AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

ಈ ವಾರ ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ಅರವಿಂದ್ ಕೆಪಿ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​, ಪ್ರಶಾಂತ್​ ಸಂಬರಗಿ ನಾಮಿನೇಟ್​ ಲಿಸ್ಟ್​ನಲ್ಲಿದ್ದಾರೆ.

ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ
ಸುದೀಪ್​
ರಾಜೇಶ್ ದುಗ್ಗುಮನೆ
|

Updated on:Apr 04, 2021 | 6:06 PM

Share

ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಓರ್ವ ಸದಸ್ಯ ಹೊರ ಹೋಗುವ ಸಮಯ ಸಮೀಪಿಸಿದೆ. ಭಾನುವಾರ (ಏಪ್ರಿಲ್ 4) ನಡೆಯುವ ಎಲಿಮಿನೇಷನ್​ನಲ್ಲಿ 14 ಸದಸ್ಯರ ಪೈಕಿ ಒಬ್ಬರ ಜರ್ನಿ ಅಂತ್ಯವಾಗಲಿದೆ. ಹಾಗಾದರೆ, ಈ ವಾರ ಯಾರು ಮನೆಯಿಂದ ಎಲಿಮಿನೇಟ್​ ಆಗುತ್ತಾರೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ಮನೆಯ ಹಿರಿಯ ಸ್ಪರ್ಧಿ ಶಂಕರ್​ ಅಶ್ವತ್ಥ್​ಗೆ ಅತಿ ಹೆಚ್ಚು ಮತಗಳು ಬೀಳುವ ಮೂಲಕ ಅವರು ಮೊದಲು ನಾಮಿನೇಟ್​ ಆಗಿದ್ದರು. ಅವರು ಅಷ್ಟಾಗಿ ಮಾತನಾಡುತ್ತಿಲ್ಲ, ಟಾಸ್ಕ್​ ಚೆನ್ನಾಗಿ ಆಡ್ತಾರೆ ಆದರೆ, ಜಾಸ್ತಿ ಬೆರೆಯುವುದಿಲ್ಲ, ನಾಟಕ ಮಾಡುತ್ತಾರೆ, ಅವರ ಆರೋಗ್ಯ ಸರಿಯಿಲ್ಲ ಎನ್ನುವ ಕಾರಣ ನೀಡಿ ಮನೆ ಮಂದಿ ಅವರ ಹೆಸರನ್ನು ತೆಗೆದುಕೊಂಡಿದ್ದರು. ಶಮಂತ್​ ಕೂಡ ಈ ವಾರ ನಾಮಿನೇಟ್​ ಆಗಿದ್ದರು. ಅವರು ಎಲ್ಲರೊಡನೆ ಬೆರೆಯುತ್ತಿಲ್ಲ ಎನ್ನುವ ಆರೋಪವನ್ನು ಮಾಡಿದರು. ಪ್ರಶಾಂತ್​ ಸಂಬರಗಿ ಎಲ್ಲರ ಜತೆ ಮನಸ್ತಾಪ ಮಾಡಿಕೊಳ್ಳುತ್ತಾರೆ, ಅವರು ಕೆಲಸ ಮಾಡುವುದಿಲ್ಲ, ಬಿಗ್​ ಬಾಸ್​ ಮನೆಗೆ ಮುಳ್ಳು ಎನ್ನುವ ಆರೋಪವನ್ನು ಮನೆ ಮಂದಿ ಮಾಡಿದ್ದರು. ಮನೆಯ ಸ್ಟ್ರಾಂಗ್​ ಕಂಟೆಸ್ಟೆಂಟ್​ ಎನಿಸಿರುವ ಅರವಿಂದ್​ ಕೆಪಿ ಮೇಲೂ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ನಿಧಿ ಸುಬ್ಬಯ್ಯ, ಶುಭಾ ಪೂಂಜಾ ಕೂಡ ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದಾರೆ.

ಹೀಗಾಗಿ ಈ ವಾರ ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ಅರವಿಂದ್ ಕೆಪಿ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​, ಪ್ರಶಾಂತ್​ ಸಂಬರಗಿ ನಾಮಿನೇಟ್​ ಲಿಸ್ಟ್​ನಲ್ಲಿದ್ದಾರೆ. ಪ್ರಶಾಂತ್​ ಸಂಬರಗಿ, ಅರವಿಂದ್ ಕೆಪಿ ಮನೆಯಲ್ಲಿರುವ ಸ್ಟ್ರಾಂಗ್ ಕಂಟೆಸ್ಟೆಂಟ್​ಗಳು. ಇವರು ಆಟದಲ್ಲಿ ನೂರಕ್ಕೆ ನೂರು ಪರ್ಸೆಂಟ್ ಎಫರ್ಟ್​ ಹಾಕುತ್ತಿದ್ದಾರೆ. ಶುಭಾ, ನಿಧಿ ಕೂಡ ಮನೆಯಲ್ಲಿ ಒಳ್ಳೆಯ ಟಿಆರ್​ಪಿ ಹೊಂದಿದ್ದಾರೆ. ಹೀಗಾಗಿ ಈ ನಾಲ್ವರು ಸೇಫ್​ ಆಗೋದು ಬಹುತೇಕ ಖಚಿತ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ.

ಇನ್ನು ಉಳಿದವರು ಶಮಂತ್​ ಹಾಗೂ ಶಂಕರ್​ ಅಶ್ವತ್ಥ್​. ಈ ಬಾರಿ ಇಬ್ಬರೂ ಟಾಸ್ಕ್​ಗಳಲ್ಲಿ ಅಷ್ಟಾಗಿ ಉತ್ತಮ ಕಾಂಪಿಟೇಷನ್​ ನೀಡಿಲ್ಲ. ಶಂಕರ್​ ಅಶ್ವತ್ಥ್​ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಅವರದೇ ತಂಡದವರು ಬೇಸರ ಹೊರ ಹಾಕಿದ್ದರು. ಹೀಗಾಗಿ, ಈ ವಾರ ಶಮಂತ್​ ಜಸ್ಟ್​ ಸೇಫ್​ ಆಗಿದ್ದು, ಶಂಕರ್​ ಮನೆಯಿಂದ ಹೊರ ನಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Bigg Boss Kannada: ದಿವ್ಯಾ ಎದುರಲ್ಲೇ ಕಳಚಿತು ಬಿಗ್ ಬಾಸ್ ಸ್ಪರ್ಧಿಗಳ ಮುಖವಾಡ! ಇವರೆಲ್ಲ ಮಾಡಿದ್ದು ಸರಿಯೇ?

ವೈಲ್ಡ್​ ಕಾರ್ಡ್​ ಎಂಟ್ರಿ ಬೇಡ; ಬಿಗ್​ ಬಾಸ್​ ಮನೆಯಲ್ಲಿ ಹೊಸ ಬೇಡಿಕೆ ಇಟ್ಟ ಸ್ಪರ್ಧಿಗಳು

Published On - 3:19 pm, Sat, 3 April 21

ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ