇಬ್ಬರ ಪ್ರೀತಿ ಕಂಡು ಮನೆಯ ಸದಸ್ಯರೆಲ್ಲ ಚಪ್ಪಾಳೆ ತಟ್ಟಿದ್ದಾರೆ. ಆದರೆ ರಿಂಗ್​ ಪಡೆದುಕೊಂಡ ಕೆಲವೇ ಕ್ಷಣಗಳಲ್ಲಿ ಅಚಾತುರ್ಯ ನಡೆದುಹೋಗಿದೆ!

ಅರವಿಂದ್ ಮೇಲಿನ ಪ್ರೀತಿಗಾಗಿ ದಿವ್ಯಾ ಉರುಡುಗ ಆ ಉಂಗುರ ನೀಡಿದ್ದರು. ಆದರೆ ಕೆಲವೇ ಕ್ಷಣಗಳಲ್ಲಿ ಆ ಉಂಗುರುವನ್ನು ಅರವಿಂದ್​ ಕಳೆದುಕೊಂಡಿದ್ದಾರೆ! ಅಷ್ಟು ಪ್ರೀತಿಯಿಂದ ನೀಡಿದ ಉಂಗುರು ಈಗ ಕಳೆದುಹೋಗಿದೆ ಎಂಬ ವಿಷಯ ದಿವ್ಯಾಗೆ ಗೊತ್ತಾದರೆ ಆಘಾತ ಆಗುವುದು ಗ್ಯಾರಂಟಿ. ಹಾಗಾಗಿ ಈ ವಿಷಯವನ್ನು ಮುಚ್ಚಿಟ್ಟು, ಉಂಗುರು ಹುಡುಕುವ ಕಾಯಕದಲ್ಲಿ ಅರವಿಂದ್​ ತೊಡಗಿಕೊಂಡಿದ್ದಾರೆ. ಅವರಿಗೆ ಇಡೀ ಮನೆಯ ಸದಸ್ಯರು ಸಾಥ್​ ನೀಡುತ್ತಿದ್ದಾರೆ.

ಬಿರು ಬಿಸಿಲನ್ನೂ ಲೆಕ್ಕಿಸದೇ ಪೂರ್ತಿ ಮನೆಯನ್ನು ಗುಡಿಸಲಾಗುತ್ತಿದೆ. ಎಲ್ಲರೂ ಯಾಕೆ ಹೀಗೆ ಮಾಡುತ್ತಿದ್ದಾರೆ ಎಂಬುದು ದಿವ್ಯಾಗೆ ಗೊತ್ತಾಗಿಲ್ಲ. ಎಷ್ಟೇ ಹುಡುಕಿದರೂ ಉಂಗುರು ಸಿಗುವುದು ಅನುಮಾನವಾಗಿದೆ. ಸತ್ಯವನ್ನು ದಿವ್ಯಾಗೆ ಹೇಳಿಬಿಡುತ್ತೇನೆ ಎಂದು ಅರವಿಂದ್​ ನಿರ್ಧಾರ ಮಾಡಿಕೊಂಡಿದ್ದಾರೆ. ಕಲರ್ಸ್​ ಕನ್ನಡ ವಾಹಿನಿ ಬಿಡುಗಡೆ ಮಾಡಿರುವ ಪ್ರೋಮೋನಲ್ಲಿ ಈ ಎಲ್ಲ ವಿಚಾರಗಳು ಗೊತ್ತಾಗಿವೆ. ಮುಂದೇನಾಯಿತು ಎಂಬುದನ್ನು ತಿಳಿದುಕೊಳ್ಳಲು ಪ್ರೇಕ್ಷಕರು ಕಾಯುತ್ತಿದ್ದಾರೆ. ಏ.12ರ ಎಪಿಸೋಡ್​ನಲ್ಲಿ ಈ ಎಲ್ಲ ಘಟನೆಗಳು ಪ್ರಸಾರ ಆಗಲಿವೆ.

ಇದನ್ನೂ ಓದಿ: ಯಾವ ಬಾಯಲ್ಲಿ ಅಕ್ಕ ಅಂತೀಯಾ? ಅದೇ ಬಾಯಲ್ಲಿ ಏನೇನೋ ಹೇಳಿದ್ದೀಯ! ಶಮಂತ್​ಗೆ ದಿವ್ಯಾ ಪಂಚ್​!

ದಿವ್ಯಾ ಉರುಡುಗ-ಅರವಿಂದ್​ ಪ್ರೀತಿಯ ಉತ್ಕಟತೆ ನೋಡಿ ಮನೆಯವರೇ ಕಂಗಾಲು; ಅಂಥದ್ದೇನಾಯ್ತು?

(Bigg Boss Kannada 8 : Divya Uruduga gives her favourite ring to Aravind KP in BBK8 )

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ