AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

ಈ ವಾರ ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ಅರವಿಂದ್ ಕೆಪಿ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​, ಪ್ರಶಾಂತ್​ ಸಂಬರಗಿ ನಾಮಿನೇಟ್​ ಲಿಸ್ಟ್​ನಲ್ಲಿದ್ದಾರೆ.

ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ
ಸುದೀಪ್​
ರಾಜೇಶ್ ದುಗ್ಗುಮನೆ
|

Updated on:Apr 04, 2021 | 6:06 PM

Share

ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಓರ್ವ ಸದಸ್ಯ ಹೊರ ಹೋಗುವ ಸಮಯ ಸಮೀಪಿಸಿದೆ. ಭಾನುವಾರ (ಏಪ್ರಿಲ್ 4) ನಡೆಯುವ ಎಲಿಮಿನೇಷನ್​ನಲ್ಲಿ 14 ಸದಸ್ಯರ ಪೈಕಿ ಒಬ್ಬರ ಜರ್ನಿ ಅಂತ್ಯವಾಗಲಿದೆ. ಹಾಗಾದರೆ, ಈ ವಾರ ಯಾರು ಮನೆಯಿಂದ ಎಲಿಮಿನೇಟ್​ ಆಗುತ್ತಾರೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ಮನೆಯ ಹಿರಿಯ ಸ್ಪರ್ಧಿ ಶಂಕರ್​ ಅಶ್ವತ್ಥ್​ಗೆ ಅತಿ ಹೆಚ್ಚು ಮತಗಳು ಬೀಳುವ ಮೂಲಕ ಅವರು ಮೊದಲು ನಾಮಿನೇಟ್​ ಆಗಿದ್ದರು. ಅವರು ಅಷ್ಟಾಗಿ ಮಾತನಾಡುತ್ತಿಲ್ಲ, ಟಾಸ್ಕ್​ ಚೆನ್ನಾಗಿ ಆಡ್ತಾರೆ ಆದರೆ, ಜಾಸ್ತಿ ಬೆರೆಯುವುದಿಲ್ಲ, ನಾಟಕ ಮಾಡುತ್ತಾರೆ, ಅವರ ಆರೋಗ್ಯ ಸರಿಯಿಲ್ಲ ಎನ್ನುವ ಕಾರಣ ನೀಡಿ ಮನೆ ಮಂದಿ ಅವರ ಹೆಸರನ್ನು ತೆಗೆದುಕೊಂಡಿದ್ದರು. ಶಮಂತ್​ ಕೂಡ ಈ ವಾರ ನಾಮಿನೇಟ್​ ಆಗಿದ್ದರು. ಅವರು ಎಲ್ಲರೊಡನೆ ಬೆರೆಯುತ್ತಿಲ್ಲ ಎನ್ನುವ ಆರೋಪವನ್ನು ಮಾಡಿದರು. ಪ್ರಶಾಂತ್​ ಸಂಬರಗಿ ಎಲ್ಲರ ಜತೆ ಮನಸ್ತಾಪ ಮಾಡಿಕೊಳ್ಳುತ್ತಾರೆ, ಅವರು ಕೆಲಸ ಮಾಡುವುದಿಲ್ಲ, ಬಿಗ್​ ಬಾಸ್​ ಮನೆಗೆ ಮುಳ್ಳು ಎನ್ನುವ ಆರೋಪವನ್ನು ಮನೆ ಮಂದಿ ಮಾಡಿದ್ದರು. ಮನೆಯ ಸ್ಟ್ರಾಂಗ್​ ಕಂಟೆಸ್ಟೆಂಟ್​ ಎನಿಸಿರುವ ಅರವಿಂದ್​ ಕೆಪಿ ಮೇಲೂ ಎಲಿಮಿನೇಷನ್​ ತೂಗುಗತ್ತಿ ತೂಗುತ್ತಿದೆ. ನಿಧಿ ಸುಬ್ಬಯ್ಯ, ಶುಭಾ ಪೂಂಜಾ ಕೂಡ ಬಿಗ್​ ಬಾಸ್​ ಮನೆಯಲ್ಲಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದಾರೆ.

ಹೀಗಾಗಿ ಈ ವಾರ ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ಅರವಿಂದ್ ಕೆಪಿ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​, ಪ್ರಶಾಂತ್​ ಸಂಬರಗಿ ನಾಮಿನೇಟ್​ ಲಿಸ್ಟ್​ನಲ್ಲಿದ್ದಾರೆ. ಪ್ರಶಾಂತ್​ ಸಂಬರಗಿ, ಅರವಿಂದ್ ಕೆಪಿ ಮನೆಯಲ್ಲಿರುವ ಸ್ಟ್ರಾಂಗ್ ಕಂಟೆಸ್ಟೆಂಟ್​ಗಳು. ಇವರು ಆಟದಲ್ಲಿ ನೂರಕ್ಕೆ ನೂರು ಪರ್ಸೆಂಟ್ ಎಫರ್ಟ್​ ಹಾಕುತ್ತಿದ್ದಾರೆ. ಶುಭಾ, ನಿಧಿ ಕೂಡ ಮನೆಯಲ್ಲಿ ಒಳ್ಳೆಯ ಟಿಆರ್​ಪಿ ಹೊಂದಿದ್ದಾರೆ. ಹೀಗಾಗಿ ಈ ನಾಲ್ವರು ಸೇಫ್​ ಆಗೋದು ಬಹುತೇಕ ಖಚಿತ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ.

ಇನ್ನು ಉಳಿದವರು ಶಮಂತ್​ ಹಾಗೂ ಶಂಕರ್​ ಅಶ್ವತ್ಥ್​. ಈ ಬಾರಿ ಇಬ್ಬರೂ ಟಾಸ್ಕ್​ಗಳಲ್ಲಿ ಅಷ್ಟಾಗಿ ಉತ್ತಮ ಕಾಂಪಿಟೇಷನ್​ ನೀಡಿಲ್ಲ. ಶಂಕರ್​ ಅಶ್ವತ್ಥ್​ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಅವರದೇ ತಂಡದವರು ಬೇಸರ ಹೊರ ಹಾಕಿದ್ದರು. ಹೀಗಾಗಿ, ಈ ವಾರ ಶಮಂತ್​ ಜಸ್ಟ್​ ಸೇಫ್​ ಆಗಿದ್ದು, ಶಂಕರ್​ ಮನೆಯಿಂದ ಹೊರ ನಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Bigg Boss Kannada: ದಿವ್ಯಾ ಎದುರಲ್ಲೇ ಕಳಚಿತು ಬಿಗ್ ಬಾಸ್ ಸ್ಪರ್ಧಿಗಳ ಮುಖವಾಡ! ಇವರೆಲ್ಲ ಮಾಡಿದ್ದು ಸರಿಯೇ?

ವೈಲ್ಡ್​ ಕಾರ್ಡ್​ ಎಂಟ್ರಿ ಬೇಡ; ಬಿಗ್​ ಬಾಸ್​ ಮನೆಯಲ್ಲಿ ಹೊಸ ಬೇಡಿಕೆ ಇಟ್ಟ ಸ್ಪರ್ಧಿಗಳು

Published On - 3:19 pm, Sat, 3 April 21

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ