AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8 Elimination: ಬಿಗ್​ ಬಾಸ್​ ಮನೆಯಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್​

ಎಲಿಮಿನೆಷನ್​ಗೆ ನಾಮಿನೇಟ್​ ಮಾಡಲು ಪ್ರತಿ ಬಾರಿ ಸ್ಪರ್ಧಿಗಳಿಗೆ ಅವಕಾಶ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಈ ಅವಕಾಶವನ್ನು ಬಿಗ್​ ಬಾಸ್​ ಕಿತ್ತುಕೊಂಡಿದ್ದರು.

BBK8 Elimination: ಬಿಗ್​ ಬಾಸ್​ ಮನೆಯಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್​
ಚಂದ್ರಕಲಾ ಮೋಹನ್​
ರಾಜೇಶ್ ದುಗ್ಗುಮನೆ
|

Updated on: Mar 28, 2021 | 10:10 PM

Share

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕನೇ ವಾರದ ಎಲಿಮಿನೇಷನ್​ ಪೂರ್ಣಗೊಂಡಿದೆ. ಮನೆಯಲ್ಲಿರುವ 14 ಸದಸ್ಯರ ಪೈಕಿ 13 ಜನ ಎಲಿಮಿನೇಷ ಆಗಿದ್ದರು. ಈ ಪೈಕಿ ಚಂದ್ರಕಲಾ ಮೋಹನ್ ಎಲಿಮಿನೇಟ್​ ಆಗಿದ್ದಾರೆ. ಈ ಮೂಲಕ ನಾಲ್ಕನೇ ಸ್ಪರ್ಧಿಯಾಗಿ ಅವರು ಬಿಗ್​ ಬಾಸ್​ ಮನೆಯಿಂದ ಹೊರ ನಡೆದಿದ್ದಾರೆ. 

ಎಲಿಮಿನೆಷನ್​ಗೆ ನಾಮಿನೇಟ್​ ಮಾಡಲು ಪ್ರತಿ ಬಾರಿ ಸ್ಪರ್ಧಿಗಳಿಗೆ ಅವಕಾಶ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಈ ಅವಕಾಶವನ್ನು ಬಿಗ್​ ಬಾಸ್​ ಕಿತ್ತುಕೊಂಡಿದ್ದರು. ಕ್ಯಾಪ್ಟನ್​ ಆಗಿದ್ದ ಅರವಿಂದ್ ಕೆ.ಪಿ. ಅವರನ್ನು ಹೊರತುಪಡಿಸಿ ಉಳಿದ 13 ಸ್ಪರ್ಧಿಗಳು ನೇರವಾಗಿ ನಾಮಿನೇಟ್​ ಆಗಿದ್ದರು. ನಿಧಿ ಸುಬ್ಬಯ್ಯ, ದಿವ್ಯಾ ಸುರೇಶ್​, ದಿವ್ಯಾ ಉರುಡುಗ, ಚಂದ್ರಕಲಾ, ವೈಷ್ಣವಿ, ಶುಭಾ ಪೂಂಜಾ, ಪ್ರಶಾಂತ್​ ಸಂಬರಗಿ, ರಾಜೀವ್​, ಮಂಜು ಪಾವಗಡ, ವಿಶ್ವ, ರಘು ಗೌಡ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​ ಡೇಂಜರ್​ ಜೋನ್​ನಲ್ಲಿದ್ದರು.

ಮಂಜು ಪಾವಗಡ. ದಿವ್ಯಾ ಉರುಡುಗ, ಶುಭಾ, ನಿಧಿ, ವೈಷ್ಣವಿ, ದಿವ್ಯಾ ಸುರೇಶ್, ರಘು, ರಾಜೀವ್​ ಶನಿವಾರವೇ ಸೇಫ್​ ಆಗಿದ್ದರು. ಭಾನುವಾರ ಪ್ರಶಾಂತ್​ ಸಂಬರಗಿ, ವಿಶ್ವ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​ ಸೇಫ್​ ಆದರು, ನಂತರ ಚಂದ್ರಕಲಾ ಬಿಗ್​ ಬಾಸ್​ ಮನೆಯಿಂದ ಹೊರ ಬಂದರು.

ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಚಂದ್ರಕಲಾ ಮೋಹನ್​ ಈ ಬಾರಿ ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಎರಡನೇ ಹಿರಿಯ ಸ್ಪರ್ಧಿ ಆಗಿದ್ದರು. ಚಂದ್ರಕಲಾ ಯಾರ ಜತೆಯೂ ಬೆರೆಯುತ್ತಿರಲಿಲ್ಲ. ಹೀಗಾಗಿ, ಅವರು ಮನೆಯವರ ಜತೆ ಹೆಚ್ಚು ಕನೆಕ್ಟ್​ ಆಗಿಲ್ಲ. ಈ ಕಾರಣಕ್ಕೆ ಅವರಿಗೆ ಕಡಿಮೆ ಮತ ಬಿದ್ದಿದೆ.

ಇದನ್ನೂ ಓದಿ: Bigg Boss Elimination: ಬಿಗ್​ ಬಾಸ್​ನಿಂದ ಹೊರಬಿದ್ದ ಚಂದ್ರಕಲಾ ಮೋಹನ್​? ಎಲಿಮಿನೇಷನ್​ಗೆ ಆ ಒಂದು ವರ್ತನೆಯೇ ಕಾರಣ

Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ