AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8 Elimination: ಬಿಗ್​ ಬಾಸ್​ ಮನೆಯಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್​

ಎಲಿಮಿನೆಷನ್​ಗೆ ನಾಮಿನೇಟ್​ ಮಾಡಲು ಪ್ರತಿ ಬಾರಿ ಸ್ಪರ್ಧಿಗಳಿಗೆ ಅವಕಾಶ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಈ ಅವಕಾಶವನ್ನು ಬಿಗ್​ ಬಾಸ್​ ಕಿತ್ತುಕೊಂಡಿದ್ದರು.

BBK8 Elimination: ಬಿಗ್​ ಬಾಸ್​ ಮನೆಯಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್​
ಚಂದ್ರಕಲಾ ಮೋಹನ್​
ರಾಜೇಶ್ ದುಗ್ಗುಮನೆ
|

Updated on: Mar 28, 2021 | 10:10 PM

Share

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕನೇ ವಾರದ ಎಲಿಮಿನೇಷನ್​ ಪೂರ್ಣಗೊಂಡಿದೆ. ಮನೆಯಲ್ಲಿರುವ 14 ಸದಸ್ಯರ ಪೈಕಿ 13 ಜನ ಎಲಿಮಿನೇಷ ಆಗಿದ್ದರು. ಈ ಪೈಕಿ ಚಂದ್ರಕಲಾ ಮೋಹನ್ ಎಲಿಮಿನೇಟ್​ ಆಗಿದ್ದಾರೆ. ಈ ಮೂಲಕ ನಾಲ್ಕನೇ ಸ್ಪರ್ಧಿಯಾಗಿ ಅವರು ಬಿಗ್​ ಬಾಸ್​ ಮನೆಯಿಂದ ಹೊರ ನಡೆದಿದ್ದಾರೆ. 

ಎಲಿಮಿನೆಷನ್​ಗೆ ನಾಮಿನೇಟ್​ ಮಾಡಲು ಪ್ರತಿ ಬಾರಿ ಸ್ಪರ್ಧಿಗಳಿಗೆ ಅವಕಾಶ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಈ ಅವಕಾಶವನ್ನು ಬಿಗ್​ ಬಾಸ್​ ಕಿತ್ತುಕೊಂಡಿದ್ದರು. ಕ್ಯಾಪ್ಟನ್​ ಆಗಿದ್ದ ಅರವಿಂದ್ ಕೆ.ಪಿ. ಅವರನ್ನು ಹೊರತುಪಡಿಸಿ ಉಳಿದ 13 ಸ್ಪರ್ಧಿಗಳು ನೇರವಾಗಿ ನಾಮಿನೇಟ್​ ಆಗಿದ್ದರು. ನಿಧಿ ಸುಬ್ಬಯ್ಯ, ದಿವ್ಯಾ ಸುರೇಶ್​, ದಿವ್ಯಾ ಉರುಡುಗ, ಚಂದ್ರಕಲಾ, ವೈಷ್ಣವಿ, ಶುಭಾ ಪೂಂಜಾ, ಪ್ರಶಾಂತ್​ ಸಂಬರಗಿ, ರಾಜೀವ್​, ಮಂಜು ಪಾವಗಡ, ವಿಶ್ವ, ರಘು ಗೌಡ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​ ಡೇಂಜರ್​ ಜೋನ್​ನಲ್ಲಿದ್ದರು.

ಮಂಜು ಪಾವಗಡ. ದಿವ್ಯಾ ಉರುಡುಗ, ಶುಭಾ, ನಿಧಿ, ವೈಷ್ಣವಿ, ದಿವ್ಯಾ ಸುರೇಶ್, ರಘು, ರಾಜೀವ್​ ಶನಿವಾರವೇ ಸೇಫ್​ ಆಗಿದ್ದರು. ಭಾನುವಾರ ಪ್ರಶಾಂತ್​ ಸಂಬರಗಿ, ವಿಶ್ವ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​ ಸೇಫ್​ ಆದರು, ನಂತರ ಚಂದ್ರಕಲಾ ಬಿಗ್​ ಬಾಸ್​ ಮನೆಯಿಂದ ಹೊರ ಬಂದರು.

ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಚಂದ್ರಕಲಾ ಮೋಹನ್​ ಈ ಬಾರಿ ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಎರಡನೇ ಹಿರಿಯ ಸ್ಪರ್ಧಿ ಆಗಿದ್ದರು. ಚಂದ್ರಕಲಾ ಯಾರ ಜತೆಯೂ ಬೆರೆಯುತ್ತಿರಲಿಲ್ಲ. ಹೀಗಾಗಿ, ಅವರು ಮನೆಯವರ ಜತೆ ಹೆಚ್ಚು ಕನೆಕ್ಟ್​ ಆಗಿಲ್ಲ. ಈ ಕಾರಣಕ್ಕೆ ಅವರಿಗೆ ಕಡಿಮೆ ಮತ ಬಿದ್ದಿದೆ.

ಇದನ್ನೂ ಓದಿ: Bigg Boss Elimination: ಬಿಗ್​ ಬಾಸ್​ನಿಂದ ಹೊರಬಿದ್ದ ಚಂದ್ರಕಲಾ ಮೋಹನ್​? ಎಲಿಮಿನೇಷನ್​ಗೆ ಆ ಒಂದು ವರ್ತನೆಯೇ ಕಾರಣ

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು